<p><strong>ನವದೆಹಲಿ</strong>: ದೇಶದಾದ್ಯಂತ ಬಹು ಪಥ ಮುಕ್ತ ಹರಿವು (ಎಂಎಲ್ಎಫ್ಎಫ್) ಟೋಲ್ ಮತ್ತು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಹೆದ್ದಾರಿ ನಿರ್ವಹಣೆ ವ್ಯವಸ್ಥೆಯು 2026ರ ಅಂತ್ಯದ ಒಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ಈ ಯೋಜನೆ ಮತ್ತು ತಂತ್ರಜ್ಞಾನದ ಅನುಷ್ಠಾನದ ನಂತರ ಟೋಲ್ ಪ್ಲಾಜಾಗಳಲ್ಲಿ ಪ್ರಯಾಣಿಕರು ಕಾಯುವುದು ತಪ್ಪಲಿದೆ ಎಂದು ರಾಜ್ಯಸಭೆಯಲ್ಲಿ ಬುಧವಾರ ತಿಳಿಸಿದರು.</p>.<p>ಪ್ರಶ್ನೋತ್ತರ ಅವಧಿ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ನೂತನ ತಂತ್ರಜ್ಞಾನವು ಕೃತಕ ಬುದ್ಧಿಮತ್ತೆ ಆಧಾರಿತವಾಗಿರಲಿದೆ. ಇದರಿಂದ ಪ್ರಯಾಣಿಕರ ಸಮಯ ಮತ್ತು ₹1,500 ಕೋಟಿ ಮೌಲ್ಯದ ಇಂಧನವು ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹6,000 ಕೋಟಿ ಹೆಚ್ಚುವರಿ ವರಮಾನ ಬರಲಿದೆ’ ಎಂದು ತಿಳಿಸಿದರು.</p>.<p>2026ರ ಅಂತ್ಯದೊಳಗೆ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ನಿಶ್ಚಿತ. ಆ ಬಳಿಕ ಪ್ರಯಾಣಿಕರು ಟೋಲ್ ಪ್ಲಾಜಾಗಳಲ್ಲಿ ಕಾದು ನಿಲ್ಲಬೇಕಾದ ಅಗತ್ಯವೇ ಇರುವುದಿಲ್ಲ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ ಬಹು ಪಥ ಮುಕ್ತ ಹರಿವು (ಎಂಎಲ್ಎಫ್ಎಫ್) ಟೋಲ್ ಮತ್ತು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಹೆದ್ದಾರಿ ನಿರ್ವಹಣೆ ವ್ಯವಸ್ಥೆಯು 2026ರ ಅಂತ್ಯದ ಒಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ಈ ಯೋಜನೆ ಮತ್ತು ತಂತ್ರಜ್ಞಾನದ ಅನುಷ್ಠಾನದ ನಂತರ ಟೋಲ್ ಪ್ಲಾಜಾಗಳಲ್ಲಿ ಪ್ರಯಾಣಿಕರು ಕಾಯುವುದು ತಪ್ಪಲಿದೆ ಎಂದು ರಾಜ್ಯಸಭೆಯಲ್ಲಿ ಬುಧವಾರ ತಿಳಿಸಿದರು.</p>.<p>ಪ್ರಶ್ನೋತ್ತರ ಅವಧಿ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ನೂತನ ತಂತ್ರಜ್ಞಾನವು ಕೃತಕ ಬುದ್ಧಿಮತ್ತೆ ಆಧಾರಿತವಾಗಿರಲಿದೆ. ಇದರಿಂದ ಪ್ರಯಾಣಿಕರ ಸಮಯ ಮತ್ತು ₹1,500 ಕೋಟಿ ಮೌಲ್ಯದ ಇಂಧನವು ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹6,000 ಕೋಟಿ ಹೆಚ್ಚುವರಿ ವರಮಾನ ಬರಲಿದೆ’ ಎಂದು ತಿಳಿಸಿದರು.</p>.<p>2026ರ ಅಂತ್ಯದೊಳಗೆ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ನಿಶ್ಚಿತ. ಆ ಬಳಿಕ ಪ್ರಯಾಣಿಕರು ಟೋಲ್ ಪ್ಲಾಜಾಗಳಲ್ಲಿ ಕಾದು ನಿಲ್ಲಬೇಕಾದ ಅಗತ್ಯವೇ ಇರುವುದಿಲ್ಲ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>