<p>ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶೇ50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.</p><p>ನಿರ್ದೇಶನಗಳನ್ನು ಉಲ್ಲೇಘಿಸಿದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.</p><p>ಈ ವರ್ಷದ ಚಳಿಗಾಲದಲ್ಲಿ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿದ್ದು, ಡಿಸೆಂಬರ್ 15ರಂದು ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) 498ಕ್ಕೆ ತಲುಪಿತ್ತು</p><p>ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ(ಸಿಪಿಸಿಬಿ) ದತ್ತಾಂಶದ ಪ್ರಕಾರ, ಗಾಳಿಯ ಗುಣಮಟ್ಟ ಮೊದಲು ಕಳಪೆ ಮಟ್ಟದಲ್ಲಿತ್ತು. ಇದೀಗ, 'ತೀವ್ರ ಕಳಪೆ' ಮಟ್ಟಕ್ಕೆ ಏರಿದ್ದು, ಎಕ್ಯೂಐ ಕ್ಷೀಣಿಸುತ್ತಿದೆ. ಈ ಬಿಕ್ಕಟ್ಟಿನ ಪರಿಣಾಮವಾಗಿ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಪರಿಸ್ಥಿತಿಯನ್ನು ನಿಭಾಯಿಸುವ ಭರವಸೆಯಲ್ಲಿ ರಾಜಧಾನಿಯಾದ್ಯಂತ ಗ್ರಾಪ್ 4(ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳು)</p><p> ಅನ್ನು ತ್ವರಿತವಾಗಿ ಅನ್ವಯಿಸಿತು ಎಂದು ಸರ್ಕಾರ ಹೇಳಿದೆ.</p><p>ಕಳೆದ ಶನಿವಾರ ಮತ್ತು ಸೋಮವಾರದ ನಡುವೆ ರಾಜಧಾನಿಯಲ್ಲಿ ಹೊಗೆಯ ಮುಸುಕು ಆವರಿಸಿ, ಅನೇಕ ರಸ್ತೆ ಅಪಘಾತಗಳು, ವಾಹನ ದಟ್ಟಣೆ ಮತ್ತು ವಿಮಾನ ರದ್ದತಿ ಹಾಗೂ ವಿಳಂಬಕ್ಕೆ ಕಾರಣವಾಗಿದೆ.</p><p> ಗೋಚರತೆ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೆಹಲಿ ವಿಮಾನ ನಿಲ್ದಾಣದ ಆಢಳಿತ ಮಂಡಳಿಯು ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಸಲಹೆಗಳನ್ನು ನೀಡಿತ್ತು.</p><p> ಮೂರು ದಿನಗಳ ನಂತರ, ಬಲವಾದ ಗಾಳಿ ಮತ್ತು ಮಂಜು ಕರಗುತ್ತಿರುವ ಹಿನ್ನೆಲೆಯಲ್ಲಿ ಗಾಳಿಯ ಗುಣಮಟ್ಟ ಸ್ವಲ್ಪ ಸುಧಾರಿಸಿದೆ. ಮಂಗಳವಾರದ ಎಕ್ಯೂಐ 354 ರಿಂದ 329ಕ್ಕೆ ಇಳಿದಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶೇ50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.</p><p>ನಿರ್ದೇಶನಗಳನ್ನು ಉಲ್ಲೇಘಿಸಿದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.</p><p>ಈ ವರ್ಷದ ಚಳಿಗಾಲದಲ್ಲಿ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿದ್ದು, ಡಿಸೆಂಬರ್ 15ರಂದು ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) 498ಕ್ಕೆ ತಲುಪಿತ್ತು</p><p>ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ(ಸಿಪಿಸಿಬಿ) ದತ್ತಾಂಶದ ಪ್ರಕಾರ, ಗಾಳಿಯ ಗುಣಮಟ್ಟ ಮೊದಲು ಕಳಪೆ ಮಟ್ಟದಲ್ಲಿತ್ತು. ಇದೀಗ, 'ತೀವ್ರ ಕಳಪೆ' ಮಟ್ಟಕ್ಕೆ ಏರಿದ್ದು, ಎಕ್ಯೂಐ ಕ್ಷೀಣಿಸುತ್ತಿದೆ. ಈ ಬಿಕ್ಕಟ್ಟಿನ ಪರಿಣಾಮವಾಗಿ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಪರಿಸ್ಥಿತಿಯನ್ನು ನಿಭಾಯಿಸುವ ಭರವಸೆಯಲ್ಲಿ ರಾಜಧಾನಿಯಾದ್ಯಂತ ಗ್ರಾಪ್ 4(ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳು)</p><p> ಅನ್ನು ತ್ವರಿತವಾಗಿ ಅನ್ವಯಿಸಿತು ಎಂದು ಸರ್ಕಾರ ಹೇಳಿದೆ.</p><p>ಕಳೆದ ಶನಿವಾರ ಮತ್ತು ಸೋಮವಾರದ ನಡುವೆ ರಾಜಧಾನಿಯಲ್ಲಿ ಹೊಗೆಯ ಮುಸುಕು ಆವರಿಸಿ, ಅನೇಕ ರಸ್ತೆ ಅಪಘಾತಗಳು, ವಾಹನ ದಟ್ಟಣೆ ಮತ್ತು ವಿಮಾನ ರದ್ದತಿ ಹಾಗೂ ವಿಳಂಬಕ್ಕೆ ಕಾರಣವಾಗಿದೆ.</p><p> ಗೋಚರತೆ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೆಹಲಿ ವಿಮಾನ ನಿಲ್ದಾಣದ ಆಢಳಿತ ಮಂಡಳಿಯು ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಸಲಹೆಗಳನ್ನು ನೀಡಿತ್ತು.</p><p> ಮೂರು ದಿನಗಳ ನಂತರ, ಬಲವಾದ ಗಾಳಿ ಮತ್ತು ಮಂಜು ಕರಗುತ್ತಿರುವ ಹಿನ್ನೆಲೆಯಲ್ಲಿ ಗಾಳಿಯ ಗುಣಮಟ್ಟ ಸ್ವಲ್ಪ ಸುಧಾರಿಸಿದೆ. ಮಂಗಳವಾರದ ಎಕ್ಯೂಐ 354 ರಿಂದ 329ಕ್ಕೆ ಇಳಿದಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>