<p><strong>ನವದೆಹಲಿ:</strong> ಅಹಮದಾಬಾದ್ನಲ್ಲಿ ಜೂನ್ 12ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ (ಎಐ171) ಅಪಘಾತ ಕುರಿತ ತನಿಖೆ ಪ್ರಗತಿಯಲ್ಲಿದ್ದು, ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಗುರುವಾರ ಹೇಳಿದೆ.</p>.<p>ತನಿಖೆಯು ಪೂರ್ಣಗೊಂಡಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವ ಕಾರಣಕ್ಕೆ ಈ ಸ್ಪಷ್ಟನೆ ನೀಡಿರುವ ಎಎಐಬಿ,‘ಈ ವಿಚಾರವಾಗಿ ಮಾಧ್ಯಮಗಳಲ್ಲಿನ ವರದಿಗಳು ತಪ್ಪು ಹಾಗೂ ಊಹಾಪೋಹಗಳಿಂದ ಕೂಡಿವೆ’ ಎಂದು ಹೇಳಿದೆ.</p>.<p>‘ವಿಮಾನ ಅಪಘಾತ ಕುರಿತ ತನಿಖೆಯು ತಾಂತ್ರಿಕ ಅಂಶಗಳನ್ನು ಒಳಗೊಂಡಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಹಾಗೂ ಸುರಕ್ಷತೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ವಿಮಾನ ಅಪಘಾತ ಕುರಿತು ವರದಿಗಳನ್ನು ಪ್ರಕಟಿಸುವಾಗ ಮಾಧ್ಯಮಗಳು ಸಂಯಮ ಕಾಪಾಡಬೇಕು ಹಾಗೂ ಊಹಾಪೋಹಗಳಿಗೆ ಈಡಾಗಬಾರದು. ಖಚಿತವಲ್ಲದ ವರದಿಗಳು ಜನರಲ್ಲಿ ಅನಗತ್ಯ ಆತಂಕಕ್ಕೆ ಕಾರಣವಾಗುತ್ತವೆ ಹಾಗೂ ತನಿಖೆಯ ವಿಶ್ವಾಸಾರ್ಹತೆ ಮೇಲೂ ಪರಿಣಾಮ ಬೀರಲಿವೆ’ ಎಂದು ಎಎಐಬಿ ಹೇಳಿದೆ.</p>.<p>ಈ ವಿಮಾನ ಅಪಘಾತದಲ್ಲಿ 260 ಜನರು ಮೃತಪಟ್ಟಿದ್ದರು. ಲಂಡನ್ಗೆ ಹೊರಟಿದ್ದ ಈ ನತದೃಷ್ಟ ವಿಮಾನ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಹಮದಾಬಾದ್ನಲ್ಲಿ ಜೂನ್ 12ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ (ಎಐ171) ಅಪಘಾತ ಕುರಿತ ತನಿಖೆ ಪ್ರಗತಿಯಲ್ಲಿದ್ದು, ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಗುರುವಾರ ಹೇಳಿದೆ.</p>.<p>ತನಿಖೆಯು ಪೂರ್ಣಗೊಂಡಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವ ಕಾರಣಕ್ಕೆ ಈ ಸ್ಪಷ್ಟನೆ ನೀಡಿರುವ ಎಎಐಬಿ,‘ಈ ವಿಚಾರವಾಗಿ ಮಾಧ್ಯಮಗಳಲ್ಲಿನ ವರದಿಗಳು ತಪ್ಪು ಹಾಗೂ ಊಹಾಪೋಹಗಳಿಂದ ಕೂಡಿವೆ’ ಎಂದು ಹೇಳಿದೆ.</p>.<p>‘ವಿಮಾನ ಅಪಘಾತ ಕುರಿತ ತನಿಖೆಯು ತಾಂತ್ರಿಕ ಅಂಶಗಳನ್ನು ಒಳಗೊಂಡಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಹಾಗೂ ಸುರಕ್ಷತೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ವಿಮಾನ ಅಪಘಾತ ಕುರಿತು ವರದಿಗಳನ್ನು ಪ್ರಕಟಿಸುವಾಗ ಮಾಧ್ಯಮಗಳು ಸಂಯಮ ಕಾಪಾಡಬೇಕು ಹಾಗೂ ಊಹಾಪೋಹಗಳಿಗೆ ಈಡಾಗಬಾರದು. ಖಚಿತವಲ್ಲದ ವರದಿಗಳು ಜನರಲ್ಲಿ ಅನಗತ್ಯ ಆತಂಕಕ್ಕೆ ಕಾರಣವಾಗುತ್ತವೆ ಹಾಗೂ ತನಿಖೆಯ ವಿಶ್ವಾಸಾರ್ಹತೆ ಮೇಲೂ ಪರಿಣಾಮ ಬೀರಲಿವೆ’ ಎಂದು ಎಎಐಬಿ ಹೇಳಿದೆ.</p>.<p>ಈ ವಿಮಾನ ಅಪಘಾತದಲ್ಲಿ 260 ಜನರು ಮೃತಪಟ್ಟಿದ್ದರು. ಲಂಡನ್ಗೆ ಹೊರಟಿದ್ದ ಈ ನತದೃಷ್ಟ ವಿಮಾನ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>