<p><strong>ಆಜಂಗಢ(ಉತ್ತರ ಪ್ರದೇಶ):</strong> ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಆಜಂಗಢದಲ್ಲಿ ಪಕ್ಷದ ನೂತನ ಕಚೇರಿಯನ್ನು ಗುರುವಾರ ಉದ್ಘಾಟಿಸಿದ್ದಾರೆ. ಆ ಮೂಲಕ, ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಪಕ್ಷದ ನೆಲೆಯನ್ನು ಭದ್ರಗೊಳಿಸಲು ಮುಂದಾಗಿದ್ದಾರೆ.</p>.<p>ಈ ವೇಳೆ ಮಾತನಾಡಿದ ಅವರು, ‘ನನ್ನ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಆಜಂಗಢದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರು. ಇಲ್ಲಿನ ಜನರು ಯಾವಾಗಲೂ ನೇತಾಜಿ (ಮುಲಾಯಂ ಸಿಂಗ್) ಅವರೊಂದಿಗೆ ನಿಂತಿದ್ದರು’ ಎಂದು ಭಾವುಕರಾಗಿ ಹೇಳಿದರು.</p>.<p>ಕಾರ್ಯಕ್ರಮದ ನಡುವೆ, ಪಕ್ಷದ ಯುವ ಕಾರ್ಯಕರ್ತರೊಬ್ಬರು ಮುಲಾಯಂ ಸಿಂಗ್ ಯಾದವ್ ಹಾಗೂ ಕಾನ್ಶಿ ರಾಮ್ ಅವರು ಒಟ್ಟಿಗೆ ಇರುವ ಭಾವಚಿತ್ರವನ್ನು ಪ್ರದರ್ಶಿಸಿದ್ದನ್ನು ಪ್ರಸ್ತಾಪಿಸಿದ ಅಖಿಲೇಶ್,‘ಆಗಿನ ದಿನಗಳು ಎಷ್ಟೊಂದು ಮಹತ್ವದ್ದಾಗಿದ್ದವು ಎಂಬುದನ್ನು ಈ ಭಾವಚಿತ್ರ ಹೇಳುತ್ತದೆ. ಆಗ ಎರಡು ಸಿದ್ಧಾಂತಗಳು ಒಟ್ಟಿಗೆ ಸಾಗಿದ್ದವು ಎಂಬುದನ್ನು ಇದು ತೋರಿಸುತ್ತದೆ’ ಎಂದರು.</p>.<p>1990ರ ದಶಕದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಏರುಗತಿಯಲ್ಲಿತ್ತು. ಅದರ ವಿರುದ್ಧ ಹೋರಾಡುವುದಕ್ಕಾಗಿ ದಲಿತ ಸಮುದಾಯದ ಮೇರು ನಾಯಕ ಕಾನ್ಶಿ ರಾಮ್ ಹಾಗೂ ಮುಲಾಯಂ ಸಿಂಗ್ ಮೈತ್ರಿ ಮಾಡಿಕೊಂಡಿದ್ದರು.</p>.<p>ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್,‘ಹಲವು ರಾಜ್ಯಗಳಲ್ಲಿ ಬಿಜೆಪಿ ಬಹು ಮಹಡಿಗಳುಳ್ಳ ಕಚೇರಿಗಳನ್ನು ಹೊಂದಿದೆ. ಅಜಂಗಢದಲ್ಲಿ ಚಿಕ್ಕ ಕಚೇರಿ ಇದೆ. ಈ ಕ್ಷೇತ್ರದಲ್ಲಿ ಗೆಲುವು ಅಸಾಧ್ಯ ಎಂಬುದು ಅವರಿಗೆ ಮನವರಿಕೆಯಾಗಿರುವುದನ್ನು ಇದು ತೋರಿಸುತ್ತದೆ’ ಎಂದರು.</p>.<p>‘ಬಿಹಾರದಲ್ಲಿ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬಿಜೆಪಿಯವರು ಮೀಸಲಾತಿ, ಸಂವಿಧಾನ ಮತ್ತು ಜಾತ್ಯತೀತ ತತ್ವದ ವಿರುದ್ಧ ಮಾತನಾಡಲು ಆರಂಭಿಸುತ್ತಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಾದ ಕೂಡಲೇ ತಮ್ಮ ವರಸೆ ಬದಲಿಸುತ್ತಾರೆ’ ಎಂದು ಟೀಕಿಸಿದರು.