<p><strong>ನವದೆಹಲಿ (ಪಿಟಿಐ):</strong> ಬಜೆಟ್ ಅಂಗವಾಗಿ ಶನಿವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ವರ್ಚುವಲ್ ಸಭೆಯ ಮೂಲಕ ಕೃಷಿ ಯೋಜನೆಗಳ ಬಗ್ಗೆ ಪರಾಮರ್ಶೆ ನಡೆಸಿದರು.</p>.<p>ಹಾಲಿ ಇರುವ ಯೋಜನೆಗಳು ಮತ್ತು ಬಜೆಟ್ನಲ್ಲಿ ಕೃಷಿಗೆ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರಿಂದ ಸಲಹೆ ಪಡೆದರು.</p>.<p>ಸರ್ಕಾರವು ಕೃಷಿ ವಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಆರು ಅಂಶಗಳ ಕಾರ್ಯತಂತ್ರ ರೂಪಿಸಿದೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ (ಐಸಿಎಆರ್) ಹೊಸ ತಳಿ ಬೀಜಗಳನ್ನು ಅಭಿವೃದ್ಧಿಪಡಿಸಿದೆ. ಇವುಗಳ ಬಳಕೆ ಮೂಲಕ ಹೆಕ್ಟೇರ್ವಾರು ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಳಕ್ಕೆ ಕ್ರಮವಹಿಸಲಿದೆ ಎಂದು ಹೇಳಿದರು.</p>.<p>ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಸೂಕ್ಷ್ಮ ನೀರಾವರಿ, ಹೊಸ ತಂತ್ರಜ್ಞಾನ ಮತ್ತು ಕೃಷಿ ವಿಧಾನ ಅಳವಡಿಕೆಗೆ ಮುಂದಾಗಿದೆ ಎಂದರು.</p>.<p>ಪಿಎಂ–ಕಿಸಾನ್, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಡಿಎಪಿ ರಸಗೊಬ್ಬರಕ್ಕೆ ಸಬ್ಸಿಡಿ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಬಜೆಟ್ ಅಂಗವಾಗಿ ಶನಿವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ವರ್ಚುವಲ್ ಸಭೆಯ ಮೂಲಕ ಕೃಷಿ ಯೋಜನೆಗಳ ಬಗ್ಗೆ ಪರಾಮರ್ಶೆ ನಡೆಸಿದರು.</p>.<p>ಹಾಲಿ ಇರುವ ಯೋಜನೆಗಳು ಮತ್ತು ಬಜೆಟ್ನಲ್ಲಿ ಕೃಷಿಗೆ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರಿಂದ ಸಲಹೆ ಪಡೆದರು.</p>.<p>ಸರ್ಕಾರವು ಕೃಷಿ ವಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಆರು ಅಂಶಗಳ ಕಾರ್ಯತಂತ್ರ ರೂಪಿಸಿದೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ (ಐಸಿಎಆರ್) ಹೊಸ ತಳಿ ಬೀಜಗಳನ್ನು ಅಭಿವೃದ್ಧಿಪಡಿಸಿದೆ. ಇವುಗಳ ಬಳಕೆ ಮೂಲಕ ಹೆಕ್ಟೇರ್ವಾರು ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಳಕ್ಕೆ ಕ್ರಮವಹಿಸಲಿದೆ ಎಂದು ಹೇಳಿದರು.</p>.<p>ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಸೂಕ್ಷ್ಮ ನೀರಾವರಿ, ಹೊಸ ತಂತ್ರಜ್ಞಾನ ಮತ್ತು ಕೃಷಿ ವಿಧಾನ ಅಳವಡಿಕೆಗೆ ಮುಂದಾಗಿದೆ ಎಂದರು.</p>.<p>ಪಿಎಂ–ಕಿಸಾನ್, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಡಿಎಪಿ ರಸಗೊಬ್ಬರಕ್ಕೆ ಸಬ್ಸಿಡಿ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>