<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನೊಂದು ವಾರ ಬಾಕಿಯಿದೆ. ಈ ನಡುವೆ ಎಎಪಿಯ ಏಳು ಜನ ಶಾಸಕರು ಪಕ್ಷ ತೊರೆದಿದ್ದಾರೆ.</p><p>ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾರಣ ಏಳು ಜನ ಅತೃಪ್ತ ಶಾಸಕರು ಇತರ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಬಹುತೇಕ ಶಾಸಕರು ಸಾಮಾಜಿಕ ಮಾಧ್ಯಮದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಹಂಚಿಕೊಂಡಿದ್ದು, ಎಎಪಿಯ ಭ್ರಷ್ಟಾಚಾರ ಸೇರಿದಂತೆ ಇತರ ವಿಚಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಕಸ್ತೂರ್ಬಾ ನಗರದ ಶಾಸಕ ಮದನ್ ಲಾಲ್, ‘ತಾವೂ ಸೇರಿ ಆರು ಶಾಸಕರು ಎಎಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಅವರಿಗೂ ನೀಡಿದ್ದೇವೆ’ ಎಂದು ಹೇಳಿದ್ದಾರೆ.</p><p>ಪಲಮ್ ಕ್ಷೇತ್ರದ ಭವನ ಗೌರ್, ಮೆಹರೌಲಿ ಕ್ಷೇತ್ರದ ನರೇಶ್ ಯಾದವ್, ತ್ರಿಲೋಕಪುರಿ ಕ್ಷೇತ್ರದ ರೋಹಿತ್ ಮೆಹ್ರುಲಿಯಾ ಮತ್ತು ಆದರ್ಶ್ನಗರ ಕ್ಷೇತ್ರದ ಪವನ್ ಶರ್ಮಾ ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಫೆ.5 ರಂದು ದೆಹಲಿಯ 70 ಮಂದಿ ಸದಸ್ಯ ಬಲದ ವಿಧಾನ ಸಭೆಗೆ ಚುನಾವಣೆ ನಡೆಯಲಿದ್ದು, ಫೆ.8 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನೊಂದು ವಾರ ಬಾಕಿಯಿದೆ. ಈ ನಡುವೆ ಎಎಪಿಯ ಏಳು ಜನ ಶಾಸಕರು ಪಕ್ಷ ತೊರೆದಿದ್ದಾರೆ.</p><p>ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾರಣ ಏಳು ಜನ ಅತೃಪ್ತ ಶಾಸಕರು ಇತರ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಬಹುತೇಕ ಶಾಸಕರು ಸಾಮಾಜಿಕ ಮಾಧ್ಯಮದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಹಂಚಿಕೊಂಡಿದ್ದು, ಎಎಪಿಯ ಭ್ರಷ್ಟಾಚಾರ ಸೇರಿದಂತೆ ಇತರ ವಿಚಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಕಸ್ತೂರ್ಬಾ ನಗರದ ಶಾಸಕ ಮದನ್ ಲಾಲ್, ‘ತಾವೂ ಸೇರಿ ಆರು ಶಾಸಕರು ಎಎಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಅವರಿಗೂ ನೀಡಿದ್ದೇವೆ’ ಎಂದು ಹೇಳಿದ್ದಾರೆ.</p><p>ಪಲಮ್ ಕ್ಷೇತ್ರದ ಭವನ ಗೌರ್, ಮೆಹರೌಲಿ ಕ್ಷೇತ್ರದ ನರೇಶ್ ಯಾದವ್, ತ್ರಿಲೋಕಪುರಿ ಕ್ಷೇತ್ರದ ರೋಹಿತ್ ಮೆಹ್ರುಲಿಯಾ ಮತ್ತು ಆದರ್ಶ್ನಗರ ಕ್ಷೇತ್ರದ ಪವನ್ ಶರ್ಮಾ ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಫೆ.5 ರಂದು ದೆಹಲಿಯ 70 ಮಂದಿ ಸದಸ್ಯ ಬಲದ ವಿಧಾನ ಸಭೆಗೆ ಚುನಾವಣೆ ನಡೆಯಲಿದ್ದು, ಫೆ.8 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>