</p>.<p>ಆಜಂಗಢ ಲೋಕಸಭಾ ಕ್ಷೇತ್ರ ಹಾಗೂ ಈ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಸಮಾಜವಾದಿ ಪಕ್ಷದ ಹಿಡಿತದಲ್ಲಿವೆ. 2019ರಿಂದ 2024ರ ವರೆಗೆ ಆಜಂಗಢ ಲೋಕಸಭಾ ಕ್ಷೇತ್ರವನ್ನು ಅಖಿಲೇಶ್ ಪ್ರತಿನಿಧಿಸುತ್ತಿದ್ದರು. ಸದ್ಯ, ಈ ಕ್ಷೇತ್ರವನ್ನು ಅವರ ಸಂಬಂಧಿ ಧರ್ಮೇಂದ್ರ ಯಾದವ್ ಪ್ರತಿನಿಧಿಸುತ್ತಿದ್ಧಾರೆ. ನೂತನ ಕಚೇರಿಗೆ ‘ಪಿಡಿಎ ಭವನ’ ಎಂದು ಹೆಸರಿಡಲಾಗಿದೆ.</p>.<div><blockquote>ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಬಿಜೆಪಿ ನಾಯಕರು ಮೀಸಲಾತಿ ಸಮಾಜವಾದ ಮತ್ತು ಜಾತ್ಯತೀತ ತತ್ವಗಳನ್ನು ಗುರಿಯಾಗಿಸುವ ಕಾರ್ಯತಂತ್ರದ ಮೊರೆ ಹೋಗುತ್ತಾರೆ</blockquote><span class="attribution">ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಜಂಗಢ(ಉತ್ತರ ಪ್ರದೇಶ):</strong> ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಆಜಂಗಢದಲ್ಲಿ ಪಕ್ಷದ ನೂತನ ಕಚೇರಿಯನ್ನು ಗುರುವಾರ ಉದ್ಘಾಟಿಸಿದ್ದಾರೆ. ಆ ಮೂಲಕ, ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಪಕ್ಷದ ನೆಲೆಯನ್ನು ಭದ್ರಗೊಳಿಸಲು ಮುಂದಾಗಿದ್ದಾರೆ.</p>.<p>ಈ ವೇಳೆ ಮಾತನಾಡಿದ ಅವರು, ‘ನನ್ನ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಆಜಂಗಢದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರು. ಇಲ್ಲಿನ ಜನರು ಯಾವಾಗಲೂ ನೇತಾಜಿ (ಮುಲಾಯಂ ಸಿಂಗ್) ಅವರೊಂದಿಗೆ ನಿಂತಿದ್ದರು’ ಎಂದು ಭಾವುಕರಾಗಿ ಹೇಳಿದರು.</p>.<p>ಕಾರ್ಯಕ್ರಮದ ನಡುವೆ, ಪಕ್ಷದ ಯುವ ಕಾರ್ಯಕರ್ತರೊಬ್ಬರು ಮುಲಾಯಂ ಸಿಂಗ್ ಯಾದವ್ ಹಾಗೂ ಕಾನ್ಶಿ ರಾಮ್ ಅವರು ಒಟ್ಟಿಗೆ ಇರುವ ಭಾವಚಿತ್ರವನ್ನು ಪ್ರದರ್ಶಿಸಿದ್ದನ್ನು ಪ್ರಸ್ತಾಪಿಸಿದ ಅಖಿಲೇಶ್,‘ಆಗಿನ ದಿನಗಳು ಎಷ್ಟೊಂದು ಮಹತ್ವದ್ದಾಗಿದ್ದವು ಎಂಬುದನ್ನು ಈ ಭಾವಚಿತ್ರ ಹೇಳುತ್ತದೆ. ಆಗ ಎರಡು ಸಿದ್ಧಾಂತಗಳು ಒಟ್ಟಿಗೆ ಸಾಗಿದ್ದವು ಎಂಬುದನ್ನು ಇದು ತೋರಿಸುತ್ತದೆ’ ಎಂದರು.