ಭಾರತೀಯ ದಂಡ ಸಂಹಿತೆ ಸೆಕ್ಷನ್ 505ರಡಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಸಿಕೊಳ್ಳಲಾಗಿದೆ. ಗ್ರೇಟರ್ ಹೈದರಾಬಾದ್ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರ ತಮ್ಮ ಅಕ್ಬರುದ್ದೀನ್ ಒವೈಸಿ ಅವರು ಸರ್ಕಾರದ ಒತ್ತುವರಿ ತೆರವು ಅಭಿಯಾನದ ಬಗ್ಗೆ ಪ್ರಶ್ನಿಸಿದ್ದರು. ‘ಸರ್ಕಾರವು ಕೆರೆಗಳ ಸಮೀಪದ ಒತ್ತುವರಿ ತೆರವುಗೊಳಿಸುವ ಅಭಿಯಾನ ನಡೆಸುತ್ತಿದೆ. ಇಲ್ಲಿ ಬಡವರೇ ವಾಸಿಸುತ್ತಿದ್ದಾರೆ. ತೆರವುಗೊಳಿಸುವುದಿದ್ದರೆ, ಹುಸೈನ್ ಸಾಗರ್ ಕೆರೆ ದಂಡೆಯಲ್ಲಿ ಇರುವ ಪಿ.ವಿ.ನರಸಿಂಹ ರಾವ್ ಹಾಗೂ ಎನ್.ಟಿ.ರಾಮರಾವ್ ಅವರ ಸಮಾಧಿಯನ್ನೂ ತೆರವುಗೊಳಿಸುತ್ತೀರಾ?’ ಎಂದು ಪ್ರಶ್ನಿಸಿದ್ದರು.