<p><strong>ನವದೆಹಲಿ</strong>: ಹೀಥ್ರೂ–ಬೆಂಗಳೂರು ಬೋಯಿಂಗ್–787 ವಿಮಾನದ ಇಂಧನ ಪೂರೈಕೆ ಸ್ವಿಚ್ಗಳಲ್ಲಿ ಸಮಸ್ಯೆ ಕಂಡುಬಂದ ಕಾರಣದಿಂದಾಗಿ ಏರ್ ಇಂಡಿಯಾ ಸಂಸ್ಥೆಯು ತನ್ನ 33 ವಿಮಾನಗಳಲ್ಲಿನ ಇಂತಹ ಸ್ವಿಚ್ಗಳನ್ನು ಪರಿಶೀಲಿಸಲು ಮುಂದಾಗಿದೆ. ಸಂಸ್ಥೆಯ ಆಂತರಿಕ ಮೂಲಗಳು ಎಎಫ್ಪಿಗೆ ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿವೆ. </p>.<p>ಬೋಯಿಂಗ್ 787–8 ಡ್ರೀಮ್ಲೈನರ್ ವಿಮಾನದಲ್ಲಿ ಸೋಮವಾರ ಸಮಸ್ಯೆ ವರದಿಯಾಗುತ್ತಿದ್ದಂತೆಯೇ ಆದ್ಯತೆಯ ಮೇರೆಗೆ ಈ ಸಮಸ್ಯೆ ಪರಿಹರಿಸಲು ಸಂಸ್ಥೆ ನಿರ್ಧರಿಸಿದೆ. ಹೀಗಾಗಿ ಸಂಚಾರಕ್ಕೆ ಬಳಸಲಾಗುತ್ತಿರುವ ತನ್ನ ಎಲ್ಲಾ ವಿಮಾನಗಳನ್ನೂ ಪರಿಶೀಲನೆಗೆ ಒಳಪಡಿಸಿದೆ. ಈಗಾಗಲೇ ಹಲವು ವಿಮಾನಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ ಎನ್ನಲಾಗಿದೆ. </p>.<p>ಇಂಧನ ಸ್ವಿಚ್ಗಳ ಪರಿಶೀಲನೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಯನ್ನು ಬೋಯಿಂಗ್ ನೀಡಿಲ್ಲ. ಅಹಮದಾಬಾದ್ನಲ್ಲಿ 260 ಮಂದಿಯನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ಭಾರತದ ಆಡಳಿತಾಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೀಥ್ರೂ–ಬೆಂಗಳೂರು ಬೋಯಿಂಗ್–787 ವಿಮಾನದ ಇಂಧನ ಪೂರೈಕೆ ಸ್ವಿಚ್ಗಳಲ್ಲಿ ಸಮಸ್ಯೆ ಕಂಡುಬಂದ ಕಾರಣದಿಂದಾಗಿ ಏರ್ ಇಂಡಿಯಾ ಸಂಸ್ಥೆಯು ತನ್ನ 33 ವಿಮಾನಗಳಲ್ಲಿನ ಇಂತಹ ಸ್ವಿಚ್ಗಳನ್ನು ಪರಿಶೀಲಿಸಲು ಮುಂದಾಗಿದೆ. ಸಂಸ್ಥೆಯ ಆಂತರಿಕ ಮೂಲಗಳು ಎಎಫ್ಪಿಗೆ ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿವೆ. </p>.<p>ಬೋಯಿಂಗ್ 787–8 ಡ್ರೀಮ್ಲೈನರ್ ವಿಮಾನದಲ್ಲಿ ಸೋಮವಾರ ಸಮಸ್ಯೆ ವರದಿಯಾಗುತ್ತಿದ್ದಂತೆಯೇ ಆದ್ಯತೆಯ ಮೇರೆಗೆ ಈ ಸಮಸ್ಯೆ ಪರಿಹರಿಸಲು ಸಂಸ್ಥೆ ನಿರ್ಧರಿಸಿದೆ. ಹೀಗಾಗಿ ಸಂಚಾರಕ್ಕೆ ಬಳಸಲಾಗುತ್ತಿರುವ ತನ್ನ ಎಲ್ಲಾ ವಿಮಾನಗಳನ್ನೂ ಪರಿಶೀಲನೆಗೆ ಒಳಪಡಿಸಿದೆ. ಈಗಾಗಲೇ ಹಲವು ವಿಮಾನಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ ಎನ್ನಲಾಗಿದೆ. </p>.<p>ಇಂಧನ ಸ್ವಿಚ್ಗಳ ಪರಿಶೀಲನೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಯನ್ನು ಬೋಯಿಂಗ್ ನೀಡಿಲ್ಲ. ಅಹಮದಾಬಾದ್ನಲ್ಲಿ 260 ಮಂದಿಯನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ಭಾರತದ ಆಡಳಿತಾಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>