<p><strong>ಚೆನ್ನೈ:</strong> ಎಐಎಡಿಎಂಕೆ ಶಾಸಕ ಎಸಕ್ಕಿ ಸುಬಯಾ ಅವರು ಮಂಗಳವಾರ(ಮೇ 26) ತಮಿಳುನಾಡು ವಿಧಾನಸಭೆ ಸ್ಪೀಕರ್ ಜೆ.ಸಿ.ಡಿ ಪ್ರಭಾಕರನ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. </p><p>ಇದರಿಂದಾಗಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಉದ್ದೇಶದಿಂದ ಕಳೆದ ಎರಡು ದಿನಗಳಲ್ಲಿ ನಾಲ್ವರು ಶಾಸಕರು ಎಐಎಡಿಎಂಕೆಗೆ ರಾಜೀನಾಮೆ ನೀಡಿದಂತಾಗಿದೆ. </p><p>ಅಂಬಸಮುದ್ರಂನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎಸಕ್ಕಿ ಸುಬಯಾ ಅವರು ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಆದರೆ, ಅದು ನಿಯಮಗಳಿಗೆ ಅನುಗುಣವಾಗಿಲ್ಲದ ಕಾರಣ ಅದನ್ನು ಸ್ವೀಕರಿಸಲು ಅವರು ನಿರಾಕರಿಸಿದರು. ನಂತರ, ಸುಬಯಾ ಅವರು ಕೈಬರಹದ ಪತ್ರವನ್ನು ಸಲ್ಲಿಸಿದರು. ಆಗ, ಸ್ಪೀಕರ್ ಅದನ್ನು ಸ್ವೀಕರಿಸಿದರು.</p><p>ಎಐಎಡಿಎಂಕೆ ಹಿರಿಯ ನಾಯಕರಾದ ಸಿ.ವಿ.ಷಣ್ಮುಗಂ ಮತ್ತು ಎಸ್.ಪಿ.ವೇಲುಮಣಿ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಸುಬಯಾ ಅವರು ಮೇ 13ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತಯಾಚನೆ ವೇಳೆ ಟಿವಿಕೆ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು.</p><p>ಎಐಎಡಿಎಂಕೆ ಶಾಸಕರಾದ ಮರಗತಮ್ ಕುಮಾರವೇಲ್, ಪಿ.ಸತ್ಯಭಾಮ ಮತ್ತು ಎಸ್.ಜಯಕುಮಾರ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ(ಮೇ 25) ರಾಜೀನಾಮೆ ನೀಡಿದ್ದರು. ಬಳಿಕ ಟಿವಿಕೆ ಸೇರ್ಪಡೆಯಾಗಿದ್ದರು.</p>.AIADMK ಮೂವರು ಶಾಸಕರ ರಾಜೀನಾಮೆ: CM ವಿಜಯ್ ನೇತೃತ್ವದ ಟಿವಿಕೆ ಸೇರ್ಪಡೆ ಸಾಧ್ಯತೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಎಐಎಡಿಎಂಕೆ ಶಾಸಕ ಎಸಕ್ಕಿ ಸುಬಯಾ ಅವರು ಮಂಗಳವಾರ(ಮೇ 26) ತಮಿಳುನಾಡು ವಿಧಾನಸಭೆ ಸ್ಪೀಕರ್ ಜೆ.ಸಿ.ಡಿ ಪ್ರಭಾಕರನ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. </p><p>ಇದರಿಂದಾಗಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಉದ್ದೇಶದಿಂದ ಕಳೆದ ಎರಡು ದಿನಗಳಲ್ಲಿ ನಾಲ್ವರು ಶಾಸಕರು ಎಐಎಡಿಎಂಕೆಗೆ ರಾಜೀನಾಮೆ ನೀಡಿದಂತಾಗಿದೆ. </p><p>ಅಂಬಸಮುದ್ರಂನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎಸಕ್ಕಿ ಸುಬಯಾ ಅವರು ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಆದರೆ, ಅದು ನಿಯಮಗಳಿಗೆ ಅನುಗುಣವಾಗಿಲ್ಲದ ಕಾರಣ ಅದನ್ನು ಸ್ವೀಕರಿಸಲು ಅವರು ನಿರಾಕರಿಸಿದರು. ನಂತರ, ಸುಬಯಾ ಅವರು ಕೈಬರಹದ ಪತ್ರವನ್ನು ಸಲ್ಲಿಸಿದರು. ಆಗ, ಸ್ಪೀಕರ್ ಅದನ್ನು ಸ್ವೀಕರಿಸಿದರು.</p><p>ಎಐಎಡಿಎಂಕೆ ಹಿರಿಯ ನಾಯಕರಾದ ಸಿ.ವಿ.ಷಣ್ಮುಗಂ ಮತ್ತು ಎಸ್.ಪಿ.ವೇಲುಮಣಿ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಸುಬಯಾ ಅವರು ಮೇ 13ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತಯಾಚನೆ ವೇಳೆ ಟಿವಿಕೆ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು.</p><p>ಎಐಎಡಿಎಂಕೆ ಶಾಸಕರಾದ ಮರಗತಮ್ ಕುಮಾರವೇಲ್, ಪಿ.ಸತ್ಯಭಾಮ ಮತ್ತು ಎಸ್.ಜಯಕುಮಾರ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ(ಮೇ 25) ರಾಜೀನಾಮೆ ನೀಡಿದ್ದರು. ಬಳಿಕ ಟಿವಿಕೆ ಸೇರ್ಪಡೆಯಾಗಿದ್ದರು.</p>.AIADMK ಮೂವರು ಶಾಸಕರ ರಾಜೀನಾಮೆ: CM ವಿಜಯ್ ನೇತೃತ್ವದ ಟಿವಿಕೆ ಸೇರ್ಪಡೆ ಸಾಧ್ಯತೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>