<p><strong>ಅಹಮಾದಾಬಾದ್:</strong> ಮೇಘನಿನಗರದಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ ಮೂರು ನಿಮಿಷದಲ್ಲಿ, ಎರಡು ಅಗ್ನಿ ಸೇವಾ ತಂಡಗಳು ಸ್ಥಳಕ್ಕೆ ದೌಡಾಯಿಸಿ 30ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿದೆ ಎಂದು ಗುಜರಾತ್ ಸರ್ಕಾರ ಶುಕ್ರವಾರ ಹೇಳಿದೆ. ಅವಶೇಷಗಳಡಿಯಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಸಿಲುಕಿಕೊಂಡಿದ್ದರು.</p>.ಅಹಮದಾಬಾದ್ ವಿಮಾನ ದುರಂತ: ವೇದನೆ, ವಿಷಾದ, ಸೂತಕದ ಛಾಯೆ.<p>ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ 242 ಮಂದಿಯನ್ನು ಹೊತ್ತ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಸೆಕೆಂಡುಗಳಲ್ಲಿ ಬಿ.ಜೆ. ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.</p><p>139 ವಿಧಧ ಅಗ್ನಿ ಹೋರಾಟ ಉಪಕರಣಗಳೊಂದಿಗೆ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿವೆ. ವಿಮಾನದ ಅವಶೇಷಗಳಡಿ ಸಿಲುಕಿಕೊಂಡವರ ರಕ್ಷಣೆಗೆ, ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು 612 ಮಂದಿ ಅಗ್ನಿ ಶಾಮಕ ಸಿಬ್ಬಂದಿ ಆಹೋರಾತ್ರಿ ಕೆಲಸ ಮಾಡಿದ್ದಾರೆ.</p>.ವಿಮಾನ ದುರಂತ: ಎಂಜಿನ್ ವೈಫಲ್ಯದಿಂದ ದುರಂತ? .<p>‘ಕರಟಿ ಹೋಗಿದ್ದ ಶವಗಳನ್ನು ಹಾಗೂ ದೇಹದ ಭಾಗಗಳನ್ನು ಹೊರತೆಗೆಯಲು ಪೊಲೀಸರು ವಿಶೇಷ ಶ್ವಾನ ದಳವನ್ನೂ ಸ್ಥಳದಲ್ಲಿ ನಿಯೋಜಿಸಿದ್ದರು’ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಗಾಯಾಳುಗಳಿಗೆ ತಕ್ಷಣಕ್ಕೆ ಚಿಕಿತ್ಸೆ ನೀಡಲು ಗ್ರೀನ್ ಕಾರ್ನರ್ ರಚಿಸಲಾಗಿತ್ತು. ಕಾರ್ಯಾಚರಣೆಯಲ್ಲಿ 100ಕ್ಕೂ ಅಧಿಕ ಆ್ಯಂಬುಲೆನ್ಸ್ಗಳು ಭಾಗಿಯಾಗಿದ್ದವು ಎಂದು ಅದು ಮಾಹಿತಿ ನೀಡಿದೆ.</p><p>16 ಮಂದಿ ಉಪ ಜಿಲ್ಲಾಧಿಕಾರಿಗಳು ಹಾಗೂ 16 ಮಮಲತದಾರರನ್ನು ಒಳಗೊಂಡು ಪ್ರತ್ಯೇಕ ತಂಡವನ್ನು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಇರಿಸಲಾಗಿತ್ತು.</p>.ಸಂಪಾದಕೀಯ | ಏರ್ ಇಂಡಿಯಾ ವಿಮಾನ ದುರಂತ; ಕಾರಣ ಪತ್ತೆ ಈ ಹೊತ್ತಿನ ಆದ್ಯತೆ.<p>ದುರಂತ ಸ್ಥಳದಲ್ಲಿ 250ಕ್ಕೂ ಅಧಿಕ ಸೇನಾ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ನ ಒಂದು ತಂಡ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮೂರು ತಂಡ, ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.</p><p>ನಾಗರಿಕ ವಿಮಾನಯಾನ ಸಚಿವಾಲಯದ ಸಮನ್ವಯದೊಂದಿಗೆ ಅಪಘಾತ ಸ್ಥಳದಲ್ಲಿ ಕಾರ್ಯಾಚರಣೆಗಳಿಗೆ ಸಹಾಯ ಮಾಡಲು, ರಾಜ್ಯ ಸರ್ಕಾರವು ಮಹಾನಗರ ಪಾಲಿಕೆ ಮತ್ತು ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಸುಮಾರು 150 ಸಿಬ್ಬಂದಿಯನ್ನು ನಿಯೋಜಿಸಿತ್ತು. ಜೊತೆಗೆ 41 ಡಂಪರ್/ ಟ್ರ್ಯಾಕ್ಟರ್ಗಳು, 16 ಜೆಸಿಬಿಗಳು ಹಾಗೂ 3 ಅಗೆಯುವು ಯಂತ್ರಗಳನ್ನು ಹೆಚ್ಚುವರಿಯಾಗಿ ಇರಿಸಿಕೊಳ್ಳಲಾಗಿದೆ.</p> .