ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲಿನ ಹಲ್ಲೆಗೆ ಸಂಬಂಧಿಸಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ಬಿಜೆಪಿ ಕಚೇರಿಗೆ ಶುಕ್ರವಾರ ಹೋಗಿದ್ದ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಲಾಗಿತ್ತು.
ವಿಠಲ್ ರಾವ್ ಎಂಬವರು ಅಗ್ನಿವೇಶ್ ಪರವಾಗಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿದವರು ಬಿಜೆಪಿ ಕಾರ್ಯಕರ್ತರು ಎಂದು ಅಗ್ನಿವೇಶ್ ಅವರು ಶುಕ್ರವಾರವೇ ಆರೋಪಿಸಿದ್ದರು.
ಅಗ್ನಿವೇಶ್ ಅವರಿಗೆ ಭದ್ರತೆ ಒದಗಿಸಬೇಕು ಎಂದು ರಾವ್ ಅವರು ತಮ್ಮ ದೂರಿನಲ್ಲಿ ಕೋರಿದ್ದಾರೆ. ಜಾರ್ಖಂಡ್ನ ಪಕುರ್ಗೆ ಸ್ವಾಮಿ ಅಗ್ನಿವೇಶ್ ಅವರು ಭೇಟಿ ನೀಡಿದ್ದಾಗಲೂ ಅವರ ಮೇಲೆ ಹಲ್ಲೆ ಆಗಿತ್ತು.