<p><strong>ನವದೆಹಲಿ</strong>: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬವರಿಗೆ ಪರಿಹಾರ ವಿತರಿಸುವುದಕ್ಕೆ ಸಂಬಂಧಿಸಿದಂತೆ, ಕುಟುಂಬ ಸದಸ್ಯರು ಹಣಕಾಸಿನ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂಬ ಆರೋಪವನ್ನು ಏರ್ ಇಂಡಿಯಾ ನಿರಾಕರಿಸಿದೆ.</p><p>ಅಹಮದಾಬಾದ್ನಿಂದ ಲಂಡನ್ನತ್ತ ಜೂನ್ 12ರ ಮಧ್ಯಾಹ್ನ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನ AI–171, ಹಾರಾಟ ಆರಂಭಿಸಿದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ, 241 ಮಂದಿ ಮೃತಪಟ್ಟಿದ್ದರು.</p><p>ದುರಂತದ ಬೆನ್ನಲ್ಲೇ, ಟಾಟಾ ಸಮೂಹವು ಮೃತರ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿತ್ತು.</p>.ಏರ್ ಇಂಡಿಯಾ ವಿಮಾನ ದುರಂತ: 241 ಪ್ರಯಾಣಿಕರ ಗುರುತು ಪತ್ತೆ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.<p>ಮೃತಪಟ್ಟವರಲ್ಲಿ ಮೂರನೇ ಎರಡರಷ್ಟು ಕುಟುಂಬಗಳಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ ಎಂದು ಏರ್ ಇಂಡಿಯಾ ಪಿಟಿಐಗೆ ತಿಳಿಸಿದೆ.</p><p>ಆದಾಗ್ಯೂ, ಮೃತರ ಮೇಲಿನ ಅವಲಂಬನೆಯ ಬಗ್ಗೆ ತಿಳಿಸುವ ಹಣಕಾಸಿನ ವಿವರಗಳನ್ನು ನೀಡುವಂತೆ ಕುಟುಂಬದವರನ್ನು ಒತ್ತಾಯಿಸಲಾಗುತ್ತಿದೆ. ಆ ಮಾಹಿತಿಯನ್ನು ಬಳಸಿಕೊಂಡು ಪರಿಹಾರ ಮೊತ್ತ ಕಡಿತಗೊಳಿಸಲು ವಿಮಾನಯಾನ ಸಂಸ್ಥೆ ಪ್ರಯತ್ನಿಸುತ್ತಿದೆ ಎಂದು ಕೆಲವು ಕುಟುಂಬಗಳು ಆರೋಪಿಸಿವೆ ಎನ್ನಲಾಗಿದೆ.</p><p>ಇದಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ, 'ಇವು ಖಚಿತವಲ್ಲದ ಹಾಗೂ ಆಧಾರರಹಿತ ಆರೋಪಗಳು' ಎಂದು ಸ್ಪಷ್ಟಪಡಿಸಿದೆ.</p><p>ಸಂತ್ರಸ್ತ ಕುಟುಂಬದವರಿಗೆ ನೆರವಾಗುವುದು ಮತ್ತು ಅವರ ಕಲ್ಯಾಣವು ತನ್ನ ಆದ್ಯತೆಯಾಗಿದೆ ಎಂದು ಒತ್ತಿಹೇಳಿರುವ ವಿಮಾನಯಾನ ಸಂಸ್ಥೆ, ಇಂತಹ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದೆ.</p>.ವಿಮಾನ ದುರಂತ: Air India ಸಹಭಾಗಿತ್ವ ಕಂಪನಿ ಕಚೇರಿಯಲ್ಲಿ ಪಾರ್ಟಿ! ನಾಲ್ವರ ವಜಾ.