ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿವೇಶ್‌ ಮೇಲೆ ಹಲ್ಲೆ: ದೂರು ದಾಖಲು

Last Updated 19 ಆಗಸ್ಟ್ 2018, 18:10 IST
ಅಕ್ಷರ ಗಾತ್ರ

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್‌ ಮೇಲಿನ ಹಲ್ಲೆಗೆ ಸಂಬಂಧಿಸಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ಬಿಜೆಪಿ ಕಚೇರಿಗೆ ಶುಕ್ರವಾರ ಹೋಗಿದ್ದ ಅಗ್ನಿವೇಶ್‌ ಮೇಲೆ ಹಲ್ಲೆ ನಡೆಸಲಾಗಿತ್ತು.

ವಿಠಲ್‌ ರಾವ್‌ ಎಂಬವರು ಅಗ್ನಿವೇಶ್‌ ಪರವಾಗಿ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿದವರು ಬಿಜೆಪಿ ಕಾರ್ಯಕರ್ತರು ಎಂದು ಅಗ್ನಿವೇಶ್‌ ಅವರು ಶುಕ್ರವಾರವೇ ಆರೋಪಿಸಿದ್ದರು.

ಪ್ರಕರಣವನ್ನು ಐಪಿ ಎಸ್ಟೇಟ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಅಗ್ನಿವೇಶ್‌ ಅವರಿಗೆ ಭದ್ರತೆ ಒದಗಿಸಬೇಕು ಎಂದು ರಾವ್‌ ಅವರು ತಮ್ಮ ದೂರಿನಲ್ಲಿ ಕೋರಿದ್ದಾರೆ. ಜಾರ್ಖಂಡ್‌ನ ಪಕುರ್‌ಗೆ ಸ್ವಾಮಿ ಅಗ್ನಿವೇಶ್‌ ಅವರು ಭೇಟಿ ನೀಡಿದ್ದಾಗಲೂ ಅವರ ಮೇಲೆ ಹಲ್ಲೆ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT