<p>ಚೆನ್ನೈ: ಬಿಜೆಪಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಎಐಎಡಿಎಂಕೆ ನಾಯಕ ಡಿ. ಜಯಕುಮಾರ್ ಹೇಳಿದ್ದಾರೆ. </p><p>ಇದರೊಂದಿಗೆ ಬಿಜೆಪಿ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವಣ ಒಳಜಗಳ ತಾರಕಕ್ಕೇರಿದೆ. </p><p>ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿರುವ ಜಯಕುಮಾರ್, ದಿವಂಗತ ಸಿಎಂ ಅಣ್ಣಾದುರೈ ಅವರಿಗೆ ಮಾಡಿದ ಅವಮಾನವನ್ನು ಪಕ್ಷದ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. </p><p>ಬಿಜೆಪಿ ಕಾರ್ಯಕರ್ತರು ಬಯಸಿದರೂ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆ ಮೈತ್ರಿ ಬಯಸುವುದಿಲ್ಲ. ಜೆ. ಜಯಲಲಿತಾ ಸೇರಿದಂತೆ ಎಐಎಡಿಎಂಕೆ ನಾಯಕರ ಬಗ್ಗೆ ಅಣ್ಣಾಮಲೈ ಟೀಕೆ ಮಾಡಿದ್ದಾರೆ. ನಮ್ಮ ನಾಯಕರ ವಿರುದ್ಧ ಮಾಡಿರುವ ಈ ಟೀಕೆಗಳನ್ನೆಲ್ಲ ಸಹಿಸಿಕೊಳ್ಳಬೇಕೇ ಎಂದು ಪ್ರಶ್ನಿಸಿದ್ದಾರೆ. </p><p>ನಾವೇಕೆ ಮೈತ್ರಿ ತೊಡಗಿಸಿಕೊಳ್ಳಬೇಕು ? ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ನಿಮಗೆಷ್ಟು ವೋಟ್ ಬ್ಯಾಂಕ್ ಇದೆ ಎಂಬುದು ಗೊತ್ತಿದೆ. ನಮ್ಮಿಂದಾಗಿಯೇ ಬಿಜೆಪಿ ಪರಿಚಿತವಾಗಿದೆ ಎಂದು ಹೇಳಿದ್ದಾರೆ. </p><p>ನಮ್ಮ ನಾಯಕರ ಬಗ್ಗೆ ಟೀಕೆಗಳನ್ನು ಸಹಿಸಲಾರೆವು. ಬಿಜೆಪಿ ಜೊತೆ ಮೈತ್ರಿ ಇಲ್ಲ. ಬಿಜೆಪಿ ಎಐಎಡಿಎಂಕೆ ಜೊತೆಗಿಲ್ಲ. ಈ ವಿಷಯ (ಮೈತ್ರಿ) ಕುರಿತು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿರ್ಧರಿಸಬಹುದು. ಇದುವೇ ನಮ್ಮ ನಿಲುವು ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಬಿಜೆಪಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಎಐಎಡಿಎಂಕೆ ನಾಯಕ ಡಿ. ಜಯಕುಮಾರ್ ಹೇಳಿದ್ದಾರೆ. </p><p>ಇದರೊಂದಿಗೆ ಬಿಜೆಪಿ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವಣ ಒಳಜಗಳ ತಾರಕಕ್ಕೇರಿದೆ. </p><p>ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿರುವ ಜಯಕುಮಾರ್, ದಿವಂಗತ ಸಿಎಂ ಅಣ್ಣಾದುರೈ ಅವರಿಗೆ ಮಾಡಿದ ಅವಮಾನವನ್ನು ಪಕ್ಷದ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. </p><p>ಬಿಜೆಪಿ ಕಾರ್ಯಕರ್ತರು ಬಯಸಿದರೂ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆ ಮೈತ್ರಿ ಬಯಸುವುದಿಲ್ಲ. ಜೆ. ಜಯಲಲಿತಾ ಸೇರಿದಂತೆ ಎಐಎಡಿಎಂಕೆ ನಾಯಕರ ಬಗ್ಗೆ ಅಣ್ಣಾಮಲೈ ಟೀಕೆ ಮಾಡಿದ್ದಾರೆ. ನಮ್ಮ ನಾಯಕರ ವಿರುದ್ಧ ಮಾಡಿರುವ ಈ ಟೀಕೆಗಳನ್ನೆಲ್ಲ ಸಹಿಸಿಕೊಳ್ಳಬೇಕೇ ಎಂದು ಪ್ರಶ್ನಿಸಿದ್ದಾರೆ. </p><p>ನಾವೇಕೆ ಮೈತ್ರಿ ತೊಡಗಿಸಿಕೊಳ್ಳಬೇಕು ? ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ನಿಮಗೆಷ್ಟು ವೋಟ್ ಬ್ಯಾಂಕ್ ಇದೆ ಎಂಬುದು ಗೊತ್ತಿದೆ. ನಮ್ಮಿಂದಾಗಿಯೇ ಬಿಜೆಪಿ ಪರಿಚಿತವಾಗಿದೆ ಎಂದು ಹೇಳಿದ್ದಾರೆ. </p><p>ನಮ್ಮ ನಾಯಕರ ಬಗ್ಗೆ ಟೀಕೆಗಳನ್ನು ಸಹಿಸಲಾರೆವು. ಬಿಜೆಪಿ ಜೊತೆ ಮೈತ್ರಿ ಇಲ್ಲ. ಬಿಜೆಪಿ ಎಐಎಡಿಎಂಕೆ ಜೊತೆಗಿಲ್ಲ. ಈ ವಿಷಯ (ಮೈತ್ರಿ) ಕುರಿತು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿರ್ಧರಿಸಬಹುದು. ಇದುವೇ ನಮ್ಮ ನಿಲುವು ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>