<p><strong>ನಾಗ್ಪುರ</strong>: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಐ (ಕೃತಕ ಬುದ್ಧಿಮತ್ತೆ) ಬಳಸಿಕೊಂಡು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.</p><p>ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು.</p><p>ಆಗಸ್ಟ್ 9 ರಂದು ನಾಗ್ಪುರ–ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್ಗೆ ದೇಹವನ್ನು ಕಟ್ಟಿ ಸಾಗಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ನಾಗ್ಪುರ ಪೊಲೀಸರು ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.</p>.ಮಕ್ಕಳ ಮುಗ್ಧತೆಯು ದೇಶಗಳ ಗಡಿಗಳ ಮೀರಿದ್ದು: ಪುಟಿನ್ಗೆ ಮೆಲಾನಿಯಾ ಟ್ರಂಪ್ ಪತ್ರ.ಉಕ್ರೇನ್ ಬಿಕ್ಕಟ್ಟು:ಐರೋಪ್ಯ ರಾಷ್ಟ್ರಗಳ ಮುಖ್ಯಸ್ಥರ ಜೊತೆಗೆ ಸ್ಟಾರ್ಮರ್ ಮಾತುಕತೆ. <p>ಆರಂಭದಲ್ಲಿ ಪೊಲೀಸರಿಗೆ ಟ್ರಕ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಅಪರಾಧ ತಡೆಗಟ್ಟುವಿಕೆ ಹಾಗೂ ಪೊಲೀಸರ ತನಿಖೆಗೆ ಸಹಾಯ ಮಾಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ AI -MARVEL (ಮಹಾರಾಷ್ಟ್ರ ಅಡ್ವಾನ್ಸ್ಡ್ ರಿಸರ್ಚ್ ಅಂಡ್ ವಿಜಿಲೆನ್ಸ್ ಫಾರ್ ಎನ್ಹ್ಯಾನ್ಸ್ಡ್ ಲಾ ಎನ್ಫೋರ್ಸ್ಮೆಂಟ್) ಬಳಸಿಕೊಂಡು ವಿವಿಧ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ.ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ . <p>ಚಾಲಕನನ್ನು ಉತ್ತರ ಪ್ರದೇಶದ ಫರೂಕಾಬಾದ್ ನಿವಾಸಿ ಸತ್ಯಪಾಲ್ ರಾಜೇಂದ್ರ (28) ಎಂದು ಗುರುತಿಸಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p><strong>ಘಟನೆ ವಿವರ</strong></p><p>ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಅಮಿತ್ ಯಾದವ್, ತಮ್ಮ ಪತ್ನಿ ಗ್ಯಾರ್ಸಿಯವರೊಂದಿಗೆ ನಾಗ್ಪುರದ ಲೊನಾರಾದಿಂದ ಮಧ್ಯಪ್ರದೇಶದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಅವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ಗ್ಯಾರ್ಸಿಯ ಮೇಲೆ ಟ್ರಕ್ ಹರಿದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು.</p><p>ಘಟನೆ ಬಳಿಕ ಸಹಾಯಕ್ಕೆಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ನಿಲ್ಲಿಸಲು ಯಾದವ್ ಪ್ರಯತ್ನಿಸಿದ್ದಾರೆ. ಆದರೆ ಯಾರೊಬ್ಬರೂ ಸಹಾಯಕ್ಕೆ ಬರದೇ ಇದ್ದಾಗ, ವಿಧಿಯಿಲ್ಲದೆ ಮೃತದೇಹವನ್ನು ತಮ್ಮ ಬೈಕ್ಗೆ ಕಟ್ಟಿ ಊರಿನತ್ತ ಹೊರಟಿದ್ದಾರೆ ಎಂದು ಪೊಲೀಸರು ಹೇಳಿದ್ದರು.</p><p>ಬೈಕ್ ಅನ್ನು ತಡೆದು ನಿಲ್ಲಿಸಿದ ಪೊಲೀಸರು ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗ್ಪುರದ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿಗೆ ರವಾನಿಸಿದ್ದರು.</p><p>ಹೆಂಡತಿಯ ಮೃತದೇಹವನ್ನು ಬೈಕಿನ ಹಿಂಬದಿಯ ಸೀಟಿಗೆ ಕಟ್ಟಿ ಹಾಕಿ, ಸಾಗಿಸುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.</p>.ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ.ಮುಂಬೈ: ಮೊಸರು ಗಡಿಗೆ ಉತ್ಸವ; ಇಬ್ಬರ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ .ಸಂವಿಧಾನ ಹೊತ್ತು ತಿರುಗುತ್ತಿರುವವರು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಮೋದಿ.ಆರೋಗ್ಯದಲ್ಲಿ ಏರುಪೇರು: ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಐ (ಕೃತಕ ಬುದ್ಧಿಮತ್ತೆ) ಬಳಸಿಕೊಂಡು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.</p><p>ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು.</p><p>ಆಗಸ್ಟ್ 9 ರಂದು ನಾಗ್ಪುರ–ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್ಗೆ ದೇಹವನ್ನು ಕಟ್ಟಿ ಸಾಗಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ನಾಗ್ಪುರ ಪೊಲೀಸರು ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.</p>.ಮಕ್ಕಳ ಮುಗ್ಧತೆಯು ದೇಶಗಳ ಗಡಿಗಳ ಮೀರಿದ್ದು: ಪುಟಿನ್ಗೆ ಮೆಲಾನಿಯಾ ಟ್ರಂಪ್ ಪತ್ರ.ಉಕ್ರೇನ್ ಬಿಕ್ಕಟ್ಟು:ಐರೋಪ್ಯ ರಾಷ್ಟ್ರಗಳ ಮುಖ್ಯಸ್ಥರ ಜೊತೆಗೆ ಸ್ಟಾರ್ಮರ್ ಮಾತುಕತೆ. <p>ಆರಂಭದಲ್ಲಿ ಪೊಲೀಸರಿಗೆ ಟ್ರಕ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಅಪರಾಧ ತಡೆಗಟ್ಟುವಿಕೆ ಹಾಗೂ ಪೊಲೀಸರ ತನಿಖೆಗೆ ಸಹಾಯ ಮಾಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ AI -MARVEL (ಮಹಾರಾಷ್ಟ್ರ ಅಡ್ವಾನ್ಸ್ಡ್ ರಿಸರ್ಚ್ ಅಂಡ್ ವಿಜಿಲೆನ್ಸ್ ಫಾರ್ ಎನ್ಹ್ಯಾನ್ಸ್ಡ್ ಲಾ ಎನ್ಫೋರ್ಸ್ಮೆಂಟ್) ಬಳಸಿಕೊಂಡು ವಿವಿಧ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ.ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ . <p>ಚಾಲಕನನ್ನು ಉತ್ತರ ಪ್ರದೇಶದ ಫರೂಕಾಬಾದ್ ನಿವಾಸಿ ಸತ್ಯಪಾಲ್ ರಾಜೇಂದ್ರ (28) ಎಂದು ಗುರುತಿಸಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p><strong>ಘಟನೆ ವಿವರ</strong></p><p>ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಅಮಿತ್ ಯಾದವ್, ತಮ್ಮ ಪತ್ನಿ ಗ್ಯಾರ್ಸಿಯವರೊಂದಿಗೆ ನಾಗ್ಪುರದ ಲೊನಾರಾದಿಂದ ಮಧ್ಯಪ್ರದೇಶದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಅವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ಗ್ಯಾರ್ಸಿಯ ಮೇಲೆ ಟ್ರಕ್ ಹರಿದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು.</p><p>ಘಟನೆ ಬಳಿಕ ಸಹಾಯಕ್ಕೆಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ನಿಲ್ಲಿಸಲು ಯಾದವ್ ಪ್ರಯತ್ನಿಸಿದ್ದಾರೆ. ಆದರೆ ಯಾರೊಬ್ಬರೂ ಸಹಾಯಕ್ಕೆ ಬರದೇ ಇದ್ದಾಗ, ವಿಧಿಯಿಲ್ಲದೆ ಮೃತದೇಹವನ್ನು ತಮ್ಮ ಬೈಕ್ಗೆ ಕಟ್ಟಿ ಊರಿನತ್ತ ಹೊರಟಿದ್ದಾರೆ ಎಂದು ಪೊಲೀಸರು ಹೇಳಿದ್ದರು.</p><p>ಬೈಕ್ ಅನ್ನು ತಡೆದು ನಿಲ್ಲಿಸಿದ ಪೊಲೀಸರು ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗ್ಪುರದ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿಗೆ ರವಾನಿಸಿದ್ದರು.</p><p>ಹೆಂಡತಿಯ ಮೃತದೇಹವನ್ನು ಬೈಕಿನ ಹಿಂಬದಿಯ ಸೀಟಿಗೆ ಕಟ್ಟಿ ಹಾಕಿ, ಸಾಗಿಸುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.</p>.ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ.ಮುಂಬೈ: ಮೊಸರು ಗಡಿಗೆ ಉತ್ಸವ; ಇಬ್ಬರ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ .ಸಂವಿಧಾನ ಹೊತ್ತು ತಿರುಗುತ್ತಿರುವವರು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಮೋದಿ.ಆರೋಗ್ಯದಲ್ಲಿ ಏರುಪೇರು: ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>