<p><strong>ಸಾಂಗ್ಲಿ:</strong> ಏರ್ ಇಂಡಿಯಾ ವಿಮಾನ(ಎಐ171) ದುರಂತದ ತನಿಖೆಯ ಕುರಿತಾದ ವಿದೇಶಿ ಮಾಧ್ಯಮ ವರದಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಖಾತೆ ಸಚಿವ ಮುರಳೀಧರ್ ಮೊಹೋಲ್ ನಿರಾಕರಿಸಿದ್ದು, ಈ ಬಗ್ಗೆ ತನಿಖೆ ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.</p>.<p>ನಮ್ಮ ತನಿಖಾ ಸಂಸ್ಥೆಗಳು ವಿಮಾನ ದುರಂತದ ಬಗ್ಗೆ ತನಿಖೆ ನಡೆಸುತ್ತಿವೆ. ನಾವು ನಮ್ಮದೇ ಸಂಸ್ಥೆಗಳಲ್ಲಿ ನಂಬಿಕೆ ಇಡಬೇಕೇ ಅಥವಾ ಹೊರಗಿನವರ ಮೇಲೆ ನಂಬಿಕೆ ಇಡಬೇಕೇ? ಎಂದು ಪ್ರಶ್ನಿಸಿದ್ದಾರೆ. </p>.<p>ಸದ್ಯ ತನಿಖೆ ಪ್ರಗತಿಯಲ್ಲಿದೆ. ಅಂತಿಮ ವರದಿ ಬಂದ ನಂತರವೇ ಅದರ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತ ಎಂದು ಅವರು ಹೇಳಿದ್ದಾರೆ.</p>.<p>ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸುತ್ತಿರುವ ಸಂಸ್ಥೆಗಳು ತಮ್ಮ ವರದಿಯಲ್ಲಿ ಪೈಲಟ್ಗಳನ್ನು ದೂಷಿಸಿವೆ ಎಂದು ಇಟಾಲಿಯನ್ ದಿನಪತ್ರಿಕೆಯೊಂದು ಇತ್ತೀಚೆಗೆ ವರದಿ ಮಾಡಿತ್ತು.</p>.ಪೈಲಟ್ ಇಂಧನ ಬಂದ್ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ.<p>ಗುಜರಾತ್ನ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾಗೆ ಸೇರಿದ್ದ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನವು 2025ರ ಜೂನ್ 12ರಂದು ಪತನಗೊಂಡಿದ್ದರ ಹಿಂದೆ, ಉದ್ದೇಶಪೂರ್ವಕವಾಗಿ ಇಂಧನ ಗುಂಡಿಯನ್ನು ಬಂದ್ ಮಾಡಲಾಗಿತ್ತು ಎಂದು ಇಟಲಿಯ ಕೊರಿಯರ್ ಡೆಲ್ಲಾ ಸೆರಾ ಎಂಬ ಮಾಧ್ಯಮ ವರದಿ ಮಾಡಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ್ದ, ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ತನಿಖೆ ಇನ್ನೂ ಪ್ರಗತಿಯಲ್ಲಿದೆ . ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಹೇಳಿತ್ತು.</p>.ಎಐ171 ವಿಮಾನ ಪತನ; ತನಿಖೆ ಪ್ರಗತಿಯಲ್ಲಿದೆ: ಎಎಐಬಿ. <p>2025ರ ಜೂನ್ 12 ರಂದು ಅಹಮದಾಬಾದ್ನಿಂದ ಲಂಡನ್ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ದುರಂತದಲ್ಲಿ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ ಒಟ್ಟು 260 ಜನರು ಮೃತಪಟ್ಟಿದ್ದರು.</p>.Air India Plane Crash: ಟಾಟಾ ಸಮೂಹದಿಂದ ₹1 ಕೋಟಿ ಪರಿಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಂಗ್ಲಿ:</strong> ಏರ್ ಇಂಡಿಯಾ ವಿಮಾನ(ಎಐ171) ದುರಂತದ ತನಿಖೆಯ ಕುರಿತಾದ ವಿದೇಶಿ ಮಾಧ್ಯಮ ವರದಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಖಾತೆ ಸಚಿವ ಮುರಳೀಧರ್ ಮೊಹೋಲ್ ನಿರಾಕರಿಸಿದ್ದು, ಈ ಬಗ್ಗೆ ತನಿಖೆ ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.</p>.<p>ನಮ್ಮ ತನಿಖಾ ಸಂಸ್ಥೆಗಳು ವಿಮಾನ ದುರಂತದ ಬಗ್ಗೆ ತನಿಖೆ ನಡೆಸುತ್ತಿವೆ. ನಾವು ನಮ್ಮದೇ ಸಂಸ್ಥೆಗಳಲ್ಲಿ ನಂಬಿಕೆ ಇಡಬೇಕೇ ಅಥವಾ ಹೊರಗಿನವರ ಮೇಲೆ ನಂಬಿಕೆ ಇಡಬೇಕೇ? ಎಂದು ಪ್ರಶ್ನಿಸಿದ್ದಾರೆ. </p>.<p>ಸದ್ಯ ತನಿಖೆ ಪ್ರಗತಿಯಲ್ಲಿದೆ. ಅಂತಿಮ ವರದಿ ಬಂದ ನಂತರವೇ ಅದರ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತ ಎಂದು ಅವರು ಹೇಳಿದ್ದಾರೆ.</p>.<p>ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸುತ್ತಿರುವ ಸಂಸ್ಥೆಗಳು ತಮ್ಮ ವರದಿಯಲ್ಲಿ ಪೈಲಟ್ಗಳನ್ನು ದೂಷಿಸಿವೆ ಎಂದು ಇಟಾಲಿಯನ್ ದಿನಪತ್ರಿಕೆಯೊಂದು ಇತ್ತೀಚೆಗೆ ವರದಿ ಮಾಡಿತ್ತು.</p>.ಪೈಲಟ್ ಇಂಧನ ಬಂದ್ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ.<p>ಗುಜರಾತ್ನ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾಗೆ ಸೇರಿದ್ದ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನವು 2025ರ ಜೂನ್ 12ರಂದು ಪತನಗೊಂಡಿದ್ದರ ಹಿಂದೆ, ಉದ್ದೇಶಪೂರ್ವಕವಾಗಿ ಇಂಧನ ಗುಂಡಿಯನ್ನು ಬಂದ್ ಮಾಡಲಾಗಿತ್ತು ಎಂದು ಇಟಲಿಯ ಕೊರಿಯರ್ ಡೆಲ್ಲಾ ಸೆರಾ ಎಂಬ ಮಾಧ್ಯಮ ವರದಿ ಮಾಡಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ್ದ, ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ತನಿಖೆ ಇನ್ನೂ ಪ್ರಗತಿಯಲ್ಲಿದೆ . ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಹೇಳಿತ್ತು.</p>.ಎಐ171 ವಿಮಾನ ಪತನ; ತನಿಖೆ ಪ್ರಗತಿಯಲ್ಲಿದೆ: ಎಎಐಬಿ. <p>2025ರ ಜೂನ್ 12 ರಂದು ಅಹಮದಾಬಾದ್ನಿಂದ ಲಂಡನ್ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ದುರಂತದಲ್ಲಿ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ ಒಟ್ಟು 260 ಜನರು ಮೃತಪಟ್ಟಿದ್ದರು.</p>.Air India Plane Crash: ಟಾಟಾ ಸಮೂಹದಿಂದ ₹1 ಕೋಟಿ ಪರಿಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>