<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ ಜೋಸೆಫ್ ವಿಜಯ್ ನಾಳೆ(ಮೇ 13) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಈ ಸಂದರ್ಭ ವಿಶ್ವಾಸಮತದ ವಿರುದ್ಧ ಮತ ಹಾಕಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ಹೇಳಿದ್ದಾರೆ.</p><p>ಅಡ್ಡ ಮತದಾನದ ಸಾಧ್ಯತೆ ಹೆಚ್ಚಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.</p><p>ಒ.ಎಸ್. ಮಣಿಯನ್ ಮತ್ತು ಪಳಸ್ವಾಮಿ ಬಣದ ಇತರ ಶಾಸಕರ ಜೊತೆ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.</p><p>'ಎಐಎಡಿಎಂಕೆಯ ಶಾಸಕರು ನಾಳೆ ವಿಶ್ವಾಸಮತ ಯಾಚನೆಯ ವಿರುದ್ಧ ಮತ ಚಲಾಯಿಸಲು ಪ್ರಧಾನ ಕಾರ್ಯದರ್ಶಿ ನಿರ್ಧರಿಸಿದ್ದಾರೆ’ಎಂದು ಕೃಷ್ಣಮೂರ್ತಿ ಹೇಳಿದ್ದು, ಪಕ್ಷದ ಎಲ್ಲ ಶಾಸಕರಿಗೆ ನಿರ್ದೇಶನ ಪಾಲಿಸಲು ಅಧಿಕೃತವಾಗಿ ತಿಳಿಸಲಾಗಿದೆ ಎಂದಿದ್ದಾರೆ.</p><p>ಸಂಭಾವ್ಯ ಅಡ್ಡ ಮತದಾನದ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಅಗತ್ಯವಿದ್ದರೆ ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ದಾವೆ ಹೂಡುವುದಾಗಿ ಹೇಳಿದರು.</p><p>ಈ ಮಧ್ಯೆ, ಪಕ್ಷದೊಳಗೆ ಒಡಕಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಮಣಿಯನ್, ಪಳನಿಸ್ವಾಮಿ ಅವರ ನಾಯಕತ್ವದಲ್ಲಿ ಎಐಎಡಿಎಂಕೆ ಒಗ್ಗಟ್ಟಿನಿಂದ ಮುನ್ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.</p><p>ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ದೃಢಪಡಿಸುವ ಸಹಿ ಮಾಡಿದ ಪತ್ರವನ್ನೂ 47 ಶಾಸಕರು ಈಗಾಗಲೇ ಸ್ಪೀಕರ್ಗೆ ಸಲ್ಲಿಸಿದ್ದಾರೆ ಎಂದೂ ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ ಜೋಸೆಫ್ ವಿಜಯ್ ನಾಳೆ(ಮೇ 13) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಈ ಸಂದರ್ಭ ವಿಶ್ವಾಸಮತದ ವಿರುದ್ಧ ಮತ ಹಾಕಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ಹೇಳಿದ್ದಾರೆ.</p><p>ಅಡ್ಡ ಮತದಾನದ ಸಾಧ್ಯತೆ ಹೆಚ್ಚಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.</p><p>ಒ.ಎಸ್. ಮಣಿಯನ್ ಮತ್ತು ಪಳಸ್ವಾಮಿ ಬಣದ ಇತರ ಶಾಸಕರ ಜೊತೆ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.</p><p>'ಎಐಎಡಿಎಂಕೆಯ ಶಾಸಕರು ನಾಳೆ ವಿಶ್ವಾಸಮತ ಯಾಚನೆಯ ವಿರುದ್ಧ ಮತ ಚಲಾಯಿಸಲು ಪ್ರಧಾನ ಕಾರ್ಯದರ್ಶಿ ನಿರ್ಧರಿಸಿದ್ದಾರೆ’ಎಂದು ಕೃಷ್ಣಮೂರ್ತಿ ಹೇಳಿದ್ದು, ಪಕ್ಷದ ಎಲ್ಲ ಶಾಸಕರಿಗೆ ನಿರ್ದೇಶನ ಪಾಲಿಸಲು ಅಧಿಕೃತವಾಗಿ ತಿಳಿಸಲಾಗಿದೆ ಎಂದಿದ್ದಾರೆ.</p><p>ಸಂಭಾವ್ಯ ಅಡ್ಡ ಮತದಾನದ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಅಗತ್ಯವಿದ್ದರೆ ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ದಾವೆ ಹೂಡುವುದಾಗಿ ಹೇಳಿದರು.</p><p>ಈ ಮಧ್ಯೆ, ಪಕ್ಷದೊಳಗೆ ಒಡಕಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಮಣಿಯನ್, ಪಳನಿಸ್ವಾಮಿ ಅವರ ನಾಯಕತ್ವದಲ್ಲಿ ಎಐಎಡಿಎಂಕೆ ಒಗ್ಗಟ್ಟಿನಿಂದ ಮುನ್ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.</p><p>ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ದೃಢಪಡಿಸುವ ಸಹಿ ಮಾಡಿದ ಪತ್ರವನ್ನೂ 47 ಶಾಸಕರು ಈಗಾಗಲೇ ಸ್ಪೀಕರ್ಗೆ ಸಲ್ಲಿಸಿದ್ದಾರೆ ಎಂದೂ ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>