<p><strong>ನವದೆಹಲಿ</strong>: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವವರೆಗೂ, ಪೌರತ್ವ ತಿದ್ದುಪಡಿ ನಿಯಮಗಳನ್ನು ಜಾರಿಗೊಳಿಸುವುದಕ್ಕೆ ತಡೆ ನೀಡಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಅರ್ಜಿಗಳ ವಿಚಾರಣೆ ಬಾಕಿ ಇರುವಂತೆ ಭಾರತದ ಪೌರತ್ವ ಕೋರಿ ಸಲ್ಲಿಕೆ ಆಗುವ ಅರ್ಜಿಗಳನ್ನು ಪೌರತ್ವ ಕಾಯ್ದೆ– 1955ರ ಸೆಕ್ಷನ್ 6ಬಿ ಅನ್ವಯ ಪರಿಗಣಿಸದಂತೆ ಪ್ರತಿವಾದಿಗಳಿಗೆ (ಕೇಂದ್ರ ಸರ್ಕಾರ) ನಿರ್ದೇಶನ ನೀಡುವಂತೆಯೂ ಅವರು ಮನವಿ ಮಾಡಿದ್ದಾರೆ.</p>.<p>ಸಿಎಎಯು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜೊತೆ ಸಂಬಂಧ ಹೊಂದಿದೆ. ಅಸ್ಸಾಂನಲ್ಲಿ ಈಗಾಗಲೇ ಎನ್ಆರ್ಸಿ ಪ್ರಕ್ರಿಯೆ ಮುಕ್ತಾಯವಾಗಿದೆ. ದೇಶದ ಎಲ್ಲೆಡೆ ಈ ಪ್ರಕ್ರಿಯೆ ಆರಂಭಿಸುವಂತೆ ಹೇಳಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಕೇಂದ್ರ ಸರ್ಕಾರವೇ ಸಿಎಎಅನ್ನು 4 ವರ್ಷ ಜಾರಿಗೊಳಿಸಿರಲಿಲ್ಲ. ಹೀಗಾಗಿ ಈಗ ತಡೆ ನೀಡುವುದರಿಂದ ಪ್ರತಿವಾದಿಗಳ ವಿಷಯದಲ್ಲಿ ಪೂರ್ವಗ್ರಹ ಪೀಡಿತರಾಗಿ ಕ್ರಮ ಕೈಗೊಂಡಂತೆಯೂ ಆಗುವುದಿಲ್ಲ ಎಂದೂ ಹೇಳಲಾಗಿದೆ.</p>.<p>ಸಿಎಎಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಲೇವಾರಿ ಆಗುವವರೆಗೆ ಪೌರತ್ವ ತಿದ್ದುಪಡಿ ನಿಯಮಗಳು– 2024ನ್ನು ಜಾರಿಗೊಳಿಸದಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 19ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವವರೆಗೂ, ಪೌರತ್ವ ತಿದ್ದುಪಡಿ ನಿಯಮಗಳನ್ನು ಜಾರಿಗೊಳಿಸುವುದಕ್ಕೆ ತಡೆ ನೀಡಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಅರ್ಜಿಗಳ ವಿಚಾರಣೆ ಬಾಕಿ ಇರುವಂತೆ ಭಾರತದ ಪೌರತ್ವ ಕೋರಿ ಸಲ್ಲಿಕೆ ಆಗುವ ಅರ್ಜಿಗಳನ್ನು ಪೌರತ್ವ ಕಾಯ್ದೆ– 1955ರ ಸೆಕ್ಷನ್ 6ಬಿ ಅನ್ವಯ ಪರಿಗಣಿಸದಂತೆ ಪ್ರತಿವಾದಿಗಳಿಗೆ (ಕೇಂದ್ರ ಸರ್ಕಾರ) ನಿರ್ದೇಶನ ನೀಡುವಂತೆಯೂ ಅವರು ಮನವಿ ಮಾಡಿದ್ದಾರೆ.</p>.<p>ಸಿಎಎಯು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜೊತೆ ಸಂಬಂಧ ಹೊಂದಿದೆ. ಅಸ್ಸಾಂನಲ್ಲಿ ಈಗಾಗಲೇ ಎನ್ಆರ್ಸಿ ಪ್ರಕ್ರಿಯೆ ಮುಕ್ತಾಯವಾಗಿದೆ. ದೇಶದ ಎಲ್ಲೆಡೆ ಈ ಪ್ರಕ್ರಿಯೆ ಆರಂಭಿಸುವಂತೆ ಹೇಳಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಕೇಂದ್ರ ಸರ್ಕಾರವೇ ಸಿಎಎಅನ್ನು 4 ವರ್ಷ ಜಾರಿಗೊಳಿಸಿರಲಿಲ್ಲ. ಹೀಗಾಗಿ ಈಗ ತಡೆ ನೀಡುವುದರಿಂದ ಪ್ರತಿವಾದಿಗಳ ವಿಷಯದಲ್ಲಿ ಪೂರ್ವಗ್ರಹ ಪೀಡಿತರಾಗಿ ಕ್ರಮ ಕೈಗೊಂಡಂತೆಯೂ ಆಗುವುದಿಲ್ಲ ಎಂದೂ ಹೇಳಲಾಗಿದೆ.</p>.<p>ಸಿಎಎಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಲೇವಾರಿ ಆಗುವವರೆಗೆ ಪೌರತ್ವ ತಿದ್ದುಪಡಿ ನಿಯಮಗಳು– 2024ನ್ನು ಜಾರಿಗೊಳಿಸದಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 19ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>