<p><strong>ಲಖನೌ:</strong> ‘ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ವೇಳೆ ಇಂತಿಷ್ಟು ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿಯುತ್ತಾರೆ ಎಂಬುದಾಗಿ ಬಿಜೆಪಿ ನಾಯಕರಿಗೆ ಮೊದಲೇ ಹೇಗೆ ಗೊತ್ತಾಗುತ್ತದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಪ್ರಶ್ನಿಸಿದರು.</p><p>ಇದು ಭಾರತೀಯ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ಮತದಾರರ ಕರಡು ಪಟ್ಟಿ ಬಿಡುಗಡೆಗೂ ಮೊದಲೇ ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿರುತ್ತದೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸುಮಾರು ನಾಲ್ಕು ಕೋಟಿ ಮತದಾರರನ್ನು ಅಳಿಸಲಾಗಿದೆ ಎಂದು ಹೇಗೆ ಹೇಳಿದರು’ ಎಂದು ಅಖಿಲೇಶ್ ಪ್ರಶ್ನಿಸಿದರು.</p><p>ಅದೇ ರೀತಿಯ ಕನೌಜಿನ ಮಾಜಿ ಸಂಸದರೊಬ್ಬರು ಜಿಲ್ಲೆಯೊಂದರಲ್ಲಿ ಈಗಾಗಲೇ ಮೂರು ಲಕ್ಷ ಮತಗಳನ್ನು ತೆಗೆಯಲಾಗಿದೆ ಎಂದೂ ಹೇಳಿದ್ದಾರೆ ಎಂದರು. ‘ಬಿಜೆಪಿ ನಾಯಕರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಚುನಾವಣಾ ಆಯೋಗವನ್ನು ನಂಬುವುದು ಹೇಗೆ. ಅದರ ವಿಶ್ವಾಸಾರ್ಹತೆ ಎಲ್ಲಿ ಉಳಿಯುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ‘ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ವೇಳೆ ಇಂತಿಷ್ಟು ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿಯುತ್ತಾರೆ ಎಂಬುದಾಗಿ ಬಿಜೆಪಿ ನಾಯಕರಿಗೆ ಮೊದಲೇ ಹೇಗೆ ಗೊತ್ತಾಗುತ್ತದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಪ್ರಶ್ನಿಸಿದರು.</p><p>ಇದು ಭಾರತೀಯ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ಮತದಾರರ ಕರಡು ಪಟ್ಟಿ ಬಿಡುಗಡೆಗೂ ಮೊದಲೇ ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿರುತ್ತದೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸುಮಾರು ನಾಲ್ಕು ಕೋಟಿ ಮತದಾರರನ್ನು ಅಳಿಸಲಾಗಿದೆ ಎಂದು ಹೇಗೆ ಹೇಳಿದರು’ ಎಂದು ಅಖಿಲೇಶ್ ಪ್ರಶ್ನಿಸಿದರು.</p><p>ಅದೇ ರೀತಿಯ ಕನೌಜಿನ ಮಾಜಿ ಸಂಸದರೊಬ್ಬರು ಜಿಲ್ಲೆಯೊಂದರಲ್ಲಿ ಈಗಾಗಲೇ ಮೂರು ಲಕ್ಷ ಮತಗಳನ್ನು ತೆಗೆಯಲಾಗಿದೆ ಎಂದೂ ಹೇಳಿದ್ದಾರೆ ಎಂದರು. ‘ಬಿಜೆಪಿ ನಾಯಕರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಚುನಾವಣಾ ಆಯೋಗವನ್ನು ನಂಬುವುದು ಹೇಗೆ. ಅದರ ವಿಶ್ವಾಸಾರ್ಹತೆ ಎಲ್ಲಿ ಉಳಿಯುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>