<p><strong>ಲಖನೌ:</strong> ಬಗಡೋಗರ (ಸಿಲಿಗುರಿ) ನಗರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಹೊಗೆ ಎಚ್ಚರಿಕೆ ಕಾರಣಕ್ಕೆ ಇಲ್ಲಿನ ಚೌಧರಿ ಚರಣ್ ಸಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. </p>.<p>ಏರ್ಬಸ್ ಎ320 ವಿಮಾನದ ವಿದ್ಯುನ್ಮಾನ ಉಪಕರಣಗಳ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಪೈಲಟ್ ವಿಮಾನವನ್ನು ಸೋಮವಾರ ಸಂಜೆ ತುರ್ತಾಗಿ ಲಖನೌಗೆ ತಿರುಗಿಸಿದರು. ಈ ವೇಳೆ ಅವರು ಅಂತರರಾಷ್ಟ್ರೀಯವಾಗಿ ಬಳಸುವ ‘ಮೇ ಡೇ’ ಎಂಬ ತುರ್ತು ಸಂಕೇತವನ್ನು ನೀಡಿದರು. </p>.<p>ಈ ಬಗ್ಗೆ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ (ಎಟಿಸಿ) ಮಾಹಿತಿ ನೀಡಿದ್ದು, ಸಂಜೆ 5.18ಕ್ಕೆ ವಿಮಾನವನ್ನು ಇಳಿಸಲಾಯಿತು.</p>.<p>ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ ಒಟ್ಟು 148 ಮಂದಿ ಇದ್ದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕೆಲವರಿಗೆ ಟಿಕೆಟ್ ಹಣವನ್ನು ಮರುಪಾವತಿ ಮಾಡಲಾಗಿದೆ. ಮತ್ತೆ ಕೆಲವರಿಗೆ ಹೋಟೆಲ್ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಬಗಡೋಗರ (ಸಿಲಿಗುರಿ) ನಗರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಹೊಗೆ ಎಚ್ಚರಿಕೆ ಕಾರಣಕ್ಕೆ ಇಲ್ಲಿನ ಚೌಧರಿ ಚರಣ್ ಸಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. </p>.<p>ಏರ್ಬಸ್ ಎ320 ವಿಮಾನದ ವಿದ್ಯುನ್ಮಾನ ಉಪಕರಣಗಳ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಪೈಲಟ್ ವಿಮಾನವನ್ನು ಸೋಮವಾರ ಸಂಜೆ ತುರ್ತಾಗಿ ಲಖನೌಗೆ ತಿರುಗಿಸಿದರು. ಈ ವೇಳೆ ಅವರು ಅಂತರರಾಷ್ಟ್ರೀಯವಾಗಿ ಬಳಸುವ ‘ಮೇ ಡೇ’ ಎಂಬ ತುರ್ತು ಸಂಕೇತವನ್ನು ನೀಡಿದರು. </p>.<p>ಈ ಬಗ್ಗೆ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ (ಎಟಿಸಿ) ಮಾಹಿತಿ ನೀಡಿದ್ದು, ಸಂಜೆ 5.18ಕ್ಕೆ ವಿಮಾನವನ್ನು ಇಳಿಸಲಾಯಿತು.</p>.<p>ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ ಒಟ್ಟು 148 ಮಂದಿ ಇದ್ದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕೆಲವರಿಗೆ ಟಿಕೆಟ್ ಹಣವನ್ನು ಮರುಪಾವತಿ ಮಾಡಲಾಗಿದೆ. ಮತ್ತೆ ಕೆಲವರಿಗೆ ಹೋಟೆಲ್ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>