<p><strong>ನವದೆಹಲಿ</strong>: ಮುಂಬೈಗೆ ಹೊರಟಿದ್ದ ಏರ್ಇಂಡಿಯಾ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ದೆಹಲಿಯಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ.</p>.<p>335 ಜನರಿದ್ದ ಎಐ887 ವಿಮಾನವು ದೆಹಲಿಯಿಂದ ಹೊರಟು ಸುಮಾರು ಒಂದು ಗಂಟೆ ಹಾರಾಟ ನಡೆಸಿತ್ತು. ತಾಂತ್ರಿಕ ದೋಷ ಕಂಡುಬಂದ ಕಾರಣ ಮತ್ತೆ ದೆಹಲಿಗೆ ಮರಳಿ ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ.</p>.<p>‘ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯಗಳು ಆಗಿಲ್ಲ’ ಎಂದು ಏರ್ ಇಂಡಿಯಾ ತಿಳಿಸಿದೆ.</p>.<p>ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ಏರ್ ಇಂಡಿಯಾಕ್ಕೆ ನಿರ್ದೇಶನ ನೀಡಿದೆ.</p>.<p>‘ವಿಮಾನದ ಎರಡನೇ ಎಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು, ತಕ್ಷಣ ಅದನ್ನು ಸ್ಥಗಿತಗೊಳಿಸಿ, ವಿಮಾನವನ್ನು ಇಳಿಸಲಾಯಿತು’ ಎಂದು ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪರಿಶೀಲನೆಯು ಪ್ರಗತಿಯಲ್ಲಿದೆ. ವಿಮಾನ ಸುರಕ್ಷತಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಶಾಶ್ವತ ತನಿಖಾ ಮಂಡಲಿಯು ತನಿಖೆ ನಡೆಸುತ್ತಿದೆ’ ಎಂದು ಡಿಜಿಸಿಎ ತಿಳಿಸಿದೆ.</p>.<p>‘ಹಾರಾಟಕ್ಕೆ ಮೊದಲು ವಿಮಾನದ ಎಂಜಿನ್ನಲ್ಲಿ ದೋಷ ಕಂಡುಬಂದಿರಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬೈಗೆ ಹೊರಟಿದ್ದ ಏರ್ಇಂಡಿಯಾ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ದೆಹಲಿಯಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ.</p>.<p>335 ಜನರಿದ್ದ ಎಐ887 ವಿಮಾನವು ದೆಹಲಿಯಿಂದ ಹೊರಟು ಸುಮಾರು ಒಂದು ಗಂಟೆ ಹಾರಾಟ ನಡೆಸಿತ್ತು. ತಾಂತ್ರಿಕ ದೋಷ ಕಂಡುಬಂದ ಕಾರಣ ಮತ್ತೆ ದೆಹಲಿಗೆ ಮರಳಿ ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ.</p>.<p>‘ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯಗಳು ಆಗಿಲ್ಲ’ ಎಂದು ಏರ್ ಇಂಡಿಯಾ ತಿಳಿಸಿದೆ.</p>.<p>ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ಏರ್ ಇಂಡಿಯಾಕ್ಕೆ ನಿರ್ದೇಶನ ನೀಡಿದೆ.</p>.<p>‘ವಿಮಾನದ ಎರಡನೇ ಎಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು, ತಕ್ಷಣ ಅದನ್ನು ಸ್ಥಗಿತಗೊಳಿಸಿ, ವಿಮಾನವನ್ನು ಇಳಿಸಲಾಯಿತು’ ಎಂದು ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪರಿಶೀಲನೆಯು ಪ್ರಗತಿಯಲ್ಲಿದೆ. ವಿಮಾನ ಸುರಕ್ಷತಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಶಾಶ್ವತ ತನಿಖಾ ಮಂಡಲಿಯು ತನಿಖೆ ನಡೆಸುತ್ತಿದೆ’ ಎಂದು ಡಿಜಿಸಿಎ ತಿಳಿಸಿದೆ.</p>.<p>‘ಹಾರಾಟಕ್ಕೆ ಮೊದಲು ವಿಮಾನದ ಎಂಜಿನ್ನಲ್ಲಿ ದೋಷ ಕಂಡುಬಂದಿರಲಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>