‘ಭಗವಾನ್ ಶ್ರೀರಾಮನ ಜನ್ಮಸ್ಥಳವು ಪ್ರತಿಯೊಬ್ಬ ಹಿಂದೂವಿಗೂ ಪವಿತ್ರ ಕ್ಷೇತ್ರವಾಗಿದೆ. ಬಾಲರಾಮನ ದರ್ಶನದಿಂದ ತನ್ನ ಜೀವನ ಸಾರ್ಥಕವಾಯಿತು ಎಂದು ಪ್ರತಿಯೊಬ್ಬ ಹಿಂದೂ ಭಾವಿಸಿದರೆ, ಕೆಲವರು ಅದನ್ನು ವಿರೋಧಿಸುತ್ತಿದ್ದಾರೆ. ಎನ್ಎಸ್ಯುಐನಿಂದ ಎಐಸಿಸಿ ಮಾಧ್ಯಮ ವಿಭಾಗದವರೆಗೆ 22 ವರ್ಷಗಳಿಗೂ ಅಧಿಕ ಕಾಲ ಪ್ರಾಮಾಣಿಕವಾಗಿ ನಾನು ಯಾವ ಪಕ್ಷಕ್ಕೆ ದುಡಿದಿದ್ದೇನೋ, ಅದೇ ಪಕ್ಷವು ನನ್ನ ಅಯೋಧ್ಯೆ ಭೇಟಿಯನ್ನು ವಿರೋಧಿಸಿದ್ದು ನೋವುಂಟುಮಾಡಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.