<p><strong>ನವದೆಹಲಿ:</strong> ಭಾರತ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಭದ್ರತೆ ಹೆಚ್ಚಿಸಬೇಕು. ಇತಿಹಾಸದಲ್ಲಿ ನಡೆದ ದಾಳಿಗಳ ವಿರುದ್ಧ ‘ಪ್ರತೀಕಾರ’ಕ್ಕಾಗಿ ಮತ್ತು ಮುಂದೆ ಅಂಥ ದಾಳಿಗಳನ್ನು ತಡೆಯಲು ಭದ್ರತೆಯನ್ನು ಬಲಗೊಳಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಹೇಳಿದರು.</p>.<p>ವಿಕಸಿತ ಭಾರತ ಯುವ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ‘ನೀವೆಲ್ಲಾ ಅದೃಷ್ಟವಂತರು, ಸ್ವತಂತ್ರ ಭಾರತದಲ್ಲಿ ಜನಿಸಿದ್ದೀರಿ. ನಾನು ವಸಹಾತುಶಾಹಿ ಭಾರತದಲ್ಲಿ ಜನಿಸಿದೆ. ನನ್ನ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅನೇಕ ವಿಚಾರಣೆಗಳನ್ನು ಎದುರಿಸಿದರು’ ಎಂದು ಹೇಳಿದರು.</p>.<p>‘ಭಗತ್ ಸಿಂಗ್ ಅವರಂತಹ ವ್ಯಕ್ತಿಗಳನ್ನು ಗಲ್ಲಿಗೇರಿಸಲಾಯಿತು, ಸುಭಾಷ್ ಚಂದ್ರ ಬೋಸ್ ಅವರು ಜೀವನವಿಡೀ ಕಷ್ಟಪಟ್ಟರು ಮತ್ತು ನಮಗೆ ಸ್ವಾತಂತ್ರ್ಯ ಕೊಡಿಸಲು ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ ಮಾಡಿದರು’ ಎಂದರು.</p>.<p>‘ಸೇಡು ಅಥವಾ ಪ್ರತೀಕಾರ ಎಂಬುದು ಒಳ್ಳೆಯ ಪದವಲ್ಲ. ಆದರೆ, ಸರಿಯಾಗಿ ಬಳಸಿದರೆ ಅದು ದೊಡ್ಡ ಶಕ್ತಿಯಾಗಬಹುದು. ನಾವು ನಮ್ಮ ಇತಿಹಾಸದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ಗಡಿ ಭದ್ರತೆಯ ವಿಷಯದಲ್ಲಿ ಮಾತ್ರವಲ್ಲದೆ ಆರ್ಥಿಕತೆ, ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಪ್ರತಿಯೊಂದು ವಿಚಾರದಲ್ಲಿಯೂ ಈ ದೇಶವನ್ನು ಶ್ರೇಷ್ಠ ಹಂತಕ್ಕೆ ಕೊಂಡೊಯ್ಯಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಒಮ್ಮೆ ನೆಪೋಲಿಯನ್, ‘ಕುರಿಯೊಂದರ ನೇತೃತ್ವದ 1,000 ಸಿಂಹಗಳ ಗುಂಪಿಗೆ ನಾನು ಹೆದರುವುದಿಲ್ಲ, ಅದೇ ಸಿಂಹವೊಂದರ ನೇತೃತ್ವದ 1,000 ಕುರಿಗಳ ಹಿಂಡಿಗೆ ಹೆದರುತ್ತೇನೆ’ ಎಂದಿದ್ದರು. ನಾಯಕತ್ವ ಎನ್ನುವುದು ಅಷ್ಟು ಮಹತ್ವದ್ದು’ ಎಂದು ಹೇಳಿದರು.</p>.<p>‘ನಾವು ಪ್ರಗತಿಶೀಲ ಸಮಾಜವನ್ನು ಹೊಂದಿದ್ದೇವೆ. ಬೇರೆ ನಾಗರಿಕತೆಗಳು ಅಥವಾ ದೇಗುಲಗಳ ಮೇಲೆ ನಾವು ದಾಳಿ ನಡೆಸಿಲ್ಲ. ಆದರೆ ಭದ್ರತೆಯ ವಿಚಾರದಲ್ಲಿ ಇತಿಹಾಸ ಕಲಿಸಿದ ಪಾಠವನ್ನು ಅರ್ಥ ಮಾಡಿಕೊಳ್ಳುವಲ್ಲಿ ಎಡವಿದ್ದೇವೆ’ ಎಂದು ವಿವರಿಸಿದರು.</p>.