<p><strong>ನವದೆಹಲಿ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನ ಅಪಘಾತ ಕುರಿತು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.</p>.<p>ಎನ್ಸಿಪಿ ವರಿಷ್ಠ ಶರದ್ ಪವಾರ್ ಮೊಮ್ಮಗ ಹಾಗೂ ಶಾಸಕರೂ ಆದ ರೋಹಿತ್ ಪವಾರ್ ಅವರು ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಆಗ್ರಹ ಮಾಡಿದ್ದಾರೆ.</p>.<p>ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಖೀಡಾದ ಕುರಿತು ನಡೆಯುತ್ತಿರುವ ತನಿಖೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸುವ ಪತ್ರವನ್ನು ಇದೇ ವೇಳೆ ರಾಹುಲ್ ಗಾಂಧಿ ಅವರಿಗೆ ರೋಹಿತ್ ಪವಾರ್ ಹಸ್ತಾಂತರಿಸಿದರು.</p>.<p>‘ಈ ದಿನ ರೋಹಿತ್ ಪವಾರ್ ನನ್ನನ್ನು ಭೇಟಿ ಮಾಡಿದ್ದರು. ಅಜಿತ್ ಪವಾರ್ ಹಾಗೂ ಇತರರ ಸಾವಿಗೆ ಕಾರಣವಾದ ವಿಮಾನ ಅಪಘಾತ ಕುರಿತು ನಡೆಯುತ್ತಿರುವ ತನಿಖೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು’ ಎಂದು ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಈ ವಿಷಯವು ಅತ್ಯಂತ ಗಂಭೀರವಾಗಿದ್ದರೂ, ಈವರೆಗೆ ಎಫ್ಐಆರ್ ದಾಖಲಿಸಿಲ್ಲ. ಕಾನೂನು ಪಾಲನೆ ಆಗುತ್ತಿಲ್ಲ. ಹೀಗಾಗಿ, ಈ ಘಟನೆ ಕುರಿತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ’ ಎಂದೂ ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನ ಅಪಘಾತ ಕುರಿತು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.</p>.<p>ಎನ್ಸಿಪಿ ವರಿಷ್ಠ ಶರದ್ ಪವಾರ್ ಮೊಮ್ಮಗ ಹಾಗೂ ಶಾಸಕರೂ ಆದ ರೋಹಿತ್ ಪವಾರ್ ಅವರು ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಆಗ್ರಹ ಮಾಡಿದ್ದಾರೆ.</p>.<p>ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಖೀಡಾದ ಕುರಿತು ನಡೆಯುತ್ತಿರುವ ತನಿಖೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸುವ ಪತ್ರವನ್ನು ಇದೇ ವೇಳೆ ರಾಹುಲ್ ಗಾಂಧಿ ಅವರಿಗೆ ರೋಹಿತ್ ಪವಾರ್ ಹಸ್ತಾಂತರಿಸಿದರು.</p>.<p>‘ಈ ದಿನ ರೋಹಿತ್ ಪವಾರ್ ನನ್ನನ್ನು ಭೇಟಿ ಮಾಡಿದ್ದರು. ಅಜಿತ್ ಪವಾರ್ ಹಾಗೂ ಇತರರ ಸಾವಿಗೆ ಕಾರಣವಾದ ವಿಮಾನ ಅಪಘಾತ ಕುರಿತು ನಡೆಯುತ್ತಿರುವ ತನಿಖೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು’ ಎಂದು ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಈ ವಿಷಯವು ಅತ್ಯಂತ ಗಂಭೀರವಾಗಿದ್ದರೂ, ಈವರೆಗೆ ಎಫ್ಐಆರ್ ದಾಖಲಿಸಿಲ್ಲ. ಕಾನೂನು ಪಾಲನೆ ಆಗುತ್ತಿಲ್ಲ. ಹೀಗಾಗಿ, ಈ ಘಟನೆ ಕುರಿತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ’ ಎಂದೂ ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>