ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್‌ನಲ್ಲಿ ನಾಲ್ವರು ಆರೋಪಿಗಳ ಬಂಧನ 

Last Updated 26 ಜನವರಿ 2023, 2:49 IST
ಅಕ್ಷರ ಗಾತ್ರ

ಅಹಮದಾಬಾದ್: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಬೆದರಿಕೆ ಪತ್ರದಲ್ಲಿ ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಉಲ್ಲೇಖಿಸಿದ್ದರು. ಆರೋಪಿಗಳ ಪತ್ತೆಗೆ ಅಹಮದಾಬಾದ್ ಅಪರಾಧ ವಿಭಾಗ ಕಾರ್ಯಾಚರಣೆ ನಡೆಸಿತ್ತು.

ಆರೋಪಿಗಳು ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಕಳುಹಿಸಿದ್ದರು ಎಂದು ಅಪರಾಧ ವಿಭಾಗದ ಡಿಸಿಪಿ ಚೈತನ್ಯ ಮಾಂಡ್ಲಿಕ್ ತಿಳಿಸಿದ್ದಾರೆ.

ನಾಲ್ವರಲ್ಲಿ ಇಬ್ಬರನ್ನು ಅಹಮದಾಬಾದ್‌ನಲ್ಲಿ ಬಂಧಿಸಲಾಗಿದ್ದು, ಮತ್ತಿಬ್ಬರನ್ನು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಬಂಧಿಸಲಾಗಿದೆ ಎಂದು ಚೈತನ್ಯ ಮಾಹಿತಿ ನೀಡಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT