<p><strong>ಚೆನ್ನೈ:</strong> ದ್ರಾವಿಡ ರಾಜಕೀಯ ಹಾಗೂ ಸಂಸ್ಕೃತಿ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹೊರತಾಗಿಯೂ, 2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವು ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸುವ ತೀರ್ಮಾನ ಕೈಗೊಂಡಿದೆ.</p><p>ಬುಧವಾರ ರಾತ್ರಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಎಡಿಎಂಕೆ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಾಜರಿದ್ದರು.</p><p>2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದರೆ, ತಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ತೊರೆಯಲಿದ್ದೇನೆ ಎಂದು ಅಣ್ಣಾಮಲೈ ಅವರು ಹೇಳಿದ್ದಾಗಿ ವರದಿಯಾಗಿತ್ತು. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.</p><p>ಪರಸ್ಪರ ಗೌರವದಿಂದ ಎರಡೂ ಪಕ್ಷಗಳು 2024ರ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಲು ಒಪ್ಪಿಕೊಂಡಿವೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ಎರಡೂ ಪಕ್ಷಗಳ ಗಟ್ಟಿಯಾದ ಮೈತ್ರಿಯಿಂದಾಗಿ ತಮಿಳುನಾಡಿನಲ್ಲಿ ಡಿಎಂಕೆಯನ್ನು ಮಣಿಸಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಯೋಜನೆ ರೂಪಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ದ್ರಾವಿಡ ರಾಜಕೀಯ ಹಾಗೂ ಸಂಸ್ಕೃತಿ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹೊರತಾಗಿಯೂ, 2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವು ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸುವ ತೀರ್ಮಾನ ಕೈಗೊಂಡಿದೆ.</p><p>ಬುಧವಾರ ರಾತ್ರಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಎಡಿಎಂಕೆ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಾಜರಿದ್ದರು.</p><p>2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದರೆ, ತಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ತೊರೆಯಲಿದ್ದೇನೆ ಎಂದು ಅಣ್ಣಾಮಲೈ ಅವರು ಹೇಳಿದ್ದಾಗಿ ವರದಿಯಾಗಿತ್ತು. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.</p><p>ಪರಸ್ಪರ ಗೌರವದಿಂದ ಎರಡೂ ಪಕ್ಷಗಳು 2024ರ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಲು ಒಪ್ಪಿಕೊಂಡಿವೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ಎರಡೂ ಪಕ್ಷಗಳ ಗಟ್ಟಿಯಾದ ಮೈತ್ರಿಯಿಂದಾಗಿ ತಮಿಳುನಾಡಿನಲ್ಲಿ ಡಿಎಂಕೆಯನ್ನು ಮಣಿಸಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಯೋಜನೆ ರೂಪಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>