<p><strong>ಚೆನ್ನೈ</strong>: ‘1972ರಲ್ಲಿ ಎಂ.ಜಿ.ರಾಮಚಂದ್ರನ್ ಅವರು ಎಐಎಡಿಎಂಕೆ ಪಕ್ಷವನ್ನು ಸ್ಥಾಪಿಸುವ ವೇಳೆ ಜನರ ಚಳವಳಿ ಮಾತ್ರ ಆಗಿರಲಿಲ್ಲ, ಅವರ ಭಾವನೆಗಳನ್ನು ಪ್ರತಿಬಿಂಬಿಸಿತ್ತು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.</p>.<p>ತಮಿಳುನಾಡಿನಾದ್ಯಂತ ಪಕ್ಷದ 54ನೇ ವರ್ಷಾಚರಣೆಯ ಸಮಾರಂಭದ ಪ್ರಯುಕ್ತ ಕಾರ್ಯಕರ್ತರಿಗೆ ಈ ಸಂದೇಶ ನೀಡಿದ್ದಾರೆ. ‘ರಾಜ್ಯದ ಜನಸಾಮಾನ್ಯರ ಧ್ವನಿಯಾಗಿ ಪಕ್ಷದ ಕಾರ್ಯಕರ್ತರು ಮೊದಲು ಧ್ವನಿ ಎತ್ತುತ್ತಾರೆ. ತಮಿಳುನಾಡು ಜನರ ಧ್ವನಿಯಾಗಿ, ನಾಳೆ ನಾವು ಸರ್ಕಾರ ರಚಿಸುವ ಜವಾಬ್ದಾರಿ ಹೊಂದಿದ್ದು, ರಾಜ್ಯದ ಜನರನ್ನು ರಕ್ಷಿಸುವ ಕರ್ತವ್ಯ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಡಿಎಂಕೆ ಸರ್ಕಾರವು ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಜನವಿರೋಧಿ ಸರ್ಕಾರವನ್ನು ಕಿತ್ತುಹಾಕಲು ರಾಜ್ಯದಾದ್ಯಂತ ನಾನು ನಡೆಸಲಿರುವ ರಾಜಕೀಯ ಸಭೆಗಳಲ್ಲಿಯೂ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು’ ಎಂದು ‘ಎಕ್ಸ್’ನಲ್ಲಿ ಹಾಕಿರುವ ಪೋಸ್ಟ್ನಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<p>‘ಅಮ್ಮ ಅವರ (ಜೆ.ಜಯಲಲಿತಾ) ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು. ಅಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು ರಾಜ್ಯವನ್ನು ನೂರು ವರ್ಷ ಮುನ್ನಡೆಸಲಿದೆ. ನಾಳೆಗಳು ನಮ್ಮದಾಗಿದ್ದು, ಎಐಎಡಿಎಂಕೆ ಶಾಶ್ವತವಾಗಿರಲಿದೆ’ ಎಂದು ಪಳನಿಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘1972ರಲ್ಲಿ ಎಂ.ಜಿ.ರಾಮಚಂದ್ರನ್ ಅವರು ಎಐಎಡಿಎಂಕೆ ಪಕ್ಷವನ್ನು ಸ್ಥಾಪಿಸುವ ವೇಳೆ ಜನರ ಚಳವಳಿ ಮಾತ್ರ ಆಗಿರಲಿಲ್ಲ, ಅವರ ಭಾವನೆಗಳನ್ನು ಪ್ರತಿಬಿಂಬಿಸಿತ್ತು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.</p>.<p>ತಮಿಳುನಾಡಿನಾದ್ಯಂತ ಪಕ್ಷದ 54ನೇ ವರ್ಷಾಚರಣೆಯ ಸಮಾರಂಭದ ಪ್ರಯುಕ್ತ ಕಾರ್ಯಕರ್ತರಿಗೆ ಈ ಸಂದೇಶ ನೀಡಿದ್ದಾರೆ. ‘ರಾಜ್ಯದ ಜನಸಾಮಾನ್ಯರ ಧ್ವನಿಯಾಗಿ ಪಕ್ಷದ ಕಾರ್ಯಕರ್ತರು ಮೊದಲು ಧ್ವನಿ ಎತ್ತುತ್ತಾರೆ. ತಮಿಳುನಾಡು ಜನರ ಧ್ವನಿಯಾಗಿ, ನಾಳೆ ನಾವು ಸರ್ಕಾರ ರಚಿಸುವ ಜವಾಬ್ದಾರಿ ಹೊಂದಿದ್ದು, ರಾಜ್ಯದ ಜನರನ್ನು ರಕ್ಷಿಸುವ ಕರ್ತವ್ಯ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಡಿಎಂಕೆ ಸರ್ಕಾರವು ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಜನವಿರೋಧಿ ಸರ್ಕಾರವನ್ನು ಕಿತ್ತುಹಾಕಲು ರಾಜ್ಯದಾದ್ಯಂತ ನಾನು ನಡೆಸಲಿರುವ ರಾಜಕೀಯ ಸಭೆಗಳಲ್ಲಿಯೂ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು’ ಎಂದು ‘ಎಕ್ಸ್’ನಲ್ಲಿ ಹಾಕಿರುವ ಪೋಸ್ಟ್ನಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<p>‘ಅಮ್ಮ ಅವರ (ಜೆ.ಜಯಲಲಿತಾ) ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು. ಅಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು ರಾಜ್ಯವನ್ನು ನೂರು ವರ್ಷ ಮುನ್ನಡೆಸಲಿದೆ. ನಾಳೆಗಳು ನಮ್ಮದಾಗಿದ್ದು, ಎಐಎಡಿಎಂಕೆ ಶಾಶ್ವತವಾಗಿರಲಿದೆ’ ಎಂದು ಪಳನಿಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>