ಅಹಮದಾಬಾದ್ ವಿಮಾನ ದುರಂತ: Air Indiaದಿಂದ ಮಧ್ಯಂತರ ಪರಿಹಾರ ₹25 ಲಕ್ಷ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬವರಿಗೆ ಪರಿಹಾರ ವಿತರಿಸುವುದಕ್ಕೆ ಸಂಬಂಧಿಸಿದಂತೆ, ಕುಟುಂಬ ಸದಸ್ಯರು ಹಣಕಾಸಿನ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂಬ ಆರೋಪವನ್ನು ಏರ್ ಇಂಡಿಯಾ ನಿರಾಕರಿಸಿದೆ.</p><p>ಅಹಮದಾಬಾದ್ನಿಂದ ಲಂಡನ್ನತ್ತ ಜೂನ್ 12ರ ಮಧ್ಯಾಹ್ನ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನ AI–171, ಹಾರಾಟ ಆರಂಭಿಸಿದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ, 241 ಮಂದಿ ಮೃತಪಟ್ಟಿದ್ದರು.</p><p>ದುರಂತದ ಬೆನ್ನಲ್ಲೇ, ಟಾಟಾ ಸಮೂಹವು ಮೃತರ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿತ್ತು.</p>.ಏರ್ ಇಂಡಿಯಾ ವಿಮಾನ ದುರಂತ: 241 ಪ್ರಯಾಣಿಕರ ಗುರುತು ಪತ್ತೆ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.<p>ಮೃತಪಟ್ಟವರಲ್ಲಿ ಮೂರನೇ ಎರಡರಷ್ಟು ಕುಟುಂಬಗಳಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ ಎಂದು ಏರ್ ಇಂಡಿಯಾ ಪಿಟಿಐಗೆ ತಿಳಿಸಿದೆ.</p><p>ಆದಾಗ್ಯೂ, ಮೃತರ ಮೇಲಿನ ಅವಲಂಬನೆಯ ಬಗ್ಗೆ ತಿಳಿಸುವ ಹಣಕಾಸಿನ ವಿವರಗಳನ್ನು ನೀಡುವಂತೆ ಕುಟುಂಬದವರನ್ನು ಒತ್ತಾಯಿಸಲಾಗುತ್ತಿದೆ. ಆ ಮಾಹಿತಿಯನ್ನು ಬಳಸಿಕೊಂಡು ಪರಿಹಾರ ಮೊತ್ತ ಕಡಿತಗೊಳಿಸಲು ವಿಮಾನಯಾನ ಸಂಸ್ಥೆ ಪ್ರಯತ್ನಿಸುತ್ತಿದೆ ಎಂದು ಕೆಲವು ಕುಟುಂಬಗಳು ಆರೋಪಿಸಿವೆ ಎನ್ನಲಾಗಿದೆ.</p><p>ಇದಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ, 'ಇವು ಖಚಿತವಲ್ಲದ ಹಾಗೂ ಆಧಾರರಹಿತ ಆರೋಪಗಳು' ಎಂದು ಸ್ಪಷ್ಟಪಡಿಸಿದೆ.</p><p>ಸಂತ್ರಸ್ತ ಕುಟುಂಬದವರಿಗೆ ನೆರವಾಗುವುದು ಮತ್ತು ಅವರ ಕಲ್ಯಾಣವು ತನ್ನ ಆದ್ಯತೆಯಾಗಿದೆ ಎಂದು ಒತ್ತಿಹೇಳಿರುವ ವಿಮಾನಯಾನ ಸಂಸ್ಥೆ, ಇಂತಹ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದೆ.</p>.ವಿಮಾನ ದುರಂತ: Air India ಸಹಭಾಗಿತ್ವ ಕಂಪನಿ ಕಚೇರಿಯಲ್ಲಿ ಪಾರ್ಟಿ! ನಾಲ್ವರ ವಜಾ.ಅಹಮದಾಬಾದ್ ವಿಮಾನ ದುರಂತ: Air Indiaದಿಂದ ಮಧ್ಯಂತರ ಪರಿಹಾರ ₹25 ಲಕ್ಷ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>