ಚುನಾವಣೆ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ರೂಪಿಸುವ ಜವಾಬ್ದಾರಿಯನ್ನು ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರಿಗೆ ಎಐಎಡಿಎಂಕೆಯ ನಾಯಕರ ಸಭೆ ನೀಡಿದೆ. ಅದೇ ರೀತಿ ನಿರ್ವಹಣಾಸಮಿತಿಯೊಂದನ್ನು ನೇಮಿಸಲು ತೀರ್ಮಾನಿಸಿದ್ದು, ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಂದರ್ಭ ಈ ಸಮಿತಿಯು ಪ್ರಮುಖ ಪಾತ್ರ ವಹಿಸಲಿದೆ.