<p><strong>ಚೆನ್ನೈ</strong>: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ರಚಿಸಿರುವ ಉನ್ನತ ಮಟ್ಟದ ಪ್ರಣಾಳಿಕೆ ಸಮಿತಿಯು ಸಾರ್ವಜನಿಕ ಅಭಿಪ್ರಾಯ ಸಂಗ್ರಹಕ್ಕಾಗಿ ತಮಿಳುನಾಡಿನಾದ್ಯಂತ 14 ದಿನಗಳ ಪ್ರವಾಸ ಕೈಗೊಳ್ಳುತ್ತಿದೆ.</p>.<p>ಜನವರಿ 7ರಿಂದ ಜನವರಿ 20ರವರೆಗೆ ಉನ್ನತ ಮಟ್ಟದ ಸಮಿತಿಯ ಸದಸ್ಯರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ಸಮಯದಲ್ಲಿ, ಸದಸ್ಯರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ. </p>.<p>ಪ್ರವಾಸದ ಆರಂಭಕ್ಕೂ ಮುನ್ನ ‘ನಾದಮ್’ ಆರ್. ವಿಶ್ವನಾಥನ್, ಸಿ. ಪೊನ್ನೈಯನ್ ಮತ್ತು ಆರ್.ಬಿ. ಉದಯಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಉನ್ನತಮಟ್ಟದ ಸಮಿತಿಯು ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆ ತಯಾರಿಕೆ ಕುರಿತು ಮೊದಲ ಸಭೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ರಚಿಸಿರುವ ಉನ್ನತ ಮಟ್ಟದ ಪ್ರಣಾಳಿಕೆ ಸಮಿತಿಯು ಸಾರ್ವಜನಿಕ ಅಭಿಪ್ರಾಯ ಸಂಗ್ರಹಕ್ಕಾಗಿ ತಮಿಳುನಾಡಿನಾದ್ಯಂತ 14 ದಿನಗಳ ಪ್ರವಾಸ ಕೈಗೊಳ್ಳುತ್ತಿದೆ.</p>.<p>ಜನವರಿ 7ರಿಂದ ಜನವರಿ 20ರವರೆಗೆ ಉನ್ನತ ಮಟ್ಟದ ಸಮಿತಿಯ ಸದಸ್ಯರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ಸಮಯದಲ್ಲಿ, ಸದಸ್ಯರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ. </p>.<p>ಪ್ರವಾಸದ ಆರಂಭಕ್ಕೂ ಮುನ್ನ ‘ನಾದಮ್’ ಆರ್. ವಿಶ್ವನಾಥನ್, ಸಿ. ಪೊನ್ನೈಯನ್ ಮತ್ತು ಆರ್.ಬಿ. ಉದಯಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಉನ್ನತಮಟ್ಟದ ಸಮಿತಿಯು ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆ ತಯಾರಿಕೆ ಕುರಿತು ಮೊದಲ ಸಭೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>