ಅಹಮದಾಬಾದ್ನಲ್ಲಿ ವಿಮಾನ ಪತನ | ವಿಮಾ ಪರಿಹಾರ: ₹1 ಸಾವಿರ ಕೋಟಿ ದಾಟುವ ಅಂದಾಜು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮಾದಾಬಾದ್:</strong> ಮೇಘನಿನಗರದಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ ಮೂರು ನಿಮಿಷದಲ್ಲಿ, ಎರಡು ಅಗ್ನಿ ಸೇವಾ ತಂಡಗಳು ಸ್ಥಳಕ್ಕೆ ದೌಡಾಯಿಸಿ 30ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿದೆ ಎಂದು ಗುಜರಾತ್ ಸರ್ಕಾರ ಶುಕ್ರವಾರ ಹೇಳಿದೆ. ಅವಶೇಷಗಳಡಿಯಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಸಿಲುಕಿಕೊಂಡಿದ್ದರು.</p>.ಅಹಮದಾಬಾದ್ ವಿಮಾನ ದುರಂತ: ವೇದನೆ, ವಿಷಾದ, ಸೂತಕದ ಛಾಯೆ.<p>ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ 242 ಮಂದಿಯನ್ನು ಹೊತ್ತ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಸೆಕೆಂಡುಗಳಲ್ಲಿ ಬಿ.ಜೆ. ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.</p><p>139 ವಿಧಧ ಅಗ್ನಿ ಹೋರಾಟ ಉಪಕರಣಗಳೊಂದಿಗೆ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿವೆ. ವಿಮಾನದ ಅವಶೇಷಗಳಡಿ ಸಿಲುಕಿಕೊಂಡವರ ರಕ್ಷಣೆಗೆ, ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು 612 ಮಂದಿ ಅಗ್ನಿ ಶಾಮಕ ಸಿಬ್ಬಂದಿ ಆಹೋರಾತ್ರಿ ಕೆಲಸ ಮಾಡಿದ್ದಾರೆ.</p>.ವಿಮಾನ ದುರಂತ: ಎಂಜಿನ್ ವೈಫಲ್ಯದಿಂದ ದುರಂತ? .<p>‘ಕರಟಿ ಹೋಗಿದ್ದ ಶವಗಳನ್ನು ಹಾಗೂ ದೇಹದ ಭಾಗಗಳನ್ನು ಹೊರತೆಗೆಯಲು ಪೊಲೀಸರು ವಿಶೇಷ ಶ್ವಾನ ದಳವನ್ನೂ ಸ್ಥಳದಲ್ಲಿ ನಿಯೋಜಿಸಿದ್ದರು’ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಗಾಯಾಳುಗಳಿಗೆ ತಕ್ಷಣಕ್ಕೆ ಚಿಕಿತ್ಸೆ ನೀಡಲು ಗ್ರೀನ್ ಕಾರ್ನರ್ ರಚಿಸಲಾಗಿತ್ತು. ಕಾರ್ಯಾಚರಣೆಯಲ್ಲಿ 100ಕ್ಕೂ ಅಧಿಕ ಆ್ಯಂಬುಲೆನ್ಸ್ಗಳು ಭಾಗಿಯಾಗಿದ್ದವು ಎಂದು ಅದು ಮಾಹಿತಿ ನೀಡಿದೆ.</p><p>16 ಮಂದಿ ಉಪ ಜಿಲ್ಲಾಧಿಕಾರಿಗಳು ಹಾಗೂ 16 ಮಮಲತದಾರರನ್ನು ಒಳಗೊಂಡು ಪ್ರತ್ಯೇಕ ತಂಡವನ್ನು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಇರಿಸಲಾಗಿತ್ತು.</p>.ಸಂಪಾದಕೀಯ | ಏರ್ ಇಂಡಿಯಾ ವಿಮಾನ ದುರಂತ; ಕಾರಣ ಪತ್ತೆ ಈ ಹೊತ್ತಿನ ಆದ್ಯತೆ.<p>ದುರಂತ ಸ್ಥಳದಲ್ಲಿ 250ಕ್ಕೂ ಅಧಿಕ ಸೇನಾ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ನ ಒಂದು ತಂಡ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮೂರು ತಂಡ, ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.</p><p>ನಾಗರಿಕ ವಿಮಾನಯಾನ ಸಚಿವಾಲಯದ ಸಮನ್ವಯದೊಂದಿಗೆ ಅಪಘಾತ ಸ್ಥಳದಲ್ಲಿ ಕಾರ್ಯಾಚರಣೆಗಳಿಗೆ ಸಹಾಯ ಮಾಡಲು, ರಾಜ್ಯ ಸರ್ಕಾರವು ಮಹಾನಗರ ಪಾಲಿಕೆ ಮತ್ತು ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಸುಮಾರು 150 ಸಿಬ್ಬಂದಿಯನ್ನು ನಿಯೋಜಿಸಿತ್ತು. ಜೊತೆಗೆ 41 ಡಂಪರ್/ ಟ್ರ್ಯಾಕ್ಟರ್ಗಳು, 16 ಜೆಸಿಬಿಗಳು ಹಾಗೂ 3 ಅಗೆಯುವು ಯಂತ್ರಗಳನ್ನು ಹೆಚ್ಚುವರಿಯಾಗಿ ಇರಿಸಿಕೊಳ್ಳಲಾಗಿದೆ.</p> .ಅಹಮದಾಬಾದ್ನಲ್ಲಿ ವಿಮಾನ ಪತನ | ವಿಮಾ ಪರಿಹಾರ: ₹1 ಸಾವಿರ ಕೋಟಿ ದಾಟುವ ಅಂದಾಜು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>