<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ವಿರೋಧ ಪಕ್ಷ ಎಐಎಡಿಎಂಕೆಯು ಚೆನ್ನೈ ನಗರದ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. </p>.<p>ಚೆನ್ನೈ ಜಿಲ್ಲೆ ವ್ಯಾಪ್ತಿಯ 16 ವಿಧಾನಸಭಾ ಕ್ಷೇತ್ರಗಳ ಪೈಕಿ ಎಐಎಡಿಎಂಕೆ ಪಕ್ಷ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಡಿಎಂಕೆ ಜತೆ ನೇರ ಹಣಾಹಣಿಗೆ ಸಜ್ಜಾಗಿದೆ. ಇತರ ಮೂರು ಸ್ಥಾನಗಳನ್ನು ಮಿತ್ರ ಪಕ್ಷಗಳಾದ ಬಿಜೆಪಿ, ಎಎಂಎಂಕೆ ಮತ್ತು ಪಿಎಂಕೆಗೆ ಬಿಟ್ಟುಕೊಟ್ಟಿದೆ. </p>.<p>ಡಿಎಂಕೆಯ ಭದ್ರಕೋಟೆ ಎಂದೇ ಪರಿಗಣಿಸಲಾದ ಚೆನ್ನೈ ನಗರದ ವ್ಯಾಪ್ತಿಯಲ್ಲಿ ಆಡಳಿತ ಪಕ್ಷವನ್ನು ಎದುರಿಸಲು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಮಾಜಿ ಸಚಿವರು, ಪಕ್ಷದ ಹಿರಿಯ ನಾಯಕರು ಮತ್ತು ಮಹಿಳೆಯರನ್ನು ಕಣಕ್ಕಿಳಿಸಿದ್ದಾರೆ.</p>.<p>ಮಾಜಿ ಸಚಿವರುಗಳಾದ ಬಿ.ವಲರ್ಮತಿ ಮತ್ತು ಗೋಕುಲ ಇಂದಿರಾ ಅವರಿಗೆ ಥೌಸಂಡ್ ಲೈಟ್ಸ್ ಮತ್ತು ಅಣ್ಣಾನಗರ ಕ್ಷೇತ್ರಗಳ ಟಿಕೆಟ್ ನೀಡಲಾಗಿದೆ. ಇವರು ಕ್ರಮವಾಗಿ ಡಿಎಂಕೆಯ ಹಾಲಿ ಶಾಸಕ ಎನ್.ಎಝಿಲನ್ ಮತ್ತು ಪಕ್ಷದ ನಾಯಕ ಎನ್.ಚಿತ್ರರಸು ಅವರನ್ನು ಎದುರಿಸಲಿದ್ದಾರೆ.</p>.<p>ಪಕ್ಷದ ಹಿರಿಯ ನಾಯಕರಾದ ಪಿ.ಸಂತಾನ ಕೃಷ್ಣನ್ ಮತ್ತು ಆದಿ ರಾಜಾರಾಮ್ ಅವರು ಕೊಳತ್ತೂರು ಹಾಗೂ ಚೆಪಾಕ್ ತಿರುವಲ್ಲಿಕೇನಿ ಕ್ಷೇತ್ರಗಳಲ್ಲಿ ಕ್ರಮವಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಅವರ ವಿರುದ್ಧ ಪೈಪೋಟಿ ನಡೆಸಲಿದ್ದಾರೆ. ಈ ಕ್ಷೇತ್ರಗಳಲ್ಲಿ ಎಐಎಡಿಎಂಕೆ– ಡಿಎಂಕೆ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ವಿರೋಧ ಪಕ್ಷ ಎಐಎಡಿಎಂಕೆಯು ಚೆನ್ನೈ ನಗರದ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. </p>.<p>ಚೆನ್ನೈ ಜಿಲ್ಲೆ ವ್ಯಾಪ್ತಿಯ 16 ವಿಧಾನಸಭಾ ಕ್ಷೇತ್ರಗಳ ಪೈಕಿ ಎಐಎಡಿಎಂಕೆ ಪಕ್ಷ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಡಿಎಂಕೆ ಜತೆ ನೇರ ಹಣಾಹಣಿಗೆ ಸಜ್ಜಾಗಿದೆ. ಇತರ ಮೂರು ಸ್ಥಾನಗಳನ್ನು ಮಿತ್ರ ಪಕ್ಷಗಳಾದ ಬಿಜೆಪಿ, ಎಎಂಎಂಕೆ ಮತ್ತು ಪಿಎಂಕೆಗೆ ಬಿಟ್ಟುಕೊಟ್ಟಿದೆ. </p>.<p>ಡಿಎಂಕೆಯ ಭದ್ರಕೋಟೆ ಎಂದೇ ಪರಿಗಣಿಸಲಾದ ಚೆನ್ನೈ ನಗರದ ವ್ಯಾಪ್ತಿಯಲ್ಲಿ ಆಡಳಿತ ಪಕ್ಷವನ್ನು ಎದುರಿಸಲು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಮಾಜಿ ಸಚಿವರು, ಪಕ್ಷದ ಹಿರಿಯ ನಾಯಕರು ಮತ್ತು ಮಹಿಳೆಯರನ್ನು ಕಣಕ್ಕಿಳಿಸಿದ್ದಾರೆ.</p>.<p>ಮಾಜಿ ಸಚಿವರುಗಳಾದ ಬಿ.ವಲರ್ಮತಿ ಮತ್ತು ಗೋಕುಲ ಇಂದಿರಾ ಅವರಿಗೆ ಥೌಸಂಡ್ ಲೈಟ್ಸ್ ಮತ್ತು ಅಣ್ಣಾನಗರ ಕ್ಷೇತ್ರಗಳ ಟಿಕೆಟ್ ನೀಡಲಾಗಿದೆ. ಇವರು ಕ್ರಮವಾಗಿ ಡಿಎಂಕೆಯ ಹಾಲಿ ಶಾಸಕ ಎನ್.ಎಝಿಲನ್ ಮತ್ತು ಪಕ್ಷದ ನಾಯಕ ಎನ್.ಚಿತ್ರರಸು ಅವರನ್ನು ಎದುರಿಸಲಿದ್ದಾರೆ.</p>.<p>ಪಕ್ಷದ ಹಿರಿಯ ನಾಯಕರಾದ ಪಿ.ಸಂತಾನ ಕೃಷ್ಣನ್ ಮತ್ತು ಆದಿ ರಾಜಾರಾಮ್ ಅವರು ಕೊಳತ್ತೂರು ಹಾಗೂ ಚೆಪಾಕ್ ತಿರುವಲ್ಲಿಕೇನಿ ಕ್ಷೇತ್ರಗಳಲ್ಲಿ ಕ್ರಮವಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಅವರ ವಿರುದ್ಧ ಪೈಪೋಟಿ ನಡೆಸಲಿದ್ದಾರೆ. ಈ ಕ್ಷೇತ್ರಗಳಲ್ಲಿ ಎಐಎಡಿಎಂಕೆ– ಡಿಎಂಕೆ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>