<p>‘ಹಿಂದೆ ಕಲಿತ ಪಾಠಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಮುಖ್ಯ. ಈ ದೇಶದ ಯುವಜನರು ಅದನ್ನು ಮರೆತ,ರೆ ದೇಶದ ಪಾಲಿಗೆ ಅದು ದುರಂತವಾಗಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಭದ್ರತೆ ಹೆಚ್ಚಿಸಬೇಕು. ಇತಿಹಾಸದಲ್ಲಿ ನಡೆದ ದಾಳಿಗಳ ವಿರುದ್ಧ ‘ಪ್ರತೀಕಾರ’ಕ್ಕಾಗಿ ಮತ್ತು ಮುಂದೆ ಅಂಥ ದಾಳಿಗಳನ್ನು ತಡೆಯಲು ಭದ್ರತೆಯನ್ನು ಬಲಗೊಳಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಹೇಳಿದರು.</p>.<p>ವಿಕಸಿತ ಭಾರತ ಯುವ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ‘ನೀವೆಲ್ಲಾ ಅದೃಷ್ಟವಂತರು, ಸ್ವತಂತ್ರ ಭಾರತದಲ್ಲಿ ಜನಿಸಿದ್ದೀರಿ. ನಾನು ವಸಹಾತುಶಾಹಿ ಭಾರತದಲ್ಲಿ ಜನಿಸಿದೆ. ನನ್ನ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅನೇಕ ವಿಚಾರಣೆಗಳನ್ನು ಎದುರಿಸಿದರು’ ಎಂದು ಹೇಳಿದರು.</p>.<p>‘ಭಗತ್ ಸಿಂಗ್ ಅವರಂತಹ ವ್ಯಕ್ತಿಗಳನ್ನು ಗಲ್ಲಿಗೇರಿಸಲಾಯಿತು, ಸುಭಾಷ್ ಚಂದ್ರ ಬೋಸ್ ಅವರು ಜೀವನವಿಡೀ ಕಷ್ಟಪಟ್ಟರು ಮತ್ತು ನಮಗೆ ಸ್ವಾತಂತ್ರ್ಯ ಕೊಡಿಸಲು ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ ಮಾಡಿದರು’ ಎಂದರು.</p>.<p>‘ಸೇಡು ಅಥವಾ ಪ್ರತೀಕಾರ ಎಂಬುದು ಒಳ್ಳೆಯ ಪದವಲ್ಲ. ಆದರೆ, ಸರಿಯಾಗಿ ಬಳಸಿದರೆ ಅದು ದೊಡ್ಡ ಶಕ್ತಿಯಾಗಬಹುದು. ನಾವು ನಮ್ಮ ಇತಿಹಾಸದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ಗಡಿ ಭದ್ರತೆಯ ವಿಷಯದಲ್ಲಿ ಮಾತ್ರವಲ್ಲದೆ ಆರ್ಥಿಕತೆ, ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಪ್ರತಿಯೊಂದು ವಿಚಾರದಲ್ಲಿಯೂ ಈ ದೇಶವನ್ನು ಶ್ರೇಷ್ಠ ಹಂತಕ್ಕೆ ಕೊಂಡೊಯ್ಯಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಒಮ್ಮೆ ನೆಪೋಲಿಯನ್, ‘ಕುರಿಯೊಂದರ ನೇತೃತ್ವದ 1,000 ಸಿಂಹಗಳ ಗುಂಪಿಗೆ ನಾನು ಹೆದರುವುದಿಲ್ಲ, ಅದೇ ಸಿಂಹವೊಂದರ ನೇತೃತ್ವದ 1,000 ಕುರಿಗಳ ಹಿಂಡಿಗೆ ಹೆದರುತ್ತೇನೆ’ ಎಂದಿದ್ದರು. ನಾಯಕತ್ವ ಎನ್ನುವುದು ಅಷ್ಟು ಮಹತ್ವದ್ದು’ ಎಂದು ಹೇಳಿದರು.</p>.<p>‘ನಾವು ಪ್ರಗತಿಶೀಲ ಸಮಾಜವನ್ನು ಹೊಂದಿದ್ದೇವೆ. ಬೇರೆ ನಾಗರಿಕತೆಗಳು ಅಥವಾ ದೇಗುಲಗಳ ಮೇಲೆ ನಾವು ದಾಳಿ ನಡೆಸಿಲ್ಲ. ಆದರೆ ಭದ್ರತೆಯ ವಿಚಾರದಲ್ಲಿ ಇತಿಹಾಸ ಕಲಿಸಿದ ಪಾಠವನ್ನು ಅರ್ಥ ಮಾಡಿಕೊಳ್ಳುವಲ್ಲಿ ಎಡವಿದ್ದೇವೆ’ ಎಂದು ವಿವರಿಸಿದರು.</p>.<p>‘ಹಿಂದೆ ಕಲಿತ ಪಾಠಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಮುಖ್ಯ. ಈ ದೇಶದ ಯುವಜನರು ಅದನ್ನು ಮರೆತ,ರೆ ದೇಶದ ಪಾಲಿಗೆ ಅದು ದುರಂತವಾಗಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>