<p><strong>ಅಹಮದಾಬಾದ್</strong>: ವಿಮಾನ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಮಿಲಿಟರಿ ಅಧಿಕಾರಿಗಳು, 'ಬದುಕುಳಿದ ಒಬ್ಬರೂ ಕಂಡಿಲ್ಲ' ಎಂದು ಆಘಾತ ವ್ಯಕ್ತಪಡಿಸಿದ್ದಾರೆ.</p><p>ಗುಜರಾತ್ನ ಅಹಮದಾಬಾದ್ನಿಂದ ಲಂಡನ್ನತ್ತ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನ AI-171 ಇಂದು (ಗುರುವಾರ) ಮಧ್ಯಾಹ್ನ 1.40 ಸುಮಾರಿಗೆ ಪತನಗೊಂಡಿದೆ.</p><p>ವಿಮಾನದಲ್ಲಿ 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಮಂದಿ ಇದ್ದರು. ಯಾರೊಬ್ಬರೂ ಬದುಕುಳಿದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ, ಆ ಸುದ್ದಿಯನ್ನು ವಿಮಾನಯಾನ ಸಂಸ್ಥೆಯಾಗಲಿ, ನಾಗರಿಕ ವಿಮಾನಯಾನ ಸಚಿವಾಲಯವಾಗಲಿ ಅಥವಾ ಸ್ಥಳೀಯ ಆಡಳಿತ ಖಚಿತಪಡಿಸಿಲ್ಲ.</p><p>ಆದರೆ, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಸೇನಾ ಸಿಬ್ಬಂದಿಯೇ, 'ದುರಂತಕ್ಕೀಡಾಗಿ ಬದುಕುಳಿದಿರುವ ಒಬ್ಬರನ್ನೂ ಕಾರ್ಯಾಚರಣೆ ವೇಳೆ ನೋಡಿಲ್ಲ' ಎಂದು ಹೇಳಿದ್ದಾರೆ. ಇದು, ದುರಂತದ ಬಗ್ಗೆ ತೀವ್ರ ಆಘಾತ ಉಂಟುಮಾಡಿದೆ.</p><p>ಸೇನೆಯು 130 ಯೋಧರನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೇರಿದಂತೆ ಅಂತರರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.</p>.Ahmedabad Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು.Ahmedabad Plane Crash: ಮಂಗಳೂರು ದುರಂತ ಸೇರಿದಂತೆ ಪ್ರಮುಖ ವಿಮಾನ ಅಪಘಾತಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ವಿಮಾನ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಮಿಲಿಟರಿ ಅಧಿಕಾರಿಗಳು, 'ಬದುಕುಳಿದ ಒಬ್ಬರೂ ಕಂಡಿಲ್ಲ' ಎಂದು ಆಘಾತ ವ್ಯಕ್ತಪಡಿಸಿದ್ದಾರೆ.</p><p>ಗುಜರಾತ್ನ ಅಹಮದಾಬಾದ್ನಿಂದ ಲಂಡನ್ನತ್ತ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನ AI-171 ಇಂದು (ಗುರುವಾರ) ಮಧ್ಯಾಹ್ನ 1.40 ಸುಮಾರಿಗೆ ಪತನಗೊಂಡಿದೆ.</p><p>ವಿಮಾನದಲ್ಲಿ 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಮಂದಿ ಇದ್ದರು. ಯಾರೊಬ್ಬರೂ ಬದುಕುಳಿದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ, ಆ ಸುದ್ದಿಯನ್ನು ವಿಮಾನಯಾನ ಸಂಸ್ಥೆಯಾಗಲಿ, ನಾಗರಿಕ ವಿಮಾನಯಾನ ಸಚಿವಾಲಯವಾಗಲಿ ಅಥವಾ ಸ್ಥಳೀಯ ಆಡಳಿತ ಖಚಿತಪಡಿಸಿಲ್ಲ.</p><p>ಆದರೆ, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಸೇನಾ ಸಿಬ್ಬಂದಿಯೇ, 'ದುರಂತಕ್ಕೀಡಾಗಿ ಬದುಕುಳಿದಿರುವ ಒಬ್ಬರನ್ನೂ ಕಾರ್ಯಾಚರಣೆ ವೇಳೆ ನೋಡಿಲ್ಲ' ಎಂದು ಹೇಳಿದ್ದಾರೆ. ಇದು, ದುರಂತದ ಬಗ್ಗೆ ತೀವ್ರ ಆಘಾತ ಉಂಟುಮಾಡಿದೆ.</p><p>ಸೇನೆಯು 130 ಯೋಧರನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೇರಿದಂತೆ ಅಂತರರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.</p>.Ahmedabad Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು.Ahmedabad Plane Crash: ಮಂಗಳೂರು ದುರಂತ ಸೇರಿದಂತೆ ಪ್ರಮುಖ ವಿಮಾನ ಅಪಘಾತಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>