<p><strong>ಪುಟ್ಟಪರ್ತಿ:</strong> ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ವೇಳೆ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. </p><p>ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭವು ಈ ಕ್ಷಣಕ್ಕೆ ಸಾಕ್ಷಿಯಾಯಿತು. </p><p>ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. </p><p>ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಮಾತನಾಡಿದ ಐಶ್ವರ್ಯಾ, 'ಇಲ್ಲಿ ನಿಮ್ಮ ಉಪಸ್ಥಿತಿಯು ಶತಮಾನೋತ್ಸವ ಕಾರ್ಯಕ್ರಮಗಳಿಗೆ ಸ್ಪೂರ್ತಿಯನ್ನು ನೀಡುತ್ತದೆ' ಎಂದು ಹೇಳಿದ್ದಾರೆ. </p><p>ಸತ್ಯ ಸಾಯಿ ಬಾಲ ವಿಕಾಸದ ಮಾಜಿ ವಿದ್ಯಾರ್ಥಿನಿ ಆಗಿರುವ ಐಶ್ಚರ್ಯಾ, 'ಸತ್ಯಸಾಯಿ ಬಾಬಾ ಅವರ ಭೋಧನೆ, ಮಾರ್ಗದರ್ಶನ ಮತ್ತು ಕರುಣೆ ವಿಶ್ವದಾದ್ಯಂತ ಲಕ್ಷಾಂತರ ಜನರ ಹೃದಯಗಳಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ' ಎಂದಿದ್ದಾರೆ. </p><p>ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. </p>.ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜಯಂತಿ: ಪ್ರಧಾನಿ ನರೇಂದ್ರ ಮೋದಿ ವಿಶೇಷ ಲೇಖನ.ಸತ್ಯಸಾಯಿ ಬಾಬಾ ಶತಮಾನೋತ್ಸವ: ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಟ್ಟಪರ್ತಿ:</strong> ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ವೇಳೆ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. </p><p>ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭವು ಈ ಕ್ಷಣಕ್ಕೆ ಸಾಕ್ಷಿಯಾಯಿತು. </p><p>ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. </p><p>ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಮಾತನಾಡಿದ ಐಶ್ವರ್ಯಾ, 'ಇಲ್ಲಿ ನಿಮ್ಮ ಉಪಸ್ಥಿತಿಯು ಶತಮಾನೋತ್ಸವ ಕಾರ್ಯಕ್ರಮಗಳಿಗೆ ಸ್ಪೂರ್ತಿಯನ್ನು ನೀಡುತ್ತದೆ' ಎಂದು ಹೇಳಿದ್ದಾರೆ. </p><p>ಸತ್ಯ ಸಾಯಿ ಬಾಲ ವಿಕಾಸದ ಮಾಜಿ ವಿದ್ಯಾರ್ಥಿನಿ ಆಗಿರುವ ಐಶ್ಚರ್ಯಾ, 'ಸತ್ಯಸಾಯಿ ಬಾಬಾ ಅವರ ಭೋಧನೆ, ಮಾರ್ಗದರ್ಶನ ಮತ್ತು ಕರುಣೆ ವಿಶ್ವದಾದ್ಯಂತ ಲಕ್ಷಾಂತರ ಜನರ ಹೃದಯಗಳಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ' ಎಂದಿದ್ದಾರೆ. </p><p>ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. </p>.ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜಯಂತಿ: ಪ್ರಧಾನಿ ನರೇಂದ್ರ ಮೋದಿ ವಿಶೇಷ ಲೇಖನ.ಸತ್ಯಸಾಯಿ ಬಾಬಾ ಶತಮಾನೋತ್ಸವ: ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>