<p>ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ ಮತ ಹಾಕಿದ ಎಐಎಡಿಎಂಕೆಯ ಶಾಸಕರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದು ಹಾಕಲಾಗಿದೆ.</p><p>47 ಶಾಸಕರ ಪೈಕಿ 25 ಮಂದಿ ಸರ್ಕಾರದ ಪರವಾಗಿ ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ಅವರಿಗೆ 144 ಮತಗಳ ಪ್ರಚಂಡ ಬೆಂಬಲ ಸಿಕ್ಕಿತ್ತು.</p><p>ಈ ಸಂಬಂಧ ನಥಮ್ ಆರ್ ವಿಶ್ವನಾಥ್ ಸೇರಿದಂತೆ 25 ಶಾಸಕರ ವಿರುದ್ಧ ಕ್ರಮ ಕೈಗೊಂಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಇ. ಪಳನಿಸ್ವಾಮಿ, ಅವರ ಜಾಗದಲ್ಲಿ ಹೊಸ ಜಿಲ್ಲಾ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ.</p><p>47 ಶಾಸಕರ ಪೈಕಿ 25 ಶಾಸಕರು ಮತ ಚಲಾಯಿಸಿರುವುದನ್ನು ಪಕ್ಷಾಂತರ ವಿರೋಧಿ ಕಾನೂನು ಅನ್ವಯವಾಗಲಿದೆಯೇ ಎಂಬ ಪ್ರಶ್ನೆ ಎದ್ದಿದೆ.</p><p>ಪಕ್ಷದ ಸೂಚನೆ, ವಿಪ್ ಮೀರಿ ಮತ ಹಾಕುವುದು, ಯಾವುದೇ ಮಾಹಿತಿ ನೀಡದೇ ರಾಜೀನಾಮೆ ನೀಡುವವರ ಮೇಲೆ ಪಕ್ಷ ವಿರೋಧಿ ಕಾಯ್ದೆಯಡಿ ಕ್ರಮ ಜರುಗಿಸಬಹುದಾಗಿದೆ. ಆದರೆ, ಮೂರನೇ ಎರಡರಷ್ಟು ಶಾಸಕರು ಬೇರೊಂದು ಪಕ್ಷದ ಜೊತೆ ವಿಲೀನಗೊಂಡಾಗ ಈ ಕಾನೂನು ಅನ್ವಯವಾಗುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ ಮತ ಹಾಕಿದ ಎಐಎಡಿಎಂಕೆಯ ಶಾಸಕರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದು ಹಾಕಲಾಗಿದೆ.</p><p>47 ಶಾಸಕರ ಪೈಕಿ 25 ಮಂದಿ ಸರ್ಕಾರದ ಪರವಾಗಿ ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ಅವರಿಗೆ 144 ಮತಗಳ ಪ್ರಚಂಡ ಬೆಂಬಲ ಸಿಕ್ಕಿತ್ತು.</p><p>ಈ ಸಂಬಂಧ ನಥಮ್ ಆರ್ ವಿಶ್ವನಾಥ್ ಸೇರಿದಂತೆ 25 ಶಾಸಕರ ವಿರುದ್ಧ ಕ್ರಮ ಕೈಗೊಂಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಇ. ಪಳನಿಸ್ವಾಮಿ, ಅವರ ಜಾಗದಲ್ಲಿ ಹೊಸ ಜಿಲ್ಲಾ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ.</p><p>47 ಶಾಸಕರ ಪೈಕಿ 25 ಶಾಸಕರು ಮತ ಚಲಾಯಿಸಿರುವುದನ್ನು ಪಕ್ಷಾಂತರ ವಿರೋಧಿ ಕಾನೂನು ಅನ್ವಯವಾಗಲಿದೆಯೇ ಎಂಬ ಪ್ರಶ್ನೆ ಎದ್ದಿದೆ.</p><p>ಪಕ್ಷದ ಸೂಚನೆ, ವಿಪ್ ಮೀರಿ ಮತ ಹಾಕುವುದು, ಯಾವುದೇ ಮಾಹಿತಿ ನೀಡದೇ ರಾಜೀನಾಮೆ ನೀಡುವವರ ಮೇಲೆ ಪಕ್ಷ ವಿರೋಧಿ ಕಾಯ್ದೆಯಡಿ ಕ್ರಮ ಜರುಗಿಸಬಹುದಾಗಿದೆ. ಆದರೆ, ಮೂರನೇ ಎರಡರಷ್ಟು ಶಾಸಕರು ಬೇರೊಂದು ಪಕ್ಷದ ಜೊತೆ ವಿಲೀನಗೊಂಡಾಗ ಈ ಕಾನೂನು ಅನ್ವಯವಾಗುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>