<p><strong>ನವದೆಹಲಿ</strong>: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಇದ್ದರೂ ವಿಮಾನಗಳ ಸಂಖ್ಯೆ ಮಾಡಿರುವ ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. </p>.<p>ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶುಕ್ರವಾರ ವಿಷಯ ಪ್ರಸ್ತಾಪಿಸಿದ ಅವರು, ‘ಬೆಳಗಾವಿಯು ಕರ್ನಾಟಕದ ಎರಡನೇ ರಾಜಧಾನಿ. ₹263 ಕೋಟಿ ವ್ಯಯ ಮಾಡಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ವಿಸ್ತರಣೆಗೆ ₹26 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಹಿಂದೆ ಐದು ವಿಮಾನಯಾನ ಸಂಸ್ಥೆಗಳ ಮೂಲಕ 13 ನಗರಗಳಿಗೆ ವಿಮಾನ ಸೇವೆ ಇತ್ತು. ಈಗ ಎರಡು ಸಂಸ್ಥೆಗಳು ಐದು ನಗರಗಳಿಗಷ್ಟೇ ಸೇವೆ ನೀಡುತ್ತಿವೆ‘ ಎಂದರು. </p>.<p>ಬೆಳಗಾವಿಯಿಂದ 2024-25 ರಲ್ಲಿ ₹3.40 ಲಕ್ಷ ಜನರು ಪ್ರಯಾಣಿಸಿದ್ದರು. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರೂ ಸೇವೆ ಸ್ಥಗಿತಗೊಳಿಸಲಾಗಿದೆ. ಉಡಾನ್ ಯೋಜನೆಯಡಿ ಸರ್ಕಾರ ಸಬ್ಸಿಡಿ ನೀಡುವ ವರೆಗೂ ಸಂಸ್ಥೆಗಳು ಸೇವೆಗಳು ಸಲ್ಲಿಸುತ್ತವೆ. ಬಳಿಕ ಏಕಾಏಕಿ ಸೇವೆ ನಿಲ್ಲಿಸುತ್ತವೆ ಎಂದು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಇದ್ದರೂ ವಿಮಾನಗಳ ಸಂಖ್ಯೆ ಮಾಡಿರುವ ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. </p>.<p>ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶುಕ್ರವಾರ ವಿಷಯ ಪ್ರಸ್ತಾಪಿಸಿದ ಅವರು, ‘ಬೆಳಗಾವಿಯು ಕರ್ನಾಟಕದ ಎರಡನೇ ರಾಜಧಾನಿ. ₹263 ಕೋಟಿ ವ್ಯಯ ಮಾಡಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ವಿಸ್ತರಣೆಗೆ ₹26 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಹಿಂದೆ ಐದು ವಿಮಾನಯಾನ ಸಂಸ್ಥೆಗಳ ಮೂಲಕ 13 ನಗರಗಳಿಗೆ ವಿಮಾನ ಸೇವೆ ಇತ್ತು. ಈಗ ಎರಡು ಸಂಸ್ಥೆಗಳು ಐದು ನಗರಗಳಿಗಷ್ಟೇ ಸೇವೆ ನೀಡುತ್ತಿವೆ‘ ಎಂದರು. </p>.<p>ಬೆಳಗಾವಿಯಿಂದ 2024-25 ರಲ್ಲಿ ₹3.40 ಲಕ್ಷ ಜನರು ಪ್ರಯಾಣಿಸಿದ್ದರು. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರೂ ಸೇವೆ ಸ್ಥಗಿತಗೊಳಿಸಲಾಗಿದೆ. ಉಡಾನ್ ಯೋಜನೆಯಡಿ ಸರ್ಕಾರ ಸಬ್ಸಿಡಿ ನೀಡುವ ವರೆಗೂ ಸಂಸ್ಥೆಗಳು ಸೇವೆಗಳು ಸಲ್ಲಿಸುತ್ತವೆ. ಬಳಿಕ ಏಕಾಏಕಿ ಸೇವೆ ನಿಲ್ಲಿಸುತ್ತವೆ ಎಂದು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>