<p><strong>ನವದೆಹಲಿ</strong>: ಮಂಗೋಲಿಯಾ ರಾಜಧಾನಿ ಉಲಾನ್ಬಾತರ್ನಲ್ಲಿ ಸಿಲುಕಿಕೊಂಡಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾ ಬುಧವಾರ ಬೆಳಿಗ್ಗೆ ದೆಹಲಿಗೆ ಕರೆತಂದಿದೆ.</p><p> ಸೋಮವಾರ ಸ್ಯಾನ್ ಫ್ರಾನ್ಸಿಸ್ಕೊದಿಂದ ದೆಹಲಿಗೆ ಹೊರಟಿದ್ದ ವಿಮಾನವನ್ನು ತಾಂತ್ರಿಕ ದೋಷದಿಂದ ಮಂಗೋಲಿಯಾ ರಾಜಧಾನಿಯತ್ತ ತಿರುಗಿಸಲಾಗಿತ್ತು. ಎರಡು ದಿನಳಿಂದ ಪ್ರಯಾಣಿಕರು ಉಲಾನ್ಬಾತರ್ನಲ್ಲಿದ್ದರು.</p><p>ಉಲಾನ್ಬಾತರ್ನಿಂದ ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾದ ಪರಿಹಾರ ವಿಮಾನ ಬೋಯಿಂಗ್ 787 ಡ್ರೀಮ್ಲೈನರ್ ಬುಧವಾರ ಬೆಳಿಗ್ಗೆ 8:24ರ ಸುಮಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಾರ್ಗಬದಲಿಸಲಾಗಿದ್ದ ಬೋಯಿಂಗ್ 777 ವಿಮಾನದಲ್ಲಿ 228 ಮಂದಿ ಪ್ರಯಾಣಿಕರು, 17 ಸಿಬ್ಬಂದಿ ಸೇರಿ 245 ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.</p><p> ಸ್ಯಾನ್ ಫ್ರಾನ್ಸಿಸ್ಕೊದಿಂದ ಕೋಲ್ಕತ್ತ ಮೂಲಕ ದೆಹಲಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾದ ಎಐ174, ವಿಮಾನದ ಸಿಬ್ಬಂದಿಗೆ ಮಾರ್ಗ ಮಧ್ಯೆ ತಾಂತ್ರಿಕ ಸಮಸ್ಯೆ ಇದೆ ಎಂದು ಅನುಮಾನ ಬಂದಿದೆ. </p><p>ನಂತರ, ಅವರು ಉಲಾನ್ಬತಾರ್ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನದ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಂಗೋಲಿಯಾ ರಾಜಧಾನಿ ಉಲಾನ್ಬಾತರ್ನಲ್ಲಿ ಸಿಲುಕಿಕೊಂಡಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾ ಬುಧವಾರ ಬೆಳಿಗ್ಗೆ ದೆಹಲಿಗೆ ಕರೆತಂದಿದೆ.</p><p> ಸೋಮವಾರ ಸ್ಯಾನ್ ಫ್ರಾನ್ಸಿಸ್ಕೊದಿಂದ ದೆಹಲಿಗೆ ಹೊರಟಿದ್ದ ವಿಮಾನವನ್ನು ತಾಂತ್ರಿಕ ದೋಷದಿಂದ ಮಂಗೋಲಿಯಾ ರಾಜಧಾನಿಯತ್ತ ತಿರುಗಿಸಲಾಗಿತ್ತು. ಎರಡು ದಿನಳಿಂದ ಪ್ರಯಾಣಿಕರು ಉಲಾನ್ಬಾತರ್ನಲ್ಲಿದ್ದರು.</p><p>ಉಲಾನ್ಬಾತರ್ನಿಂದ ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾದ ಪರಿಹಾರ ವಿಮಾನ ಬೋಯಿಂಗ್ 787 ಡ್ರೀಮ್ಲೈನರ್ ಬುಧವಾರ ಬೆಳಿಗ್ಗೆ 8:24ರ ಸುಮಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಾರ್ಗಬದಲಿಸಲಾಗಿದ್ದ ಬೋಯಿಂಗ್ 777 ವಿಮಾನದಲ್ಲಿ 228 ಮಂದಿ ಪ್ರಯಾಣಿಕರು, 17 ಸಿಬ್ಬಂದಿ ಸೇರಿ 245 ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.</p><p> ಸ್ಯಾನ್ ಫ್ರಾನ್ಸಿಸ್ಕೊದಿಂದ ಕೋಲ್ಕತ್ತ ಮೂಲಕ ದೆಹಲಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾದ ಎಐ174, ವಿಮಾನದ ಸಿಬ್ಬಂದಿಗೆ ಮಾರ್ಗ ಮಧ್ಯೆ ತಾಂತ್ರಿಕ ಸಮಸ್ಯೆ ಇದೆ ಎಂದು ಅನುಮಾನ ಬಂದಿದೆ. </p><p>ನಂತರ, ಅವರು ಉಲಾನ್ಬತಾರ್ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನದ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>