ದೆಹಲಿಯಿಂದ ಶ್ರೀನಗರ, ಲೇಹ್, ಪುಣೆ ಮತ್ತು ಮುಂಬೈಗೆ ಸಂಪರ್ಕ ಕಲ್ಪಿಸುವ ವಿಮಾನಗಳ ಗರಿಷ್ಠ ದರವನ್ನು ಶೇ 14 ರಿಂದ 61ರಷ್ಟು ಕಡಿಮೆ ಮಾಡಲಾಗಿದೆ ಎಂದು ಹೇಳಲು ನಾನು ಖುಷಿಪಡುತ್ತೇನೆ. ಈ ದರ ಕಡಿತ ಸೋಮವಾರದಿಂದ (ಜೂ.6) ಜಾರಿಗೆ ಬಂದಿದೆ ಎಂದು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೈನಂದಿನ ದರಗಳ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಸಿಂಧಿಯಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.