</p>.<p>1990ರ ದಶಕದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಏರುಗತಿಯಲ್ಲಿತ್ತು. ಅದರ ವಿರುದ್ಧ ಹೋರಾಡುವುದಕ್ಕಾಗಿ ದಲಿತ ಸಮುದಾಯದ ಮೇರು ನಾಯಕ ಕಾನ್ಶಿ ರಾಮ್ ಹಾಗೂ ಮುಲಾಯಂ ಸಿಂಗ್ ಮೈತ್ರಿ ಮಾಡಿಕೊಂಡಿದ್ದರು.</p>.<p>ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್,‘ಹಲವು ರಾಜ್ಯಗಳಲ್ಲಿ ಬಿಜೆಪಿ ಬಹು ಮಹಡಿಗಳುಳ್ಳ ಕಚೇರಿಗಳನ್ನು ಹೊಂದಿದೆ. ಅಜಂಗಢದಲ್ಲಿ ಚಿಕ್ಕ ಕಚೇರಿ ಇದೆ. ಈ ಕ್ಷೇತ್ರದಲ್ಲಿ ಗೆಲುವು ಅಸಾಧ್ಯ ಎಂಬುದು ಅವರಿಗೆ ಮನವರಿಕೆಯಾಗಿರುವುದನ್ನು ಇದು ತೋರಿಸುತ್ತದೆ’ ಎಂದರು.</p>.<p>‘ಬಿಹಾರದಲ್ಲಿ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬಿಜೆಪಿಯವರು ಮೀಸಲಾತಿ, ಸಂವಿಧಾನ ಮತ್ತು ಜಾತ್ಯತೀತ ತತ್ವದ ವಿರುದ್ಧ ಮಾತನಾಡಲು ಆರಂಭಿಸುತ್ತಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಾದ ಕೂಡಲೇ ತಮ್ಮ ವರಸೆ ಬದಲಿಸುತ್ತಾರೆ’ ಎಂದು ಟೀಕಿಸಿದರು.</p>.<p>ಆಜಂಗಢ ಲೋಕಸಭಾ ಕ್ಷೇತ್ರ ಹಾಗೂ ಈ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಸಮಾಜವಾದಿ ಪಕ್ಷದ ಹಿಡಿತದಲ್ಲಿವೆ. 2019ರಿಂದ 2024ರ ವರೆಗೆ ಆಜಂಗಢ ಲೋಕಸಭಾ ಕ್ಷೇತ್ರವನ್ನು ಅಖಿಲೇಶ್ ಪ್ರತಿನಿಧಿಸುತ್ತಿದ್ದರು. ಸದ್ಯ, ಈ ಕ್ಷೇತ್ರವನ್ನು ಅವರ ಸಂಬಂಧಿ ಧರ್ಮೇಂದ್ರ ಯಾದವ್ ಪ್ರತಿನಿಧಿಸುತ್ತಿದ್ಧಾರೆ. ನೂತನ ಕಚೇರಿಗೆ ‘ಪಿಡಿಎ ಭವನ’ ಎಂದು ಹೆಸರಿಡಲಾಗಿದೆ.</p>.<div><blockquote>ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಬಿಜೆಪಿ ನಾಯಕರು ಮೀಸಲಾತಿ ಸಮಾಜವಾದ ಮತ್ತು ಜಾತ್ಯತೀತ ತತ್ವಗಳನ್ನು ಗುರಿಯಾಗಿಸುವ ಕಾರ್ಯತಂತ್ರದ ಮೊರೆ ಹೋಗುತ್ತಾರೆ</blockquote><span class="attribution">ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>