<p><strong>ಮುಂಬೈ:</strong> ಕಾಂಗ್ರೆಸ್ ನಾಯಕಿ ಪ್ರಜ್ಞಾ ಸಾತವ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯ ಸ್ಥಾನಕ್ಕೆ ಇಂದು (ಗುರುವಾರ) ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿದ್ಡಾರೆ.</p>.<p>ಪ್ರಜ್ಞಾ ಸಾತವ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಪ್ತರಾಗಿದ್ದ ದಿ.ರಾಜೀವ್ ಸಾತವ್ ಅವರ ಪತ್ನಿ. ರಾಜ್ಯದ (ಮಹಾರಾಷ್ಟ್ರ) ಮರಾಠವಾಡ ಪ್ರದೇಶದ ಹಿಂಗೋಲಿ ಜಿಲ್ಲೆಯವರು. 2021ರಲ್ಲಿ ಅವರು ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.</p>.<p>ಪತಿಯ ನಿಧನದ (2021) ನಂತರ, ಪ್ರಜ್ಞಾ ಅವರು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವರ್ಷದ ಜುಲೈನಲ್ಲಿ ಅವರನ್ನು ವಿಧಾನ ಪರಿಷತ್ಗೆ ಮರುನಾಮಕರಣ ಮಾಡಲಾಗಿತ್ತು. ಅವರ ಅಧಿಕಾರವಧಿ 2030ರಲ್ಲಿ ಕೊನೆಗೊಳ್ಳಬೇಕಿತ್ತು.</p>.<p>ವಿಧಾನ ಪರಿಷತ್ ಸಭಾಪತಿ ರಾಮ್ ಶಿಂಧೆ ಅವರನ್ನು ಭೇಟಿ ಮಾಡಿ, ಪ್ರಜ್ಞಾ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. </p>.<p>ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷದ ಮುಖ್ಯಸ್ಥ ರವೀಂದ್ರ ಚವಾಣ್ ಮತ್ತು ಕಂದಾಯ ಸಚಿವ ಚಂದ್ರಶೇಖರ್ ಬವಾಂಕುಲೆ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ. ಇವರ ಜೊತೆಗೆ, ಸೋಲಾಪುರ ಮಾಜಿ ಶಾಸಕ ದಿಲೀಪ್ ಮಾನೆ ಕೂಡ ಬಿಜೆಪಿಗೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸ್ಥಳೀಯ ಚುನಾವಣೆಗಳ ಮಧ್ಯೆ ಅವರ ಪಕ್ಷದಿಂದ ನಿರ್ಗಮನವು ಕಾಂಗ್ರೆಸ್ಗೆ ಹಿನ್ನಡೆ ಎಂದೇ ಪರಿಗಣಿಸಲಾಗುತ್ತಿದೆ. ರಾಜ್ಯದ(ಮಹಾರಾಷ್ಟ್ರ) 29 ಮಹಾನಗರ ಪಾಲಿಕೆಗಳಿಗೆ ಜನವರಿ 15 ರಂದು ಚುನಾವಣೆ ನಡೆಯಲಿದೆ. ಮರುದಿನ ಮತ ಎಣಿಕೆ ಕಾರ್ಯ ಜರುಗಲಿದೆ.</p>.ಕಾಂಗ್ರೆಸ್ ಸಂಸದ ರಾಜೀವ್ ಸಾತವ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಂಗ್ರೆಸ್ ನಾಯಕಿ ಪ್ರಜ್ಞಾ ಸಾತವ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯ ಸ್ಥಾನಕ್ಕೆ ಇಂದು (ಗುರುವಾರ) ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿದ್ಡಾರೆ.</p>.<p>ಪ್ರಜ್ಞಾ ಸಾತವ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಪ್ತರಾಗಿದ್ದ ದಿ.ರಾಜೀವ್ ಸಾತವ್ ಅವರ ಪತ್ನಿ. ರಾಜ್ಯದ (ಮಹಾರಾಷ್ಟ್ರ) ಮರಾಠವಾಡ ಪ್ರದೇಶದ ಹಿಂಗೋಲಿ ಜಿಲ್ಲೆಯವರು. 2021ರಲ್ಲಿ ಅವರು ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.</p>.<p>ಪತಿಯ ನಿಧನದ (2021) ನಂತರ, ಪ್ರಜ್ಞಾ ಅವರು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವರ್ಷದ ಜುಲೈನಲ್ಲಿ ಅವರನ್ನು ವಿಧಾನ ಪರಿಷತ್ಗೆ ಮರುನಾಮಕರಣ ಮಾಡಲಾಗಿತ್ತು. ಅವರ ಅಧಿಕಾರವಧಿ 2030ರಲ್ಲಿ ಕೊನೆಗೊಳ್ಳಬೇಕಿತ್ತು.</p>.<p>ವಿಧಾನ ಪರಿಷತ್ ಸಭಾಪತಿ ರಾಮ್ ಶಿಂಧೆ ಅವರನ್ನು ಭೇಟಿ ಮಾಡಿ, ಪ್ರಜ್ಞಾ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. </p>.<p>ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷದ ಮುಖ್ಯಸ್ಥ ರವೀಂದ್ರ ಚವಾಣ್ ಮತ್ತು ಕಂದಾಯ ಸಚಿವ ಚಂದ್ರಶೇಖರ್ ಬವಾಂಕುಲೆ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ. ಇವರ ಜೊತೆಗೆ, ಸೋಲಾಪುರ ಮಾಜಿ ಶಾಸಕ ದಿಲೀಪ್ ಮಾನೆ ಕೂಡ ಬಿಜೆಪಿಗೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸ್ಥಳೀಯ ಚುನಾವಣೆಗಳ ಮಧ್ಯೆ ಅವರ ಪಕ್ಷದಿಂದ ನಿರ್ಗಮನವು ಕಾಂಗ್ರೆಸ್ಗೆ ಹಿನ್ನಡೆ ಎಂದೇ ಪರಿಗಣಿಸಲಾಗುತ್ತಿದೆ. ರಾಜ್ಯದ(ಮಹಾರಾಷ್ಟ್ರ) 29 ಮಹಾನಗರ ಪಾಲಿಕೆಗಳಿಗೆ ಜನವರಿ 15 ರಂದು ಚುನಾವಣೆ ನಡೆಯಲಿದೆ. ಮರುದಿನ ಮತ ಎಣಿಕೆ ಕಾರ್ಯ ಜರುಗಲಿದೆ.</p>.ಕಾಂಗ್ರೆಸ್ ಸಂಸದ ರಾಜೀವ್ ಸಾತವ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>