<p><strong>ಪಟ್ನಾ:</strong> ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ರಾಜಕೀಯ ಪಕ್ಷಗಳ ನಡುವೆ ಕಾಳಗ ಶುರುವಾಗಿದೆ. ಆಡಳಿತಾರೂಢ ಎನ್ಡಿಎ ಹಾಗೂ ಪ್ರತಿಪಕ್ಷ ಆರ್ಜೆಡಿ ನಾಯಕರು ಆ್ಯನಿಮೇಷನ್ ವಿಡಿಯೊಗಳ ಮೂಲಕ ಒಬ್ಬರ ಮೇಲೊಬ್ಬರು ಟೀಕಾಪ್ರಹಾರ ನಡೆಸಿದ್ದಾರೆ. </p>.<p>ಜೆಡಿಯು ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವ್ಯಂಗ್ಯ ಮಾಡುವಂತಹ ಆ್ಯನಿಮೇಷನ್ ವಿಡಿಯೊವನ್ನು ಆರ್ಜೆಡಿ ಪಕ್ಷದ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ ನಿತೀಶ್ ಅವರನ್ನು ಉದ್ದೇಶಿಸಿ, ಪದೇ ಪದೇ ಮೈತ್ರಿ ಬದಲಿಸುವವರ ಮಾತುಗಳೆಲ್ಲವೂ ಅಸಂಬದ್ಧ ಎಂದು ಟೀಕಿಸಲಾಗಿದೆ. </p>.<p>ಇತ್ತ ಬಿಜೆಪಿ ಕೂಡ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪುತ್ರರಾದ ತೇಜಸ್ವಿ ಮತ್ತು ತೇಜ್ ಪ್ರತಾಪ್ ಯಾದವ್ ಅವರನ್ನು ಅಪಹಾಸ್ಯ ಮಾಡುವಂಥ ವಿಡಿಯೊಗಳನ್ನು ಅಪ್ಲೋಡ್ ಮಾಡಿದೆ. </p>.<p>ಲಾಲು, ತೇಜಸ್ವಿ ಮತ್ತು ತೇಜ್ ಪ್ರತಾಪ್ ಆಟೊವೊಂದರಲ್ಲಿ ಪ್ರಯಾಣಿಸುತ್ತಿದ್ದು, ಆಟೊ ಚಾಲಕ ಆ ಮೂವರಿಗೂ ಕಳೆದ 10 ವರ್ಷದಲ್ಲಿ ನಡೆದಿರುವ ಅಭಿವೃದ್ಧಿಯನ್ನು ತೋರಿಸಿದ ತಕ್ಷಣ ಮೂವರು ಮುಜುಗರಕ್ಕೊಳಗಾಗಿ ಆಟೊದಿಂದ ಕೆಳಗೆ ಇಳಿಯುವಂತೆ ವಿಡಿಯೊದಲ್ಲಿ ತೋರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ರಾಜಕೀಯ ಪಕ್ಷಗಳ ನಡುವೆ ಕಾಳಗ ಶುರುವಾಗಿದೆ. ಆಡಳಿತಾರೂಢ ಎನ್ಡಿಎ ಹಾಗೂ ಪ್ರತಿಪಕ್ಷ ಆರ್ಜೆಡಿ ನಾಯಕರು ಆ್ಯನಿಮೇಷನ್ ವಿಡಿಯೊಗಳ ಮೂಲಕ ಒಬ್ಬರ ಮೇಲೊಬ್ಬರು ಟೀಕಾಪ್ರಹಾರ ನಡೆಸಿದ್ದಾರೆ. </p>.<p>ಜೆಡಿಯು ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವ್ಯಂಗ್ಯ ಮಾಡುವಂತಹ ಆ್ಯನಿಮೇಷನ್ ವಿಡಿಯೊವನ್ನು ಆರ್ಜೆಡಿ ಪಕ್ಷದ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ ನಿತೀಶ್ ಅವರನ್ನು ಉದ್ದೇಶಿಸಿ, ಪದೇ ಪದೇ ಮೈತ್ರಿ ಬದಲಿಸುವವರ ಮಾತುಗಳೆಲ್ಲವೂ ಅಸಂಬದ್ಧ ಎಂದು ಟೀಕಿಸಲಾಗಿದೆ. </p>.<p>ಇತ್ತ ಬಿಜೆಪಿ ಕೂಡ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪುತ್ರರಾದ ತೇಜಸ್ವಿ ಮತ್ತು ತೇಜ್ ಪ್ರತಾಪ್ ಯಾದವ್ ಅವರನ್ನು ಅಪಹಾಸ್ಯ ಮಾಡುವಂಥ ವಿಡಿಯೊಗಳನ್ನು ಅಪ್ಲೋಡ್ ಮಾಡಿದೆ. </p>.<p>ಲಾಲು, ತೇಜಸ್ವಿ ಮತ್ತು ತೇಜ್ ಪ್ರತಾಪ್ ಆಟೊವೊಂದರಲ್ಲಿ ಪ್ರಯಾಣಿಸುತ್ತಿದ್ದು, ಆಟೊ ಚಾಲಕ ಆ ಮೂವರಿಗೂ ಕಳೆದ 10 ವರ್ಷದಲ್ಲಿ ನಡೆದಿರುವ ಅಭಿವೃದ್ಧಿಯನ್ನು ತೋರಿಸಿದ ತಕ್ಷಣ ಮೂವರು ಮುಜುಗರಕ್ಕೊಳಗಾಗಿ ಆಟೊದಿಂದ ಕೆಳಗೆ ಇಳಿಯುವಂತೆ ವಿಡಿಯೊದಲ್ಲಿ ತೋರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>