<p><strong>ಚೆನ್ನೈ</strong>: ತಮಿಳುನಾಡಿನ ಎನ್ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಎಐಎಡಿಎಂಕೆ 169 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. </p>.<p>65 ಕ್ಷೇತ್ರಗಳು ಮೈತ್ರಿ ಪಕ್ಷಗಳ ಪಾಲಾಗಿದ್ದು, ಬಿಜೆಪಿಗೆ 27, ಪಿಎಂಕೆಗೆ 18 ಸೀಟುಗಳು, ಟಿ.ಟಿ.ವಿ ದಿನಕರನ್ ಅವರ ಎಎಂಎಂಕೆಗೆ 11 ಕ್ಷೇತ್ರಗಳು ಹಂಚಿಕೆಯಾಗಿವೆ.</p>.<p>2024ರ ಲೋಕಸಭೆ ಚುನಾವಣೆಯಲ್ಲಿ ಕನ್ಯಾಕುಮಾರಿ ಕ್ಷೇತ್ರದಲ್ಲಿ ಎಐಎಡಿಎಂಕೆ ಠೇವಣಿ ಕಳೆದುಕೊಂಡಿತ್ತು. ಹೀಗಾಗಿ ಈ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 4, ತಮಿಳು ಮಾನಿಲ ಕಾಂಗ್ರೆಸ್ಗೆ (ಟಿಎಂಸಿ) ಒಂದು ಕ್ಷೇತ್ರ ನೀಡಿದೆ.</p>.<p>ಚೆನ್ನೈನ 16 ಕ್ಷೇತ್ರಗಳ ಪೈಕಿ 13 ಕ್ಷೇತ್ರ ಉಳಿಸಿಕೊಂಡಿರುವ ಎಐಎಡಿಎಂಕೆ, ಮಾಯಲಾಪುರ್ ಕ್ಷೇತ್ರವನ್ನು ಬಿಜೆಪಿಗೆ, ಸೈದ್ಪೇಟ್ ಕ್ಷೇತ್ರವನ್ನು ಎಎಂಎಂಕೆಗೆ, ಪೆರಂಬೂರ್ ಕ್ಷೇತ್ರವನ್ನು ಪಿಎಂಕೆಗೆ ನೀಡಿದೆ.</p>.<p>ಪೆರಂಬೂರ್ ಕ್ಷೇತ್ರ ಡಿಎಂಕೆ ಭದ್ರಕೋಟೆ ಎನಿಸಿದೆ. ಇದೇ ಕ್ಷೇತ್ರದಿಂದ ಟಿವಿಕೆ ಸಂಸ್ಥಾಪಕ, ನಟ ವಿಜಯ್ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.</p>.<p>ಕೊಯಮತ್ತೂರು ಮತ್ತು ಮಧುರೈ ಜಿಲ್ಲೆಗಳಲ್ಲಿ ಬಿಜೆಪಿ ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಡಿಎಂಕೆ ಸಚಿವರು ಪ್ರತಿನಿಧಿಸುತ್ತಿರುವ 14 ಕ್ಷೇತ್ರಗಳನ್ನು ಎಐಎಡಿಎಂಕೆ ತನ್ನ ಮೈತ್ರಿ ಪಕ್ಷಗಳಿಗೆ ನೀಡಿದೆ.</p>.<p>ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಸ್ಪರ್ಧಿಸಲು ಬಯಸಿದ್ದ ಸಿಂಗಾನಲ್ಲೂರು ಕ್ಷೇತ್ರವನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದೆ. ಬಿಜೆಪಿ ಹಾಲಿ ಶಾಸಕರಿದ್ದ ಕೊಯಮತ್ತೂರು (ದಕ್ಷಿಣ) ಕ್ಷೇತ್ರದ ಬದಲು ಕೊಯಮತ್ತೂರು (ಉತ್ತರ) ಕ್ಷೇತ್ರವನ್ನು ಆ ಪಕ್ಷಕ್ಕೆ ನೀಡಲಾಗಿದೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತಿರುನಲ್ವೇಲಿ ಬದಲಿಸಿ ಸತ್ತೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಈ ಕ್ಷೇತ್ರವನ್ನೇ ಬಿಜೆಪಿಗೇ ನೀಡಲಾಗಿದೆ.</p>.<p><strong>ಡಿಎಂಕೆಗೂ ಮೊದಲೇ ಎಐಎಡಿಎಂಕೆ ಮೊದಲ ಪಟ್ಟಿ ಬಿಡುಗಡೆ </strong></p><p>ಏಪ್ರಿಲ್ 23ರಂದು ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಎದುರಾಳಿ ಡಿಎಂಕೆಗಿಂತಲೂ ಎಐಎಡಿಎಂಕೆ ಮುಂದಿದೆ. ಬುಧವಾರ 23 ಕ್ಷೇತ್ರಗಳಿಗೆ ಎಐಎಡಿಎಂಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. </p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಸೇರಿದಂತೆ ಹಲವು ಮಾಜಿ ಸಚಿವರ ಹೆಸರು ಪಟ್ಟಿಯಲ್ಲಿದೆ. ಮಾಜಿ ಮುಖ್ಯಮಂತ್ರಿ ಹಾಲಿ ವಿಪಕ್ಷ ನಾಯಕ ಪಳನಿಸ್ವಾಮಿ ಅವರು ಎಡಪ್ಪಾಡಿ ಕ್ಷೇತ್ರದಿಂದ ಆರನೇ ಬಾರಿ ಮರು ಆಯ್ಕೆ ಬಯಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನ ಎನ್ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಎಐಎಡಿಎಂಕೆ 169 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. </p>.