<p><strong>ನವದೆಹಲಿ:</strong> ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತೀರ್ಪನ್ನು ದೆಹಲಿ ಹೈಕೋರ್ಟ್ ಫೆಬ್ರವರಿ 27ರಂದು ಪ್ರಕಟಿಸುವ ನಿರೀಕ್ಷೆ ಇದೆ. </p>.<p>ಮುಖ್ಯನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಅವರಿದ್ದ ಪೀಠವು 2022ರ ಡಿಸೆಂಬರ್ 15 ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು.</p>.<p>ದೆಹಲಿ ಹೈಕೋರ್ಟ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿರುವ ಕಾರಣ ಪಟ್ಟಿಯ ಪ್ರಕಾರ, ಪ್ರಕರಣದ ತೀರ್ಪು ಫೆಬ್ರವರಿ 27ರ ಸೋಮವಾರ ಬೆಳಿಗ್ಗೆ 10.30ಕ್ಕೆ ಪ್ರಕಟವಾಗಲಿದೆ.</p>.<p>ಹದಿನೇಳುವರೆ ವರ್ಷದಿಂದ 21 ವರ್ಷದ ವರೆಗಿನ ಯುವಕರನ್ನು 4 ವರ್ಷದ ಮಟ್ಟಿಗೆ ಸಶಸ್ತ್ರ ಪಡೆಗಳಿಗೆ ನೇಮಕ ಮಾಡುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಜೂನ್ 14 ರಂದು ಜಾರಿಗೆ ತಂದಿತ್ತು. ಇದು ಸೇನೆಗೆ ಸೇರುವ ಆಕಾಂಕ್ಷಿಗಳ ಪ್ರತಿಭಟನೆಗೂ ಕಾರಣವಾಗಿತ್ತು.</p>.<p>ಇದಾದ ಬಳಿಕ ಗರಿಷ್ಠ ವಯೋಮಾನವನ್ನು ಸರ್ಕಾರ 23ಕ್ಕೆ ಏರಿಕೆ ಮಾಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತೀರ್ಪನ್ನು ದೆಹಲಿ ಹೈಕೋರ್ಟ್ ಫೆಬ್ರವರಿ 27ರಂದು ಪ್ರಕಟಿಸುವ ನಿರೀಕ್ಷೆ ಇದೆ. </p>.<p>ಮುಖ್ಯನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಅವರಿದ್ದ ಪೀಠವು 2022ರ ಡಿಸೆಂಬರ್ 15 ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು.</p>.<p>ದೆಹಲಿ ಹೈಕೋರ್ಟ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿರುವ ಕಾರಣ ಪಟ್ಟಿಯ ಪ್ರಕಾರ, ಪ್ರಕರಣದ ತೀರ್ಪು ಫೆಬ್ರವರಿ 27ರ ಸೋಮವಾರ ಬೆಳಿಗ್ಗೆ 10.30ಕ್ಕೆ ಪ್ರಕಟವಾಗಲಿದೆ.</p>.<p>ಹದಿನೇಳುವರೆ ವರ್ಷದಿಂದ 21 ವರ್ಷದ ವರೆಗಿನ ಯುವಕರನ್ನು 4 ವರ್ಷದ ಮಟ್ಟಿಗೆ ಸಶಸ್ತ್ರ ಪಡೆಗಳಿಗೆ ನೇಮಕ ಮಾಡುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಜೂನ್ 14 ರಂದು ಜಾರಿಗೆ ತಂದಿತ್ತು. ಇದು ಸೇನೆಗೆ ಸೇರುವ ಆಕಾಂಕ್ಷಿಗಳ ಪ್ರತಿಭಟನೆಗೂ ಕಾರಣವಾಗಿತ್ತು.</p>.<p>ಇದಾದ ಬಳಿಕ ಗರಿಷ್ಠ ವಯೋಮಾನವನ್ನು ಸರ್ಕಾರ 23ಕ್ಕೆ ಏರಿಕೆ ಮಾಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>