<p><strong>ನವದೆಹಲಿ</strong>: ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಹಾನಿಕಾರಕ ಹೊಗೆ ಹೊರಸೂಸುವಿಕೆ ತಗ್ಗಿಸುವ ತಂತ್ರಜ್ಞಾನ ಅಳವಡಿಸುವವರೆಗೆ ಸ್ಥಾವರಗಳ ಕಾರ್ಯಾಚರಣೆ ನಿಲ್ಲಿಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ಶುಕ್ರವಾರ ಹಿಂಪಡೆದಿದೆ.</p>.<p>ಉತ್ತರಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿರುವ ಕಲ್ಲಿದ್ದಲಿನ 10 ಉಷ್ಣ ವಿದ್ಯುತ್ ಸ್ಥಾವರಗಳಿಂದ ದೇಶದ ರಾಜಧಾನಿ ದೆಹಲಿಯಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಈ ಸ್ಥಾವರಗಳು ‘ಫ್ಲೂ ಗ್ಯಾಸ್ ಡೆಸಲ್ಫುರೈಸೇಷನ್’ ತಂತ್ರಜ್ಞಾನ ಅಳವಡಿಸಿಕೊಳ್ಳುವವರೆಗೆ ಸ್ಥಾವರಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿ ಆಲಿಸಿದ ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಆರ್. ಸುಭಾಷ್ ರೆಡ್ಡಿ ಅವರಿದ್ದ ನ್ಯಾಯಪೀಠವು ‘ಭಾರತ ಒಕ್ಕೂಟದ ವಿರುದ್ಧ ರಾಜ್ಯವು ಪಿಐಎಲ್ನೊಂದಿಗೆ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಬಂದಿರುವುದು ನಮಗೆ ಬಹಳ ಅಚ್ಚರಿ ನೀಡಿತು’ ಎಂದು ಹೇಳಿತು.</p>.<p>ದೆಹಲಿ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ಸಲ್ಫರ್ ಡೈ ಆಕ್ಸೈಡ್ ಮತ್ತು ನೈಟ್ರೋಜನ್ ಡೈ ಆಕ್ಸೈಡ್ ‘ಕೊಲೆಗಡುಕ ಅನಿಲಗಳು’ ಮತ್ತು ಈ ವಿಷಯವು ಮಾಲಿನ್ಯದಿಂದ ಬಳಲುತ್ತಿರುವ ನಾಗರಿಕರ ಆರೋಗ್ಯಕ್ಕೆ ಸಂಬಂಧಿಸಿದೆ ಎಂದು ಪೀಠದ ಗಮನಕ್ಕೆ ತಂದರು.</p>.<p>‘ನಮಗೆ ಕೇಳಲು ಹಲವು ಪ್ರಶ್ನೆಗಳಿವೆ’ ಎಂದ ಪೀಠವು, ‘ನೀವು ರಿಟ್ ಅರ್ಜಿ ಸಲ್ಲಿಸಿದ್ದೀರಿ. ಈ ರಿಟ್ ಅರ್ಜಿಯನ್ನು ನಾವು ಪರಿಗಣಿಸಬೇಕೆ ಅಥವಾ ಬೇಡವೇ ಎನ್ನುವ ಜಿಜ್ಞಾಸೆಯಲ್ಲೇ ನಾವು ಈ ಅರ್ಜಿಯನ್ನು ಪರಿಗಣಿಸುತ್ತಿದ್ದೇವೆ. ನಿಮ್ಮ ಪ್ರಕರಣಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರ ಈ ಹಿಂದೆ ಕೆಲವು ಹೇಳಿಕೆಗಳನ್ನು ಸಲ್ಲಿಸಿದೆ. ಅದಕ್ಕೆ ವಿರುದ್ಧವಾಗಿ ಈಗ ಕೇಂದ್ರ ನಡೆದುಕೊಂಡಿದ್ದರೆ ನೀವು ಅದನ್ನು ನ್ಯಾಯಾಲಯದ ಗಮನಕ್ಕೆ ತನ್ನಿ’ ಎಂದು ಅರ್ಜಿದಾರರಿಗೆ ತಿಳಿಸಿತು.</p>.<p>‘ಈ ಅರ್ಜಿಯ ಬಗ್ಗೆ ಪೀಠ ನೋಟಿಸ್ ಜಾರಿಗೊಳಿಸಬಹುದು ಮತ್ತು ಬಾಕಿ ಇರುವ ಪ್ರಕರಣಗಳೊಂದಿಗೆ ಈ ಅರ್ಜಿಯನ್ನು ಸೇರಿಸಿಕೊಳ್ಳಬಹುದು’ ಎಂದು ವಾದಿಸಿದ ಗೊನ್ಸಾಲ್ವೆಸ್, ‘ಮಾಲಿನ್ಯ ಉಲ್ಬಣಕ್ಕೆ ಕಾರಣವಾಗಿರುವ ಹಾನಿಕಾರಕ ಹೊಗೆ ಹೊರಸೂಸುವಿಕೆ ತಗ್ಗಿಸಲು ತಂತ್ರಜ್ಞಾನದ ಮಾನದಂಡ ಅಳವಡಿಸಿಕೊಳ್ಳುವ ಗಡುವು ಹತ್ತಿರಗೊಳಿಸಿ ನಿರ್ದೇಶನ ನೀಡಬೇಕು. ಜತೆಗೆ ಮಾಲಿನ್ಯ ವಿಷಯದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಾದರೆ ಅರ್ಜಿ ಹಿಂತೆಗೆದುಕೊಳ್ಳಲಿದ್ದೇವೆ’ ಎಂದು ಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಹಾನಿಕಾರಕ ಹೊಗೆ ಹೊರಸೂಸುವಿಕೆ ತಗ್ಗಿಸುವ ತಂತ್ರಜ್ಞಾನ ಅಳವಡಿಸುವವರೆಗೆ ಸ್ಥಾವರಗಳ ಕಾರ್ಯಾಚರಣೆ ನಿಲ್ಲಿಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ಶುಕ್ರವಾರ ಹಿಂಪಡೆದಿದೆ.