<p><strong>ಚೆನ್ನೈ</strong>: ಎಐಎಡಿಎಂಕೆ ನಾಯಕ, ಮಾಜಿ ಸಚಿವ ವೆಲ್ಲಮಂಡಿ ಆರ್. ನಟರಾಜನ್ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ವೆಲ್ಲಮಂಡಿ ಅವರು ಬುಧವಾರ ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. </p><p>ಕಳೆದ ವಾರ ಎಐಎಡಿಎಂಕೆ ಬಂಡಾಯ ಶಾಸಕ ಎಸಕ್ಕಿ ಸುಬಯಾ ಸೇರಿದಂತೆ ನಾಲ್ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿವಿಕೆಗೆ ಸೇರ್ಪಡೆಗೊಂಡಿದ್ದರು. ಈ ವಾರ ಆಡಳಿತ ಪಕ್ಷಕ್ಕೆ ಸೇರಿದ ಎಐಎಡಿಎಂಕೆಯ ಐದನೇ ಪ್ರಮುಖ ನಾಯಕ ಇವರಾಗಿದ್ದಾರೆ.</p><p>ನಟರಾಜನ್ ಅವರು 2016 ರಲ್ಲಿ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದರು. ಪಕ್ಷದಲ್ಲಿನ ನಾಯಕತ್ವದ ಬಿಕ್ಕಟ್ಟಿನ ಸಮಯದಲ್ಲಿ ಅವರು ಮಾಜಿ ಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಅವರನ್ನು ಬೆಂಬಲಿಸಿದ್ದರು. ಈ ವರ್ಷದ ಫೆಬ್ರುವರಿಯಲ್ಲಿ ಪನ್ನೀರಸೆಲ್ವಂ ಅವರು ಡಿಎಂಕೆ ಸೇರ್ಪಡೆಗೊಂಡ ಬೆನ್ನಲ್ಲೇ ನಟರಾಜನ್ ಮತ್ತೆ ಎಐಎಡಿಎಂಕೆಗೆ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಎಐಎಡಿಎಂಕೆ ನಾಯಕ, ಮಾಜಿ ಸಚಿವ ವೆಲ್ಲಮಂಡಿ ಆರ್. ನಟರಾಜನ್ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ವೆಲ್ಲಮಂಡಿ ಅವರು ಬುಧವಾರ ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. </p><p>ಕಳೆದ ವಾರ ಎಐಎಡಿಎಂಕೆ ಬಂಡಾಯ ಶಾಸಕ ಎಸಕ್ಕಿ ಸುಬಯಾ ಸೇರಿದಂತೆ ನಾಲ್ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿವಿಕೆಗೆ ಸೇರ್ಪಡೆಗೊಂಡಿದ್ದರು. ಈ ವಾರ ಆಡಳಿತ ಪಕ್ಷಕ್ಕೆ ಸೇರಿದ ಎಐಎಡಿಎಂಕೆಯ ಐದನೇ ಪ್ರಮುಖ ನಾಯಕ ಇವರಾಗಿದ್ದಾರೆ.</p><p>ನಟರಾಜನ್ ಅವರು 2016 ರಲ್ಲಿ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದರು. ಪಕ್ಷದಲ್ಲಿನ ನಾಯಕತ್ವದ ಬಿಕ್ಕಟ್ಟಿನ ಸಮಯದಲ್ಲಿ ಅವರು ಮಾಜಿ ಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಅವರನ್ನು ಬೆಂಬಲಿಸಿದ್ದರು. ಈ ವರ್ಷದ ಫೆಬ್ರುವರಿಯಲ್ಲಿ ಪನ್ನೀರಸೆಲ್ವಂ ಅವರು ಡಿಎಂಕೆ ಸೇರ್ಪಡೆಗೊಂಡ ಬೆನ್ನಲ್ಲೇ ನಟರಾಜನ್ ಮತ್ತೆ ಎಐಎಡಿಎಂಕೆಗೆ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>