<p><strong>ನವದೆಹಲಿ</strong>: ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ ಮಹಾತ್ಮ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.</p>.<p>ಬಳಿಕ ಇಂಡಿಯಾ ಗೇಟ್ ಬಳಿ ಇರುವರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ಭೇಟಿ ನೀಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಹಲವು ಹಿರಿಯ ನಾಯಕರು ಸಹ ಮೋದಿ ಜತೆಗಿದ್ದರು.</p>.<p>ನಂತರ ಮೋದಿ ಸರಣಿ ಟ್ವೀಟ್ಗಳನ್ನು ಮಾಡಿದ್ದು,‘ಈ ವರ್ಷ ನಾವು ಬಾಪು ಅವರ 150ನೇ ಜಯಂತಿ ಆಚರಿಸುತ್ತಿದ್ದೇವೆ. ಅವರ ಉದಾತ್ತ ಆದರ್ಶಗಳು ಈ ವೇಳೆ ಮತ್ತಷ್ಟು ಪ್ರಚುರವಾಗಲಿ. ಬಡವರು, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ದುಡಿಯಲು ನಮಗೆ ಮತ್ತಷ್ಟು ಸ್ಫೂರ್ತಿ ನೀಡಲಿ’ ಎಂದು ಹೇಳಿದ್ದಾರೆ.</p>.<p>‘ಜನರಿಗೆ ಸೇವೆ ಸಲ್ಲಿಸಲುಬಿಜೆಪಿಗೆ ಇಷ್ಟು ದೊಡ್ಡ ಮಟ್ಟದ ಅವಕಾಶ ದೊರಕಿದ್ದನ್ನು ನೋಡಿದ್ದರೆ ವಾಜಪೇಯಿ ಹೆಚ್ಚು ಸಂತೋಷ ಪಡುತ್ತಿದ್ದರು. ಅಟಲ್ ಜೀ ಅವರ ಜೀವನ ಮತ್ತು ಕೆಲಸಗಳಿಂದ ಪ್ರೇರಣೆಗೊಂಡಿದ್ದೇವೆ. ಇನ್ನಷ್ಟು ಉತ್ತಮ ಆಡಳಿತ ನೀಡಲುಶ್ರಮಿಸುತ್ತೇವೆ’ ಎಂದು ಮೋದಿ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>**</p>.<p>ದೇಶದ ಏಕತೆ, ಸಾರ್ವಭೌಮತ್ವ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ. ಭದ್ರತೆ ನಮ್ಮ ಆದ್ಯತೆ<br />–<em><strong>ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ ಮಹಾತ್ಮ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.</p>.<p>ಬಳಿಕ ಇಂಡಿಯಾ ಗೇಟ್ ಬಳಿ ಇರುವರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ಭೇಟಿ ನೀಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಹಲವು ಹಿರಿಯ ನಾಯಕರು ಸಹ ಮೋದಿ ಜತೆಗಿದ್ದರು.</p>.<p>ನಂತರ ಮೋದಿ ಸರಣಿ ಟ್ವೀಟ್ಗಳನ್ನು ಮಾಡಿದ್ದು,‘ಈ ವರ್ಷ ನಾವು ಬಾಪು ಅವರ 150ನೇ ಜಯಂತಿ ಆಚರಿಸುತ್ತಿದ್ದೇವೆ. ಅವರ ಉದಾತ್ತ ಆದರ್ಶಗಳು ಈ ವೇಳೆ ಮತ್ತಷ್ಟು ಪ್ರಚುರವಾಗಲಿ. ಬಡವರು, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ದುಡಿಯಲು ನಮಗೆ ಮತ್ತಷ್ಟು ಸ್ಫೂರ್ತಿ ನೀಡಲಿ’ ಎಂದು ಹೇಳಿದ್ದಾರೆ.</p>.<p>‘ಜನರಿಗೆ ಸೇವೆ ಸಲ್ಲಿಸಲುಬಿಜೆಪಿಗೆ ಇಷ್ಟು ದೊಡ್ಡ ಮಟ್ಟದ ಅವಕಾಶ ದೊರಕಿದ್ದನ್ನು ನೋಡಿದ್ದರೆ ವಾಜಪೇಯಿ ಹೆಚ್ಚು ಸಂತೋಷ ಪಡುತ್ತಿದ್ದರು. ಅಟಲ್ ಜೀ ಅವರ ಜೀವನ ಮತ್ತು ಕೆಲಸಗಳಿಂದ ಪ್ರೇರಣೆಗೊಂಡಿದ್ದೇವೆ. ಇನ್ನಷ್ಟು ಉತ್ತಮ ಆಡಳಿತ ನೀಡಲುಶ್ರಮಿಸುತ್ತೇವೆ’ ಎಂದು ಮೋದಿ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>**</p>.<p>ದೇಶದ ಏಕತೆ, ಸಾರ್ವಭೌಮತ್ವ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ. ಭದ್ರತೆ ನಮ್ಮ ಆದ್ಯತೆ<br />–<em><strong>ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>