<p><strong>ನವದೆಹಲಿ</strong>: ವಿಮಾನಯಾನ ಸಂಸ್ಥೆಗಳು ಕೆಲವು ಸಂದರ್ಭಗಳಲ್ಲಿ ವಿಮಾನ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡುವುದನ್ನು ತಡೆಯಲು ಕಾರ್ಯವಿಧಾನವೊಂದನ್ನು ಜಾರಿಗೆ ತರುವುದಾಗಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.</p>.<p>ಸಂಸದೀಯ ಸ್ಥಾಯಿ ಸಮಿತಿ ಸದಸ್ಯರು ಮಂಗಳವಾರ ನಡೆದ ಸಭೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಹಿರಿಯ ಅಧಿಕಾರಿಗಳು, ವಿವಿಧ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳ ಜತೆ ಚರ್ಚಿಸಿದರು. </p>.<p class="title">ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭ ಮೇಳದ ಸಂದರ್ಭ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕೆಲವು ವಿಮಾನಯಾನ ಸಂಸ್ಥೆಗಳು ಟಿಕೆಟ್ ದರ ಬೇಕಾಬಿಟ್ಟಿ ಹೆಚ್ಚಿಸಿದ್ದನ್ನು ಸಮಿತಿಯ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಶ್ರೀನಗರಿಂದ ವಿವಿಧೆಡೆಗೆ ಸಂಚರಿಸುವ ವಿಮಾನಗಳ ಟಿಕೆಟ್ ದರವನ್ನು ಹೆಚ್ಚಿಸಿರುವುದಕ್ಕೆ ಸದಸ್ಯರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಡಿಜಿಸಿಎ ಅಧಿಕಾರಿಯೊಬ್ಬರು, ‘ವಿಮಾನಯಾನ ಸಂಸ್ಥೆಗಳೊಂದಿಗೆ ಈ ಕುರಿತು ಚರ್ಚಿಸುತ್ತಿದ್ದೇವೆ. ಇದನ್ನು ತಡೆಯಲು ವ್ಯವಸ್ಥೆಯೊಂದನ್ನು ಜಾರಿಗೆ ತರುವ ಬಗ್ಗೆ ಒಮ್ಮತ ಮೂಡಿಸಲು ಮಾತುಕತೆ ನಡೆಸುತ್ತೇವೆ’ ಎಂದರು.</p>.<p>ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸಂಸದರೊಬ್ಬರು, ‘ಒಮ್ಮತ ಮೂಡುವವರೆಗೆ ಈ ಅನ್ಯಾಯ ಮುಂದುವರಿಯುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ. ವಿಮಾನಯಾನ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಡಿಜಿಸಿಎಗೆ ಇದೆ ಎಂದು ಇತರ ಕೆಲವು ಸಂಸದರು ಹೇಳಿದ್ದಾರೆ. </p>.<p>‘ಟಿಕೆಟ್ ದರ ಬೇಕಾಬಿಟ್ಟಿಯಾಗಿ ಹೆಚ್ಚಿಸುವುದನ್ನು ತಡೆಯಲು ಮಾರ್ಗಸೂಚಿಗಳನ್ನು ಜಾರಿಗೆ ತರುವುದಾಗಿ ಈ ವೇಳೆ ಡಿಜಿಸಿಎ ಸಭೆಗೆ ತಿಳಿಸಿತು’ ಎಂದು ಮೂಲಗಳು ವಿವರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಮಾನಯಾನ ಸಂಸ್ಥೆಗಳು ಕೆಲವು ಸಂದರ್ಭಗಳಲ್ಲಿ ವಿಮಾನ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡುವುದನ್ನು ತಡೆಯಲು ಕಾರ್ಯವಿಧಾನವೊಂದನ್ನು ಜಾರಿಗೆ ತರುವುದಾಗಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.</p>.<p>ಸಂಸದೀಯ ಸ್ಥಾಯಿ ಸಮಿತಿ ಸದಸ್ಯರು ಮಂಗಳವಾರ ನಡೆದ ಸಭೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಹಿರಿಯ ಅಧಿಕಾರಿಗಳು, ವಿವಿಧ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳ ಜತೆ ಚರ್ಚಿಸಿದರು. </p>.<p class="title">ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭ ಮೇಳದ ಸಂದರ್ಭ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕೆಲವು ವಿಮಾನಯಾನ ಸಂಸ್ಥೆಗಳು ಟಿಕೆಟ್ ದರ ಬೇಕಾಬಿಟ್ಟಿ ಹೆಚ್ಚಿಸಿದ್ದನ್ನು ಸಮಿತಿಯ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಶ್ರೀನಗರಿಂದ ವಿವಿಧೆಡೆಗೆ ಸಂಚರಿಸುವ ವಿಮಾನಗಳ ಟಿಕೆಟ್ ದರವನ್ನು ಹೆಚ್ಚಿಸಿರುವುದಕ್ಕೆ ಸದಸ್ಯರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಡಿಜಿಸಿಎ ಅಧಿಕಾರಿಯೊಬ್ಬರು, ‘ವಿಮಾನಯಾನ ಸಂಸ್ಥೆಗಳೊಂದಿಗೆ ಈ ಕುರಿತು ಚರ್ಚಿಸುತ್ತಿದ್ದೇವೆ. ಇದನ್ನು ತಡೆಯಲು ವ್ಯವಸ್ಥೆಯೊಂದನ್ನು ಜಾರಿಗೆ ತರುವ ಬಗ್ಗೆ ಒಮ್ಮತ ಮೂಡಿಸಲು ಮಾತುಕತೆ ನಡೆಸುತ್ತೇವೆ’ ಎಂದರು.</p>.<p>ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸಂಸದರೊಬ್ಬರು, ‘ಒಮ್ಮತ ಮೂಡುವವರೆಗೆ ಈ ಅನ್ಯಾಯ ಮುಂದುವರಿಯುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ. ವಿಮಾನಯಾನ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಡಿಜಿಸಿಎಗೆ ಇದೆ ಎಂದು ಇತರ ಕೆಲವು ಸಂಸದರು ಹೇಳಿದ್ದಾರೆ. </p>.<p>‘ಟಿಕೆಟ್ ದರ ಬೇಕಾಬಿಟ್ಟಿಯಾಗಿ ಹೆಚ್ಚಿಸುವುದನ್ನು ತಡೆಯಲು ಮಾರ್ಗಸೂಚಿಗಳನ್ನು ಜಾರಿಗೆ ತರುವುದಾಗಿ ಈ ವೇಳೆ ಡಿಜಿಸಿಎ ಸಭೆಗೆ ತಿಳಿಸಿತು’ ಎಂದು ಮೂಲಗಳು ವಿವರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>