<p><strong>ಅಹಮದಾಬಾದ್:</strong> ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು ಎಂದೆನ್ನಲಾಗಿದೆ.</p><p>ಏರ್ ಇಂಡಿಯಾಗೆ ಸೇರಿದ AI–171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್ಆಫ್ ಆಗಿತ್ತು.</p><ul><li><p>ಪತನವಾಗುವ ಸಂದರ್ಭದಲ್ಲಿ ವಿಮಾನ ನೆಲಮಟ್ಟದಿಂದ 825 ಅಡಿ ಎತ್ತರದಲ್ಲಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ</p></li><li><p>ವಿಮಾನ ಪತನಗೊಂಡಿರುವ ಅಹಮದಾಬಾದ್ನ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ</p></li><li><p>ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದೆ</p></li><li><p>ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್ಗಳು ಧಾವಿಸಿವೆ</p></li><li><p>ವಿಮಾನ ಅಪಘಾತದ ಕುರಿತ ಮಾಹಿತಿಯನ್ನು ಕಾಲಕಾಲಕ್ಕೆ ನೀಡುವುದಾಗಿ ಏರ್ಇಂಡಿಯಾ ಹೇಳಿದೆ. </p></li><li><p>ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. </p></li><li><p>ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ</p></li><li><p>ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲೆಟ್ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.</p></li><li><p>ಘಟನೆಗೆ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಮೋಟಾರ್ಸ್ನ ಅಧ್ಯಕ್ಷ ///ಚಂದ್ರಶೇಖರ್ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಕುಟುಂಬದವರ ನೆರವಿಗೆ ಧಾವಿಸುವುದಾಗಿ ಹೇಳಿದ್ದಾರೆ.</p></li><li><p>ಅಹ್ಮದಾಬಾದ್ನಿಂದ ಹೊರಟ AI-171 ಗುರುವಾರ ಸಂಜೆಯ 6.25ಕ್ಕೆ ಬ್ರಿಟನ್ನ ಗ್ಯಾಟ್ವಿಕ್ನಲ್ಲಿ ಲ್ಯಾಂಡ್ ಆಗಬೇಕಿತ್ತು</p></li><li><p>ತುರ್ತು ಸಂಖ್ಯೆಯನ್ನು ಏರ್ ಇಂಡಿಯಾ ಆರಂಭಿಸಿದೆ 1800 5691 444 </p></li><li><p>ಘಟನೆಗೆ ಉದ್ಯಮಿ ಗೌತಮ್ ಅದಾನಿ ಆಘಾತ</p></li><li><p>ವಿಮಾನ ಬಿದ್ದ ಕಟ್ಟಡದಲ್ಲಿದ್ದ 5 ವೈದ್ಯಕೀಯ ವಿದ್ಯಾರ್ಥಿಗಳ ಸಾವು</p></li><li><p>ಅಹಮದಾಬಾದ್ನಲ್ಲಿ ಸಂಭವಿಸಿರುವ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ. </p></li><li><p>ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಸಮೂಹ ಘೋಷಿಸಿದೆ.</p></li></ul>.Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು ಎಂದೆನ್ನಲಾಗಿದೆ.</p><p>ಏರ್ ಇಂಡಿಯಾಗೆ ಸೇರಿದ AI–171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್ಆಫ್ ಆಗಿತ್ತು.</p><ul><li><p>ಪತನವಾಗುವ ಸಂದರ್ಭದಲ್ಲಿ ವಿಮಾನ ನೆಲಮಟ್ಟದಿಂದ 825 ಅಡಿ ಎತ್ತರದಲ್ಲಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ</p></li><li><p>ವಿಮಾನ ಪತನಗೊಂಡಿರುವ ಅಹಮದಾಬಾದ್ನ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ</p></li><li><p>ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದೆ</p></li><li><p>ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್ಗಳು ಧಾವಿಸಿವೆ</p></li><li><p>ವಿಮಾನ ಅಪಘಾತದ ಕುರಿತ ಮಾಹಿತಿಯನ್ನು ಕಾಲಕಾಲಕ್ಕೆ ನೀಡುವುದಾಗಿ ಏರ್ಇಂಡಿಯಾ ಹೇಳಿದೆ. </p></li><li><p>ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. </p></li><li><p>ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ</p></li><li><p>ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲೆಟ್ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.</p></li><li><p>ಘಟನೆಗೆ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಮೋಟಾರ್ಸ್ನ ಅಧ್ಯಕ್ಷ ///ಚಂದ್ರಶೇಖರ್ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಕುಟುಂಬದವರ ನೆರವಿಗೆ ಧಾವಿಸುವುದಾಗಿ ಹೇಳಿದ್ದಾರೆ.</p></li><li><p>ಅಹ್ಮದಾಬಾದ್ನಿಂದ ಹೊರಟ AI-171 ಗುರುವಾರ ಸಂಜೆಯ 6.25ಕ್ಕೆ ಬ್ರಿಟನ್ನ ಗ್ಯಾಟ್ವಿಕ್ನಲ್ಲಿ ಲ್ಯಾಂಡ್ ಆಗಬೇಕಿತ್ತು</p></li><li><p>ತುರ್ತು ಸಂಖ್ಯೆಯನ್ನು ಏರ್ ಇಂಡಿಯಾ ಆರಂಭಿಸಿದೆ 1800 5691 444 </p></li><li><p>ಘಟನೆಗೆ ಉದ್ಯಮಿ ಗೌತಮ್ ಅದಾನಿ ಆಘಾತ</p></li><li><p>ವಿಮಾನ ಬಿದ್ದ ಕಟ್ಟಡದಲ್ಲಿದ್ದ 5 ವೈದ್ಯಕೀಯ ವಿದ್ಯಾರ್ಥಿಗಳ ಸಾವು</p></li><li><p>ಅಹಮದಾಬಾದ್ನಲ್ಲಿ ಸಂಭವಿಸಿರುವ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ. </p></li><li><p>ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಸಮೂಹ ಘೋಷಿಸಿದೆ.</p></li></ul>.Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>