</p>.<p>ಉತ್ತರಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿರುವ ಕಲ್ಲಿದ್ದಲಿನ 10 ಉಷ್ಣ ವಿದ್ಯುತ್ ಸ್ಥಾವರಗಳಿಂದ ದೇಶದ ರಾಜಧಾನಿ ದೆಹಲಿಯಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಈ ಸ್ಥಾವರಗಳು ‘ಫ್ಲೂ ಗ್ಯಾಸ್ ಡೆಸಲ್ಫುರೈಸೇಷನ್’ ತಂತ್ರಜ್ಞಾನ ಅಳವಡಿಸಿಕೊಳ್ಳುವವರೆಗೆ ಸ್ಥಾವರಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿ ಆಲಿಸಿದ ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಆರ್. ಸುಭಾಷ್ ರೆಡ್ಡಿ ಅವರಿದ್ದ ನ್ಯಾಯಪೀಠವು ‘ಭಾರತ ಒಕ್ಕೂಟದ ವಿರುದ್ಧ ರಾಜ್ಯವು ಪಿಐಎಲ್ನೊಂದಿಗೆ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಬಂದಿರುವುದು ನಮಗೆ ಬಹಳ ಅಚ್ಚರಿ ನೀಡಿತು’ ಎಂದು ಹೇಳಿತು.</p>.<p>ದೆಹಲಿ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ಸಲ್ಫರ್ ಡೈ ಆಕ್ಸೈಡ್ ಮತ್ತು ನೈಟ್ರೋಜನ್ ಡೈ ಆಕ್ಸೈಡ್ ‘ಕೊಲೆಗಡುಕ ಅನಿಲಗಳು’ ಮತ್ತು ಈ ವಿಷಯವು ಮಾಲಿನ್ಯದಿಂದ ಬಳಲುತ್ತಿರುವ ನಾಗರಿಕರ ಆರೋಗ್ಯಕ್ಕೆ ಸಂಬಂಧಿಸಿದೆ ಎಂದು ಪೀಠದ ಗಮನಕ್ಕೆ ತಂದರು.</p>.<p>‘ನಮಗೆ ಕೇಳಲು ಹಲವು ಪ್ರಶ್ನೆಗಳಿವೆ’ ಎಂದ ಪೀಠವು, ‘ನೀವು ರಿಟ್ ಅರ್ಜಿ ಸಲ್ಲಿಸಿದ್ದೀರಿ. ಈ ರಿಟ್ ಅರ್ಜಿಯನ್ನು ನಾವು ಪರಿಗಣಿಸಬೇಕೆ ಅಥವಾ ಬೇಡವೇ ಎನ್ನುವ ಜಿಜ್ಞಾಸೆಯಲ್ಲೇ ನಾವು ಈ ಅರ್ಜಿಯನ್ನು ಪರಿಗಣಿಸುತ್ತಿದ್ದೇವೆ. ನಿಮ್ಮ ಪ್ರಕರಣಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರ ಈ ಹಿಂದೆ ಕೆಲವು ಹೇಳಿಕೆಗಳನ್ನು ಸಲ್ಲಿಸಿದೆ. ಅದಕ್ಕೆ ವಿರುದ್ಧವಾಗಿ ಈಗ ಕೇಂದ್ರ ನಡೆದುಕೊಂಡಿದ್ದರೆ ನೀವು ಅದನ್ನು ನ್ಯಾಯಾಲಯದ ಗಮನಕ್ಕೆ ತನ್ನಿ’ ಎಂದು ಅರ್ಜಿದಾರರಿಗೆ ತಿಳಿಸಿತು.</p>.<p>‘ಈ ಅರ್ಜಿಯ ಬಗ್ಗೆ ಪೀಠ ನೋಟಿಸ್ ಜಾರಿಗೊಳಿಸಬಹುದು ಮತ್ತು ಬಾಕಿ ಇರುವ ಪ್ರಕರಣಗಳೊಂದಿಗೆ ಈ ಅರ್ಜಿಯನ್ನು ಸೇರಿಸಿಕೊಳ್ಳಬಹುದು’ ಎಂದು ವಾದಿಸಿದ ಗೊನ್ಸಾಲ್ವೆಸ್, ‘ಮಾಲಿನ್ಯ ಉಲ್ಬಣಕ್ಕೆ ಕಾರಣವಾಗಿರುವ ಹಾನಿಕಾರಕ ಹೊಗೆ ಹೊರಸೂಸುವಿಕೆ ತಗ್ಗಿಸಲು ತಂತ್ರಜ್ಞಾನದ ಮಾನದಂಡ ಅಳವಡಿಸಿಕೊಳ್ಳುವ ಗಡುವು ಹತ್ತಿರಗೊಳಿಸಿ ನಿರ್ದೇಶನ ನೀಡಬೇಕು. ಜತೆಗೆ ಮಾಲಿನ್ಯ ವಿಷಯದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಾದರೆ ಅರ್ಜಿ ಹಿಂತೆಗೆದುಕೊಳ್ಳಲಿದ್ದೇವೆ’ ಎಂದು ಪೀಠಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>