<p><strong>ಪುಣೆ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಸಾವಿಗೀಡಾದ ವಿಮಾನ ಪತನ ದುರಂತದ ಸಮಗ್ರ ತನಿಖೆ ನಡೆಸಲು ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದಾರೆ. </p><p>ತಮ್ಮ ತಂದೆಯ ಸಾವಿಗೆ ಕಾರಣವಾದ ವಿಮಾನ ಅಪಘಾತದ ಹಿಂದಿನ ಸಂಭವನೀಯ ಗಂಭೀರ ಲೋಪಗಳ ಕುರಿತು ಸಮಗ್ರ ತನಿಖೆಯಾಗಬೇಕು. ವಿಮಾನದ ಕಪ್ಪು ಪೆಟ್ಟಿಗೆಯನ್ನು ಸುಲಭವಾಗಿ ನಾಶಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. </p><p>ಜ.28ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಎಸ್ಆರ್ ವೆಂಚರ್ಸ್ನ 'ಲಿಯರ್ಜೆಟ್–45' ವಿಮಾನವು ಪತನಗೊಂಡಿತ್ತು. </p><p>ಮಹಾರಾಷ್ಟ್ರದ ಜನರಿಗೆ ವಿಮಾನ ದುರಂತದ ಸಂಪೂರ್ಣ ಸತ್ಯವನ್ನು ತಿಳಿದುಕೊಳ್ಳುವ ಹಕ್ಕು ಇದೆ. ಪಾರದರ್ಶಕ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ. </p><p>ಇದೇ ಸಂದರ್ಭದಲ್ಲಿ ವಿಎಸ್ಆರ್ ವಿಮಾನಯಾನ ಸಂಸ್ಥೆಯ ಮೇಲೆ ನಿಷೇಧ ಹೇರುವಂತೆಯೂ ಆಗ್ರಹಿಸಿದ್ದಾರೆ. </p><p>ಎನ್ಸಿಪಿ ನಾಯಕ ಪ್ರಫುಲ್ ಪಟೇಲ್ ವಿಮಾನ ದುರಂತಕ್ಕೆ ವಿಮಾನಯಾನ ಸಂಸ್ಥೆಯ ಕಾರಣ ಆಗಿರಬಹುದು. ಪೈಲಟ್ನ ನಿರ್ಲಕ್ಷ್ಯವೂ ಇರಬಹುದು. ಆದರೆ ಎಲ್ಲ ಆಯಾಮಗಳ ತನಿಖೆಯ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ. </p>.ಅಜಿತ್ ಪವಾರ್ ಇದ್ದ ವಿಮಾನ ದುರಂತ: ದತ್ತಾಂಶ ಪಡೆಯಲು ಅಮೆರಿಕದ ಬೆಂಬಲ ಕೋರಿಕೆ.ಅಜಿತ್ ಪವಾರ್ ವಿಮಾನ ದುರಂತ ಪಿತೂರಿಯ ಭಾಗವಾಗಿರಬಹುದು: ರೋಹಿತ್ ಪವಾರ್ ಅನುಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಸಾವಿಗೀಡಾದ ವಿಮಾನ ಪತನ ದುರಂತದ ಸಮಗ್ರ ತನಿಖೆ ನಡೆಸಲು ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದಾರೆ. </p><p>ತಮ್ಮ ತಂದೆಯ ಸಾವಿಗೆ ಕಾರಣವಾದ ವಿಮಾನ ಅಪಘಾತದ ಹಿಂದಿನ ಸಂಭವನೀಯ ಗಂಭೀರ ಲೋಪಗಳ ಕುರಿತು ಸಮಗ್ರ ತನಿಖೆಯಾಗಬೇಕು. ವಿಮಾನದ ಕಪ್ಪು ಪೆಟ್ಟಿಗೆಯನ್ನು ಸುಲಭವಾಗಿ ನಾಶಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. </p><p>ಜ.28ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಎಸ್ಆರ್ ವೆಂಚರ್ಸ್ನ 'ಲಿಯರ್ಜೆಟ್–45' ವಿಮಾನವು ಪತನಗೊಂಡಿತ್ತು. </p><p>ಮಹಾರಾಷ್ಟ್ರದ ಜನರಿಗೆ ವಿಮಾನ ದುರಂತದ ಸಂಪೂರ್ಣ ಸತ್ಯವನ್ನು ತಿಳಿದುಕೊಳ್ಳುವ ಹಕ್ಕು ಇದೆ. ಪಾರದರ್ಶಕ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ. </p><p>ಇದೇ ಸಂದರ್ಭದಲ್ಲಿ ವಿಎಸ್ಆರ್ ವಿಮಾನಯಾನ ಸಂಸ್ಥೆಯ ಮೇಲೆ ನಿಷೇಧ ಹೇರುವಂತೆಯೂ ಆಗ್ರಹಿಸಿದ್ದಾರೆ. </p><p>ಎನ್ಸಿಪಿ ನಾಯಕ ಪ್ರಫುಲ್ ಪಟೇಲ್ ವಿಮಾನ ದುರಂತಕ್ಕೆ ವಿಮಾನಯಾನ ಸಂಸ್ಥೆಯ ಕಾರಣ ಆಗಿರಬಹುದು. ಪೈಲಟ್ನ ನಿರ್ಲಕ್ಷ್ಯವೂ ಇರಬಹುದು. ಆದರೆ ಎಲ್ಲ ಆಯಾಮಗಳ ತನಿಖೆಯ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ. </p>.ಅಜಿತ್ ಪವಾರ್ ಇದ್ದ ವಿಮಾನ ದುರಂತ: ದತ್ತಾಂಶ ಪಡೆಯಲು ಅಮೆರಿಕದ ಬೆಂಬಲ ಕೋರಿಕೆ.ಅಜಿತ್ ಪವಾರ್ ವಿಮಾನ ದುರಂತ ಪಿತೂರಿಯ ಭಾಗವಾಗಿರಬಹುದು: ರೋಹಿತ್ ಪವಾರ್ ಅನುಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>