<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ರೆಸಾರ್ಟ್ ರಾಜಕಾರಣ ಆರಂಭವಾಗಿದ್ದು ಎಐಎಡಿಎಂಕೆಯ 12ಕ್ಕೂ ಹೆಚ್ಚು ಶಾಸಕರು ಪುದುಚೆರಿ ರೆಸಾರ್ಟ್ಗೆ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ. </p><p>ರಾಜಕೀಯ ಬೆಳವಣಿಗೆಯಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಷಯದಲ್ಲಿ ಎಐಎಡಿಎಂಕೆ ಪಕ್ಷದೊಳಗೆ ಬಿರುಕು ಮೂಡಿದ್ದು ಕೆಲವು ಶಾಸಕರು ವಿಜಯ್ ಪರ ಒಲವು ಹೊಂದಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.</p><p>12ಕ್ಕೂ ಹೆಚ್ಚು ಎಐಎಡಿಎಂಕೆ ಶಾಸಕರು ಪುದುಚೇರಿಯ ರೆಸಾರ್ಟ್ನಲ್ಲಿ ಉಳಿದುಕೊಂಡಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಟಿವಿಕೆ, ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಬಹುದು ಎಂಬ ಭೀತಿಯಿಂದ ಅವರನ್ನು ರೆಸಾರ್ಟ್ಗೆ ಕರೆದೊಯ್ಯಲಾಗಿದೆ ಎಂದು ಎಐಎಡಿಎಂಕೆ ಹೇಳಿದೆ.</p>.ಸರ್ಕಾರ ರಚನೆಗೆ ಟಿವಿಕೆಗೆ ಬೆಂಬಲ ನೀಡುವುದಿಲ್ಲ: ಎಐಎಡಿಎಂಕೆ ಘೋಷಣೆ.ವಿಜಯ್ಗೆ ‘ಕೈ’ ಬೆಂಬಲ | ಟಿವಿಕೆಗೆ ಬಹುಮತ: ಸಾಕ್ಷ್ಯ ಕೇಳಿದ ರಾಜ್ಯಪಾಲ.<p>ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಗೆ ಬೆಂಬಲ ನೀಡುವ ಕುರಿತು ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಆರಂಭದಲ್ಲಿ ಮೌನ ವಹಿಸಿದ್ದು ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ಈಗ ಟಿವಿಕೆಗೆ ಬೆಂಬಲ ನೀಡದಿರಲು ಅವರು ನಿರ್ಧರಿಸಿದ್ದು ಎಲ್ಲಾ ಶಾಸಕರು ಇದಕ್ಕೆ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಹಿರಿಯ ನಾಯಕರಾದ ಸಿ.ವಿ. ಷಣ್ಮುಗಂ ಮತ್ತು ಕೆ.ಪಿ. ಮುನಿಸ್ವಾಮಿ ಅವರು ಟಿವಿಕೆಗೆ ನಾವು ಬೆಂಬಲ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಟಿವಿಕೆ ಕೂಡ ಈವರೆಗೂ ಬೆಂಬಲ ಕೋರಿಲ್ಲ ಎಂದು ಅವರು ಹೇಳಿದ್ದಾರೆ.</p><p>ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ದಾಖಲಿಸಿತ್ತು. ಆದರೆ ಬಹುಮತಕ್ಕೆ ಇನ್ನೂ 10 ಸ್ಥಾನಗಳ ಅಗತ್ಯವಿದೆ.</p><p>ಈಗಾಗಲೇ ಕಾಂಗ್ರೆಸ್ನ ಐವರು ಶಾಸಕರು ಷರತ್ತುಬದ್ಧ ಬೆಂಬಲ ನೀಡಿದ್ದಾರೆ. ಎಡಪಕ್ಷಗಳು (4 ಸ್ಥಾನ) ಮತ್ತು ವಿಸಿಕೆ (2 ಸ್ಥಾನ) ಬೆಂಬಲಕ್ಕಾಗಿ ವಿಜಯ್ ಕಾಯುತ್ತಿದ್ದಾರೆ.</p><p>ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಹೊಂದಿರುವುದರಿಂದ, ಅವರ ಬೆಂಬಲ ಪಡೆಯಲು ವಿಜಯ್ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿಯನ್ನು ತಮ್ಮ ಸೈದ್ಧಾಂತಿಕ ವಿರೋಧಿ ಎಂದು ವಿಜಯ್ ಈ ಹಿಂದೆಯೇ ಘೋಷಿಸಿದ್ದರು.</p><p>ಬುಧವಾರವೇ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ, ಬೆಂಬಲ ನೀಡುವ 118 ಶಾಸಕರ ಪಟ್ಟಿಯನ್ನು ನೀಡುವಂತೆ ರಾಜ್ಯಪಾಲರು ಸೂಚಿಸಿರುವುದರಿಂದ ಪ್ರಕ್ರಿಯೆ ವಿಳಂಬವಾಗಿದೆ.</p>.ಸರ್ಕಾರ ರಚನೆ ಕಸರತ್ತು: ಕಾಂಗ್ರೆಸ್ ಬೆಂಬಲ ಕೋರಿದ ವಿಜಯ್.ಟಿವಿಕೆಗೆ ಬೆಂಬಲ ನೀಡುವಂತೆ ಶಾಸಕರ ದುಂಬಾಲು: ಎಐಎಡಿಎಂಕೆಯಲ್ಲಿ ಗೊಂದಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ರೆಸಾರ್ಟ್ ರಾಜಕಾರಣ ಆರಂಭವಾಗಿದ್ದು ಎಐಎಡಿಎಂಕೆಯ 12ಕ್ಕೂ ಹೆಚ್ಚು ಶಾಸಕರು ಪುದುಚೆರಿ ರೆಸಾರ್ಟ್ಗೆ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ. </p><p>ರಾಜಕೀಯ ಬೆಳವಣಿಗೆಯಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಷಯದಲ್ಲಿ ಎಐಎಡಿಎಂಕೆ ಪಕ್ಷದೊಳಗೆ ಬಿರುಕು ಮೂಡಿದ್ದು ಕೆಲವು ಶಾಸಕರು ವಿಜಯ್ ಪರ ಒಲವು ಹೊಂದಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.</p><p>12ಕ್ಕೂ ಹೆಚ್ಚು ಎಐಎಡಿಎಂಕೆ ಶಾಸಕರು ಪುದುಚೇರಿಯ ರೆಸಾರ್ಟ್ನಲ್ಲಿ ಉಳಿದುಕೊಂಡಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಟಿವಿಕೆ, ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಬಹುದು ಎಂಬ ಭೀತಿಯಿಂದ ಅವರನ್ನು ರೆಸಾರ್ಟ್ಗೆ ಕರೆದೊಯ್ಯಲಾಗಿದೆ ಎಂದು ಎಐಎಡಿಎಂಕೆ ಹೇಳಿದೆ.</p>.ಸರ್ಕಾರ ರಚನೆಗೆ ಟಿವಿಕೆಗೆ ಬೆಂಬಲ ನೀಡುವುದಿಲ್ಲ: ಎಐಎಡಿಎಂಕೆ ಘೋಷಣೆ.ವಿಜಯ್ಗೆ ‘ಕೈ’ ಬೆಂಬಲ | ಟಿವಿಕೆಗೆ ಬಹುಮತ: ಸಾಕ್ಷ್ಯ ಕೇಳಿದ ರಾಜ್ಯಪಾಲ.<p>ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಗೆ ಬೆಂಬಲ ನೀಡುವ ಕುರಿತು ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಆರಂಭದಲ್ಲಿ ಮೌನ ವಹಿಸಿದ್ದು ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ಈಗ ಟಿವಿಕೆಗೆ ಬೆಂಬಲ ನೀಡದಿರಲು ಅವರು ನಿರ್ಧರಿಸಿದ್ದು ಎಲ್ಲಾ ಶಾಸಕರು ಇದಕ್ಕೆ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಹಿರಿಯ ನಾಯಕರಾದ ಸಿ.ವಿ. ಷಣ್ಮುಗಂ ಮತ್ತು ಕೆ.ಪಿ. ಮುನಿಸ್ವಾಮಿ ಅವರು ಟಿವಿಕೆಗೆ ನಾವು ಬೆಂಬಲ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಟಿವಿಕೆ ಕೂಡ ಈವರೆಗೂ ಬೆಂಬಲ ಕೋರಿಲ್ಲ ಎಂದು ಅವರು ಹೇಳಿದ್ದಾರೆ.</p><p>ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ದಾಖಲಿಸಿತ್ತು. ಆದರೆ ಬಹುಮತಕ್ಕೆ ಇನ್ನೂ 10 ಸ್ಥಾನಗಳ ಅಗತ್ಯವಿದೆ.</p><p>ಈಗಾಗಲೇ ಕಾಂಗ್ರೆಸ್ನ ಐವರು ಶಾಸಕರು ಷರತ್ತುಬದ್ಧ ಬೆಂಬಲ ನೀಡಿದ್ದಾರೆ. ಎಡಪಕ್ಷಗಳು (4 ಸ್ಥಾನ) ಮತ್ತು ವಿಸಿಕೆ (2 ಸ್ಥಾನ) ಬೆಂಬಲಕ್ಕಾಗಿ ವಿಜಯ್ ಕಾಯುತ್ತಿದ್ದಾರೆ.</p><p>ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಹೊಂದಿರುವುದರಿಂದ, ಅವರ ಬೆಂಬಲ ಪಡೆಯಲು ವಿಜಯ್ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿಯನ್ನು ತಮ್ಮ ಸೈದ್ಧಾಂತಿಕ ವಿರೋಧಿ ಎಂದು ವಿಜಯ್ ಈ ಹಿಂದೆಯೇ ಘೋಷಿಸಿದ್ದರು.</p><p>ಬುಧವಾರವೇ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ, ಬೆಂಬಲ ನೀಡುವ 118 ಶಾಸಕರ ಪಟ್ಟಿಯನ್ನು ನೀಡುವಂತೆ ರಾಜ್ಯಪಾಲರು ಸೂಚಿಸಿರುವುದರಿಂದ ಪ್ರಕ್ರಿಯೆ ವಿಳಂಬವಾಗಿದೆ.</p>.ಸರ್ಕಾರ ರಚನೆ ಕಸರತ್ತು: ಕಾಂಗ್ರೆಸ್ ಬೆಂಬಲ ಕೋರಿದ ವಿಜಯ್.ಟಿವಿಕೆಗೆ ಬೆಂಬಲ ನೀಡುವಂತೆ ಶಾಸಕರ ದುಂಬಾಲು: ಎಐಎಡಿಎಂಕೆಯಲ್ಲಿ ಗೊಂದಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>