<p>65 ಕ್ಷೇತ್ರಗಳು ಮೈತ್ರಿ ಪಕ್ಷಗಳ ಪಾಲಾಗಿದ್ದು, ಬಿಜೆಪಿಗೆ 27, ಪಿಎಂಕೆಗೆ 18 ಸೀಟುಗಳು, ಟಿ.ಟಿ.ವಿ ದಿನಕರನ್ ಅವರ ಎಎಂಎಂಕೆಗೆ 11 ಕ್ಷೇತ್ರಗಳು ಹಂಚಿಕೆಯಾಗಿವೆ.</p>.<p>2024ರ ಲೋಕಸಭೆ ಚುನಾವಣೆಯಲ್ಲಿ ಕನ್ಯಾಕುಮಾರಿ ಕ್ಷೇತ್ರದಲ್ಲಿ ಎಐಎಡಿಎಂಕೆ ಠೇವಣಿ ಕಳೆದುಕೊಂಡಿತ್ತು. ಹೀಗಾಗಿ ಈ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 4, ತಮಿಳು ಮಾನಿಲ ಕಾಂಗ್ರೆಸ್ಗೆ (ಟಿಎಂಸಿ) ಒಂದು ಕ್ಷೇತ್ರ ನೀಡಿದೆ.</p>.<p>ಚೆನ್ನೈನ 16 ಕ್ಷೇತ್ರಗಳ ಪೈಕಿ 13 ಕ್ಷೇತ್ರ ಉಳಿಸಿಕೊಂಡಿರುವ ಎಐಎಡಿಎಂಕೆ, ಮಾಯಲಾಪುರ್ ಕ್ಷೇತ್ರವನ್ನು ಬಿಜೆಪಿಗೆ, ಸೈದ್ಪೇಟ್ ಕ್ಷೇತ್ರವನ್ನು ಎಎಂಎಂಕೆಗೆ, ಪೆರಂಬೂರ್ ಕ್ಷೇತ್ರವನ್ನು ಪಿಎಂಕೆಗೆ ನೀಡಿದೆ.</p>.<p>ಪೆರಂಬೂರ್ ಕ್ಷೇತ್ರ ಡಿಎಂಕೆ ಭದ್ರಕೋಟೆ ಎನಿಸಿದೆ. ಇದೇ ಕ್ಷೇತ್ರದಿಂದ ಟಿವಿಕೆ ಸಂಸ್ಥಾಪಕ, ನಟ ವಿಜಯ್ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.</p>.<p>ಕೊಯಮತ್ತೂರು ಮತ್ತು ಮಧುರೈ ಜಿಲ್ಲೆಗಳಲ್ಲಿ ಬಿಜೆಪಿ ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಡಿಎಂಕೆ ಸಚಿವರು ಪ್ರತಿನಿಧಿಸುತ್ತಿರುವ 14 ಕ್ಷೇತ್ರಗಳನ್ನು ಎಐಎಡಿಎಂಕೆ ತನ್ನ ಮೈತ್ರಿ ಪಕ್ಷಗಳಿಗೆ ನೀಡಿದೆ.</p>.<p>ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಸ್ಪರ್ಧಿಸಲು ಬಯಸಿದ್ದ ಸಿಂಗಾನಲ್ಲೂರು ಕ್ಷೇತ್ರವನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದೆ. ಬಿಜೆಪಿ ಹಾಲಿ ಶಾಸಕರಿದ್ದ ಕೊಯಮತ್ತೂರು (ದಕ್ಷಿಣ) ಕ್ಷೇತ್ರದ ಬದಲು ಕೊಯಮತ್ತೂರು (ಉತ್ತರ) ಕ್ಷೇತ್ರವನ್ನು ಆ ಪಕ್ಷಕ್ಕೆ ನೀಡಲಾಗಿದೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತಿರುನಲ್ವೇಲಿ ಬದಲಿಸಿ ಸತ್ತೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಈ ಕ್ಷೇತ್ರವನ್ನೇ ಬಿಜೆಪಿಗೇ ನೀಡಲಾಗಿದೆ.</p>.<p><strong>ಡಿಎಂಕೆಗೂ ಮೊದಲೇ ಎಐಎಡಿಎಂಕೆ ಮೊದಲ ಪಟ್ಟಿ ಬಿಡುಗಡೆ </strong></p><p>ಏಪ್ರಿಲ್ 23ರಂದು ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಎದುರಾಳಿ ಡಿಎಂಕೆಗಿಂತಲೂ ಎಐಎಡಿಎಂಕೆ ಮುಂದಿದೆ. ಬುಧವಾರ 23 ಕ್ಷೇತ್ರಗಳಿಗೆ ಎಐಎಡಿಎಂಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. </p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಸೇರಿದಂತೆ ಹಲವು ಮಾಜಿ ಸಚಿವರ ಹೆಸರು ಪಟ್ಟಿಯಲ್ಲಿದೆ. ಮಾಜಿ ಮುಖ್ಯಮಂತ್ರಿ ಹಾಲಿ ವಿಪಕ್ಷ ನಾಯಕ ಪಳನಿಸ್ವಾಮಿ ಅವರು ಎಡಪ್ಪಾಡಿ ಕ್ಷೇತ್ರದಿಂದ ಆರನೇ ಬಾರಿ ಮರು ಆಯ್ಕೆ ಬಯಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>