ಮುಂಬೈ: ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣದಿಂದ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರನ್ನು ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಇಳಿಸಲಾಗಿದೆ.
ಎನ್ಸಿಪಿ ಅಜಿತ್ ಪವಾರ್ ಬಣದ ಮುಖ್ಯಸ್ಥ ಸುನೀಲ್ ತತ್ಕರೆ ಅವರು ಈ ವಿಷಯವನ್ನು ಬುಧವಾರ ತಿಳಿಸಿದ್ದಾರೆ.
ಶರದ್ ಪವಾರ್ ಅವರ ಎನ್ಸಿಪಿ ಎರಡು ಹೋಳಾದ ನಂತರ ಅಜಿತ್ ಪವಾರ್ ಅವರ ಜೊತೆ ಪ್ರಫುಲ್ ಪಟೇಲ್ ಅವರು ಗುರುತಿಸಿಕೊಂಡಿದ್ದಾರೆ.
ಅವರು 2014ರಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ.