<p><strong>ನವದೆಹಲಿ: </strong>ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಗೆ ಬಿಜೆಪಿಯ ದ್ವೇಷ ರಾಜಕೀಯವೇ ಕಾರಣ ಎಂದು ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.</p>.<p>‘ದೇಶಕ್ಕಾಗಿ ಹುತಾತ್ಮರಾದ ಮಾಜಿ ಪ್ರಧಾನಿಯನ್ನು ನಿಂದಿಸುವುದು ಹೇಡಿತನದ ಪರಮಾವಧಿ, ಈ ಹತ್ಯಗೆ ಯಾರು ಕಾರಣ? ರಾಜೀವ್ ಗಾಂಧಿಯವರ ಜೀವಕ್ಕೆ ಅಪಾಯವಿರುವುದಾಗಿ ಗುಪ್ತಚರ ಮಾಹಿತಿ ಇದ್ದರೂ ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರ್ಕಾರ ಹೆಚ್ಚುವರಿ ಭದ್ರತೆಯನ್ನು ನಿರಾಕರಿಸಿರುವುದು ಹತ್ಯೆಗೆ ಮೂಲ ಕಾರಣ ಎಂದು ಅಹ್ಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.</p>.<p><br />ಹೆಚ್ಚುವರಿ ಭದ್ರತೆಗಾಗಿ ಹಲವು ಬಾರಿ ವಿ.ಪಿ.ಸಿಂಗ್ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಬಿಜೆಪಿ ದ್ವೇಷ ರಾಜಕಾರಣದಿಂದಾಗಿ ಮಾಜಿ ಪ್ರಧಾನಿಯ ಹತ್ಯೆ ನಡೆಯಿತು. ಅವರ ಮೇಲೆ ಇರುವ ಆರೋಪಗಳಿಗೆ ಉತ್ತರಿಸಲು ಇಂದು ಅವರು ನಮ್ಮೊಂದಿಗಿಲ್ಲ ಎಂದು ಪಟೇಲ್ ಹೇಳಿದ್ದಾರೆ</p>.<p>ರಾಜೀವ್ ಗಾಂಧಿ ಅವರು ನಂಬರ್ 1 ಭ್ರಷ್ಟಾಚಾರಿಯಾಗಿ ಜೀವನ ಕೊನೆಗೊಳಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವ್ಯಂಗ್ಯವಾಡಿದ್ದರು. ಐಎನ್ಎಸ್ ಯುದ್ಧ ನೌಕೆಯನ್ನು ಕುಟುಂಬದೊಂದಿಗೆ ರಜಾದಿನ ಕಳೆಯಲು ರಾಜೀವ್ ಗಾಂಧಿ ಬಳಸಿರುವುದಾಗಿ ಮೋದಿ ಬುಧವಾರ ಆರೋಪಿಸಿದ್ದರು. ಇದಕ್ಕೆ ಅಹ್ಮದ್ ಪಟೇಲ್ ತಿರುಗೇಟು ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong></p>.<p><a href="https://www.prajavani.net/stories/national/lok-sabha-electins-2019-635226.html">ಯುದ್ಧನೌಕೆಯನ್ನು ಟ್ಯಾಕ್ಸಿಯಂತೆ ಬಳಸಿದ್ದ ರಾಜೀವ್: ಮೋದಿ</a>,</p>.<p><a href="https://www.prajavani.net/stories/national/your-fathers-life-ended-634280.html">ನಂ.1 ಭ್ರಷ್ಟರಾಗಿಯೇ ಜೀವ ಬಿಟ್ಟ ರಾಜೀವ್ ಗಾಂಧಿ: ಮೋದಿ ಮೂದಲಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಗೆ ಬಿಜೆಪಿಯ ದ್ವೇಷ ರಾಜಕೀಯವೇ ಕಾರಣ ಎಂದು ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.</p>.<p>‘ದೇಶಕ್ಕಾಗಿ ಹುತಾತ್ಮರಾದ ಮಾಜಿ ಪ್ರಧಾನಿಯನ್ನು ನಿಂದಿಸುವುದು ಹೇಡಿತನದ ಪರಮಾವಧಿ, ಈ ಹತ್ಯಗೆ ಯಾರು ಕಾರಣ? ರಾಜೀವ್ ಗಾಂಧಿಯವರ ಜೀವಕ್ಕೆ ಅಪಾಯವಿರುವುದಾಗಿ ಗುಪ್ತಚರ ಮಾಹಿತಿ ಇದ್ದರೂ ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರ್ಕಾರ ಹೆಚ್ಚುವರಿ ಭದ್ರತೆಯನ್ನು ನಿರಾಕರಿಸಿರುವುದು ಹತ್ಯೆಗೆ ಮೂಲ ಕಾರಣ ಎಂದು ಅಹ್ಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.</p>.<p><br />ಹೆಚ್ಚುವರಿ ಭದ್ರತೆಗಾಗಿ ಹಲವು ಬಾರಿ ವಿ.ಪಿ.ಸಿಂಗ್ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಬಿಜೆಪಿ ದ್ವೇಷ ರಾಜಕಾರಣದಿಂದಾಗಿ ಮಾಜಿ ಪ್ರಧಾನಿಯ ಹತ್ಯೆ ನಡೆಯಿತು. ಅವರ ಮೇಲೆ ಇರುವ ಆರೋಪಗಳಿಗೆ ಉತ್ತರಿಸಲು ಇಂದು ಅವರು ನಮ್ಮೊಂದಿಗಿಲ್ಲ ಎಂದು ಪಟೇಲ್ ಹೇಳಿದ್ದಾರೆ</p>.<p>ರಾಜೀವ್ ಗಾಂಧಿ ಅವರು ನಂಬರ್ 1 ಭ್ರಷ್ಟಾಚಾರಿಯಾಗಿ ಜೀವನ ಕೊನೆಗೊಳಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವ್ಯಂಗ್ಯವಾಡಿದ್ದರು. ಐಎನ್ಎಸ್ ಯುದ್ಧ ನೌಕೆಯನ್ನು ಕುಟುಂಬದೊಂದಿಗೆ ರಜಾದಿನ ಕಳೆಯಲು ರಾಜೀವ್ ಗಾಂಧಿ ಬಳಸಿರುವುದಾಗಿ ಮೋದಿ ಬುಧವಾರ ಆರೋಪಿಸಿದ್ದರು. ಇದಕ್ಕೆ ಅಹ್ಮದ್ ಪಟೇಲ್ ತಿರುಗೇಟು ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong></p>.<p><a href="https://www.prajavani.net/stories/national/lok-sabha-electins-2019-635226.html">ಯುದ್ಧನೌಕೆಯನ್ನು ಟ್ಯಾಕ್ಸಿಯಂತೆ ಬಳಸಿದ್ದ ರಾಜೀವ್: ಮೋದಿ</a>,</p>.<p><a href="https://www.prajavani.net/stories/national/your-fathers-life-ended-634280.html">ನಂ.1 ಭ್ರಷ್ಟರಾಗಿಯೇ ಜೀವ ಬಿಟ್ಟ ರಾಜೀವ್ ಗಾಂಧಿ: ಮೋದಿ ಮೂದಲಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>