<p><strong>ಜಮ್ಮು</strong>: ದೆಹಲಿಯಿಂದ ಜಮ್ಮು ಮೂಲಕ ಶ್ರೀನಗರಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಮಧ್ಯಾಹ್ನ ಇಲ್ಲಿ ಲ್ಯಾಂಡ್ ಆಗದೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನ ಲ್ಯಾಂಡ್ ಆಗದೆ ದೆಹಲಿಗೆ ಹಿಂದಿರುಗಲು ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಐಎಕ್ಸ್-2564 ವಿಮಾನವು ಶ್ರೀನಗರಕ್ಕೆ ಹೊರಟಿತ್ತು. ಮಧ್ಯಾಹ್ನದ ಸುಮಾರಿಗೆ ಜಮ್ಮುವಿನಲ್ಲಿ ನಿಲುಗಡೆ ಇತ್ತು. ಆದರೆ, ಅದು ದೆಹಲಿಗೆ ಹಿಂದಿರುಗಿದೆ. ಹಿಂದಿರುಗುವುದಕ್ಕೂ ಮುನ್ನ ವಿಮಾನ ಕೆಲ ಕಾಲ ಜಮ್ಮು ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಹವಾಮಾನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ರನ್ವೇ ಸ್ಪಷ್ಟವಾಗಿತ್ತು, ಆದರೆ, ಪೈಲಟ್ಗೆ ಸೂಕ್ತವಾದ ಲ್ಯಾಂಡಿಂಗ್ ಪ್ರದೇಶವನ್ನು ಕಂಡುಕೊಳ್ಳಲಾಗಲಿಲ್ಲ ಎಂಬಂತೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ವಿಮಾನ ಪತನವಾಗಿ 271ಕ್ಕೂ ಅಧಿಕ ಮಂದಿ ಮೃತಪಟ್ಟ ಬಳಿಕ ಏರ್ ಇಂಡಿಯಾದ ಹಲವು ವಿಮಾನಗಳಲ್ಲಿ ತಾಂತ್ರಿಕ ದೋಷದ ಬಗ್ಗೆ ವರದಿಯಾಗುತ್ತಿದೆ. ತಾಂತ್ರಿಕ ಪರಿಶೀಲನೆ ದೃಷ್ಟಿಯಿಂದ ಕಾರ್ಯಾಚರಿಸುತ್ತಿರುವ ವಿಮಾನಗಳ ಸಂಖ್ಯೆಯನ್ನೂ ಏರ್ ಇಂಡಿಯಾ ಕಡಿತಗೊಳಿಸಿದೆ.</p> .ಜು.15ರವರೆಗೆ ಸಣ್ಣ ಗಾತ್ರದ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ.ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ರಿಯಾದ್ನಲ್ಲಿ ತುರ್ತು ಭೂಸ್ಪರ್ಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ದೆಹಲಿಯಿಂದ ಜಮ್ಮು ಮೂಲಕ ಶ್ರೀನಗರಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಮಧ್ಯಾಹ್ನ ಇಲ್ಲಿ ಲ್ಯಾಂಡ್ ಆಗದೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನ ಲ್ಯಾಂಡ್ ಆಗದೆ ದೆಹಲಿಗೆ ಹಿಂದಿರುಗಲು ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಐಎಕ್ಸ್-2564 ವಿಮಾನವು ಶ್ರೀನಗರಕ್ಕೆ ಹೊರಟಿತ್ತು. ಮಧ್ಯಾಹ್ನದ ಸುಮಾರಿಗೆ ಜಮ್ಮುವಿನಲ್ಲಿ ನಿಲುಗಡೆ ಇತ್ತು. ಆದರೆ, ಅದು ದೆಹಲಿಗೆ ಹಿಂದಿರುಗಿದೆ. ಹಿಂದಿರುಗುವುದಕ್ಕೂ ಮುನ್ನ ವಿಮಾನ ಕೆಲ ಕಾಲ ಜಮ್ಮು ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಹವಾಮಾನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ರನ್ವೇ ಸ್ಪಷ್ಟವಾಗಿತ್ತು, ಆದರೆ, ಪೈಲಟ್ಗೆ ಸೂಕ್ತವಾದ ಲ್ಯಾಂಡಿಂಗ್ ಪ್ರದೇಶವನ್ನು ಕಂಡುಕೊಳ್ಳಲಾಗಲಿಲ್ಲ ಎಂಬಂತೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ವಿಮಾನ ಪತನವಾಗಿ 271ಕ್ಕೂ ಅಧಿಕ ಮಂದಿ ಮೃತಪಟ್ಟ ಬಳಿಕ ಏರ್ ಇಂಡಿಯಾದ ಹಲವು ವಿಮಾನಗಳಲ್ಲಿ ತಾಂತ್ರಿಕ ದೋಷದ ಬಗ್ಗೆ ವರದಿಯಾಗುತ್ತಿದೆ. ತಾಂತ್ರಿಕ ಪರಿಶೀಲನೆ ದೃಷ್ಟಿಯಿಂದ ಕಾರ್ಯಾಚರಿಸುತ್ತಿರುವ ವಿಮಾನಗಳ ಸಂಖ್ಯೆಯನ್ನೂ ಏರ್ ಇಂಡಿಯಾ ಕಡಿತಗೊಳಿಸಿದೆ.</p> .ಜು.15ರವರೆಗೆ ಸಣ್ಣ ಗಾತ್ರದ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ.ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ರಿಯಾದ್ನಲ್ಲಿ ತುರ್ತು ಭೂಸ್ಪರ್ಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>